Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...