Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...