Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...