Homeಮುಖಪುಟವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ...

ವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ ಸೂರ್ಯ, ವೀರೇಂದ್ರ ಹೆಗ್ಗಡೆಗೆ ಸ್ಥಾನ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯ ಪರಿಶೀಲನೆಗೆ ಶುಕ್ರವಾರ ಕೇಂದ್ರ ಸರ್ಕಾರ 31 ಸದಸ್ಯರ ಜಂಟಿ ಸದನ ಸಮಿತಿ (ಜೆಪಿಸಿ) ರಚಿಸಿದೆ. ಜೆಪಿಸಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಪ್ರಸ್ತಾವನೆಯನ್ನು ಉಭಯ ಸದನಗಳು ಅಂಗೀಕರಿಸಿವೆ.

ಅಸ್ತಿತ್ವದಲ್ಲಿರುವ 1995ರ ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ತಿದ್ದುಪಡಿ ಮಸೂದೆ ಪ್ರಸ್ತಾಪಿಸಿದ್ದು, ಅವುಗಳ ಬಗ್ಗೆ ಸದನ ಸಮಿತಿ ಪರಿಶೀಲನೆ ನಡೆಸಲಿದೆ.

ಸಂಸತ್ತಿನ ಮುಂದಿನ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಜಂಟಿ ಸದನ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ. ಸಮಿತಿಯ 21 ಸದಸ್ಯರನ್ನು ಲೋಕಸಭೆಯಿಂದ ಮತ್ತು ಉಳಿದವರು ರಾಜ್ಯಸಭೆಯಿಂದ ಆಯ್ಕೆ ಮಾಡಲಾಗಿದೆ.

ಲೋಕಸಭೆಯ ಸಂಸದರಾದ ಜಗದಾಂಬಿಕಾ ಪಾಲ್, ಡಾ ನಿಶಿಕಾಂತ್ ದುಬೆ, ತೇಜಸ್ವಿ ಸೂರ್ಯ, ಅಪರಾಜಿತಾ ಸಾರಂಗಿ, ಡಾ ಸಂಜಯ್ ಜೈಸ್ವಾಲ್, ದಿಲೀಪ್ ಸೈಕಿಯಾ, ಅಭಿಜಿತ್ ಗಂಗೋಪಾದಾಯ, ಡಿ ಕೆ ಅರುಣಾ, ಗೌರವ್ ಗೊಗೊಯ್, ಇಮ್ರಾನ್ ಮಸೂದ್, ಡಾ ಮೊಹಮ್ಮದ್ ಜಾವೇದ್, ಮೊಹಿಬ್ಬುಲ್ಲಾ, ಕಲ್ಯಾಣ್ ಬ್ಯಾನರ್ಜಿ, ಎ ರಾಜಾ, ಲಾವು ಶ್ರೀಕೃಷ್ಣ ದೇವರಾಯಲು, ದಿಲೇಶ್ವರ ಕಮೈತ್, ಅರವಿಂದ್ ಸಾವಂತ್, ಮಹ್ತ್ರೆ ಬಲ್ಯ ಮಾಮ ಸುರೇಶ್ ಗೋಪಿನಾಥ್, ನರೇಶ್ ಗಣಪತ್ ಮ್ಹಾಸ್ಕೆ, ಅರುಣ್ ಭಾರತಿ ಮತ್ತು ಅಸಾದುದ್ದೀನ್ ಓವೈಸಿ ಸಮಿಯಲ್ಲಿ ಇದ್ದಾರೆ.

ರಾಜ್ಯಸಭೆಯಿಂದ ಬ್ರಿಜ್ ಲಾಲ್, ಮೇಧಾ ವಿಶ್ರಮ್ ಕುಲಕರ್ಣಿ, ಗುಲಾಮ್ ಅಲಿ, ರಾಧಾ ಮೋಹನ್ ದಾಸ್ ಅಗರವಾಲ್ (ಎಲ್ಲರೂ ಬಿಜೆಪಿ) ಸೈಯದ್ ನಾಸೀರ್ ಹುಸೇನ್ (ಕಾಂಗ್ರೆಸ್), ಮೊಹಮ್ಮದ್ ನದಿಮುಲ್ ಹಕ್ (ಟಿಎಂಸಿ), ವಿ ವಿಜಯಸಾಯಿ ರೆಡ್ಡಿ (ವೈಎಸ್‌ಆರ್‌ಸಿಪಿ) , ಎಂ ಮೊಹಮ್ಮದ್ ಅಬ್ದುಲ್ಲಾ (ಡಿಎಂಕೆ), ಸಂಜಯ್ ಸಿಂಗ್ (ಎಎಪಿ) ಮತ್ತು ನಾಮನಿರ್ದೇಶಿತ ಸದಸ್ಯರಾದ ಧರ್ಮಸ್ಥಳದ ಡಾ. ವಿರೇಂದ್ರ ಹೆಗ್ಗಡೆ ಸಮಿತಿಯ ಸದ್ಯಸರಾಗಿದ್ದಾರೆ.

ಗುರುವಾರ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಲಾಗಿದ್ದು, ತೀವ್ರ ಚರ್ಚೆಯ ನಂತರ ಜಂಟಿ ಸದನ ಸಮಿತಿಗೆ ಕಳುಹಿಸಲಾಗಿದೆ. ಪ್ರಸ್ತಾವಿತ ಕಾನೂನು ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

ಮುಸ್ಲಿಮರನ್ನು ಗುರಿಯಾಗಿಸಿ ಮಸೂದೆಯನ್ನು ರೂಪಿಸಲಾಗಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ : ಪಠ್ಯ ಪುಸ್ತಕದಿಂದ ‘ಸಂವಿಧಾನದ ಪ್ರಸ್ತಾವನೆ’ ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...