Homeಕರ್ನಾಟಕವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು - ಶಿವಸುಂದರ್

ವಕ್ಫ್‌ ತಿದ್ದುಪಡಿ ವಿರುದ್ಧ ಶಾಹೀನ್ ಬಾಗ್, ರೈತ ಹೋರಾಟದ ಮಾದರಿಯ ಚಳವಳಿ ಕಟ್ಟಬೇಕು – ಶಿವಸುಂದರ್

- Advertisement -
- Advertisement -

ಹೋರಾಟದ ಕಾರಣಕ್ಕೆ, ಬಿಜೆಪಿ ಆಡಳಿತ ನಡೆಸುವ ರಾಜ್ಯಗಳು ಸೇರಿದಂತೆ ದೇಶದ ಹಲವು ರಾಜ್ಯಗಳು ಈಗಲೂ ಸಿಎಎ ಕಾಯ್ದೆಯನ್ನು ಜಾರಿ ಮಾಡಿಲ್ಲ, ಆದ್ದರಿಂದ ಸಿಎಎ ವಿರೋಧಿ ಶಾಹೀನ್ ಬಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ವಕ್ಫ್‌ ತಿದ್ದುಪಡಿ ವಿರೋಧಿ ಹೋರಾಟ ಕಟ್ಟಬೇಕು ಎಂದು ಚಿಂತಕ ಶಿವಸುಂದರ್ ಅವರು ಹೇಳಿದರು. ಕರ್ನಾಟಕ ಮುಸ್ಲಿಂ ಮತ್ತು ಬ್ಯಾರಿ ಸಂಘಟನೆಗಳ ಒಕ್ಕೂಟಗಳ ಅಡಿಯಲ್ಲಿ ಕೇಂದ್ರ ಸರ್ಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ವಕ್ಫ್‌ ತಿದ್ದುಪಡಿ ವಿರುದ್ಧ

ಕೇಂದ್ರ ಸರ್ಕಾರ ಮಾಡುತ್ತಿರುವ ವಕ್ಫ್ ತಿದ್ದುಪಡಿ ವಿರುದ್ಧ ಹೋರಾಟ ಕಟ್ಟಬೇಕಿದೆ ನಿಜವಾದರೂ, ಅದಕ್ಕೂ ಮೊದಲು ನಾವು ವಕ್ಫ್ ಬಗ್ಗೆ ತಿಳಿದು, ಹೋರಾಟದಲ್ಲಿ ಮುಸ್ಲಿಮೇತರರನ್ನು ಇದರಲ್ಲಿ ಒಳಗೊಳ್ಳಿಸಬೇಕು ಎಂದು ಅವರು ಹೇಳಿದರು. “ಬಿಜೆಪಿ ಮುಸ್ಲಿಮರ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಈ ಹಿಂದಿನಿಂದಲೂ ಮುಸ್ಲಿಮರು ಎಂದರೆ ಹೊರಗಿನವರು ಮತ್ತು ದಾಳಿಕೋರರು ಎಂಬಂತೆ ಬಿಂಬಿಸಿದ್ದರು. ಈಗ ವಕ್ಫ್ ಮೂಲಕ ಅದನ್ನು ಮುಂದುವರೆಸುತ್ತಾ ಇದ್ದಾರೆ” ಎಂದು ಶಿವಸುಂದರ್ ಹೇಳಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಮಾರ್ಚ್ 10ಕ್ಕೆ ಸಂಸತ್ತಿನಲ್ಲಿ ಜೆಪಿಸಿ ಕೊಟ್ಟ ವರದಿಯನ್ನು ಮಂಡಿಸಲು ಸರ್ಕಾರ ಪ್ರಯತ್ನಿಸುತ್ತಾ ಇದೆ. ಯಾಕೆಂದರೆ ಮುಸ್ಲಿಮರು ಆಗ ರಂಜಾನ್ ಉಪವಾಸ ಆಚರಣೆ ಮಾಡುವುದರಿಂದ ಪ್ರತಿಭಟನೆ ಕಡಿಮೆ ಇರಬಹುದು ಎಂಬುದು ಅವರ ಲೆಕ್ಕಾಚಾರ. ಆದರೆ ನಾವು ಅವರ ಲೆಕ್ಕಾಚಾರವನ್ನು ತಲೆಕೆಳಗು ಮಾಡಬೇಕು.‌ ವಕ್ಫ್ ತಿದ್ದುಪಡಿ ಮಾಡುವುದು ಮುಸ್ಲಿಮರಿಗೆ ಮಾತ್ರ ಮಾಡುತ್ತಿರುವ ಅನ್ಯಾಯ ಮಾತ್ರವಲ್ಲ, ಜೊತೆಗೆ ಮುಸ್ಲಿಮರ ಮೂಲಕ ಅಲ್ಪಸಂಖ್ಯಾತರ ವಿರುದ್ಧದ ದಬ್ಬಾಳಿಕೆಯ ಪ್ರಾರಂಭ ಇದಾಗಿದೆ” ಎಂದು ಅವರು ಪ್ರತಿಪಾದಿಸಿದರು.

“ವಕ್ಫ್‌ ಎಂದರೆ, ಭಗವಂತನ ಒಡೆತನದಲ್ಲಿ ಸಮುದಾಯದ ಸೇವೆಗೆ ತಮ್ಮ ಆಸ್ತಿಯನ್ನು ಬಿಟ್ಟು ಕೊಡುವುದಾಗಿದೆ. ಇಂತಹ ಉದಾತ್ತ ಮೌಲ್ಯಗಳನ್ನು ಸಾವಿರ ವರ್ಷಗಳಿಂದ ಮುಸ್ಲಿಮರು ಆಚರಿಸುತ್ತಲೇ ಬಂದಿದ್ದಾರೆ. ಭಾರತದಲ್ಲಿ ಮುಸ್ಲಿಮೇತರ ರಾಜರು, ಶ್ರೀಮಂತರು ಕೂಡಾ ವಕ್ಫ್ ಆಸ್ತಿಗಳನ್ನು ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ, ಧರ್ಮದ ಹೆಸರಿನಲ್ಲ ದಾನ ದತ್ತಿಗಳು ಹಿಂದಿನಿಂದಲೂ ನಡೆದುಕೊಂಡೆ ಬಂದಿದೆ. ಆದ್ದರಿಂದ, ವಕ್ಫ್ ವಕ್ಫ್ ತಿದ್ದುಪಡಿ ವಿವಾದವು ಕೇವಲ ಮುಸ್ಲಿಮರ ಮಾತ್ರ ಸಮಸ್ಯೆ ಅಲ್ಲ. ಅದು ಎಲ್ಲರ ಸಮಸ್ಯೆ” ಎಂದು ಅವರು ಹೇಳಿದರು.

“ಈ ದತ್ತಿಯನ್ನು ಅವರು ಬಿಟ್ಟು ಕೊಟ್ಟ ಉದ್ದೇಶಗಳಿಗಾಗಿ ವಿನಿಯೋಗಿಸಲಾಗುತ್ತದೆಯೆ ಎಂದು ಪರಿಶೀಲಿಸಲು ವಕ್ಫ್ ಬೋರ್ಡ್ ಅನ್ನು ಬ್ರಿಟಿಷರು ರೂಪಿಸಿದರು. ಸಮುದಾಯದ ಸೇವೆಗಾಗಿ ವಕ್ಫ್ ಕೊಡಲು, ಅದನ್ನು ನಿರ್ವಹಿಸಲು ನಮಗೆ ಸಂವಿಧಾನ ಹಕ್ಕು ಕೊಟ್ಟಿದೆ. ಆದರೆ ವಕ್ಫ್ ಆಸ್ತಿ ರಕ್ಷಣೆ ಮಾಡುತ್ತೇವೆ ಎಂದು ಬಿಜೆಪಿ ವಕ್ಫ್ ಬೋರ್ಡ್‌ ವಿಚಾರವನ್ನು ಕೋಮುವಾದಿಕರಣ ಮಾಡುದ ಉದ್ದೇಶದಿಂದ ಅದಕ್ಕೆ ತಿದ್ದುಪಡಿ ಮಾಡುತ್ತಿದೆ” ಎಂದರು.

“ವಕ್ಫ್ ಕಾಯ್ದೆಗೆ 2013ರ ವರೆಗೆ ಬಂದ ಎಲ್ಲಾ ತಿದ್ದುಪಡಿಗಳು ವಕ್ಫ್ ಆಸ್ತಿಗಳನ್ನು ಉಳಿಸಲು, ಅದನ್ನು ಸರಿಯಾಗಿ ನಡೆಸಿಕೊಳ್ಳಲು ಅಥವಾ ಅದರಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮಾಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ವಕ್ಫ್ ಉಳಿಸುತ್ತೇವೆ ಎಂದು ನಾಶ ಮಾಡಲು ಹೊರಟಿದೆ. ಸಿಎಎ ಹೋರಾಟದ ಕಾರಣಕ್ಕೆ ಹಲವಾರು ರಾಜ್ಯಗಳು  ಸಿಎಎ ಜಾರಿ ಮಾಡಿಲ್ಲ. ಅದರಂತೆ ಸಿಎಎ ವಿರೋಧಿ ಶಹೀನ್ ಭಾಗ್ ಮತ್ತು ರೈತರ ಹೋರಾಟದ ಮಾದರಿಯಲ್ಲಿ ಹೋರಾಟ ಕಟ್ಟಬೇಕು” ಎಂದು ಶಿವಸುಂದರ್ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ್ತಿ ಅಖಿಲಾ ವಿದ್ಯಾಸಂದ್ರ ಮಾತನಾಡಿ, “ವಕ್ಫ್ ಬೋರ್ಡ್‌ನಲ್ಲಿ ಚುನಾವಣೆ ಬೇಡ ಎಂದು ಕೇಂದ್ರ ಸರ್ಕಾರ ಹೇಳುತ್ತಾ ಇದೆ. ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುವುದು ಸರಿಯಲ್ಲ. ವಕ್ಫ್‌ನಲ್ಲಿ ಈಗ ಎಂತಹ ಮುಸ್ಲಿಮೇತರ ಸದಸ್ಯರನ್ನು ತರುತ್ತಿದೆ ಎಂಬ ವಿಚಾರವಿದೆ. ವಕ್ಫ್ ಆಸ್ತಿ ಕಬಳಿಸಿದವರಿಗೆ ನೀಡುವ ಶಿಕ್ಷೆಯನ್ನು ಇಳಿಸಲಾಗಿದೆ. ಹಾಗಾದರೆ ಈ ಕಾಯ್ದೆ ವಕ್ಫ್ ಆಸ್ತಿಗಳನ್ನು ಉಳಿಸಲೆ ಅಥವಾ ನಾಶ ಮಾಡಲೆ” ಎಂದು ಅವರು ಕೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ಸಂಭಾಲ್‌ ಮಸೀದಿ ಸ್ವಚ್ಛಗೊಳಿಸುವಂತೆ ಪುರಾತತ್ವ ಇಲಾಖೆಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...