Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...