Homeಮುಖಪುಟವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ...

ವಕ್ಫ್ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸದನ ಸಮಿತಿ ರಚನೆ : ಓವೈಸಿ, ತೇಜಸ್ವಿ ಸೂರ್ಯ, ವೀರೇಂದ್ರ ಹೆಗ್ಗಡೆಗೆ ಸ್ಥಾನ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯ ಪರಿಶೀಲನೆಗೆ ಶುಕ್ರವಾರ ಕೇಂದ್ರ ಸರ್ಕಾರ 31 ಸದಸ್ಯರ ಜಂಟಿ ಸದನ ಸಮಿತಿ (ಜೆಪಿಸಿ) ರಚಿಸಿದೆ. ಜೆಪಿಸಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಪ್ರಸ್ತಾವನೆಯನ್ನು ಉಭಯ ಸದನಗಳು ಅಂಗೀಕರಿಸಿವೆ.

ಅಸ್ತಿತ್ವದಲ್ಲಿರುವ 1995ರ ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ತಿದ್ದುಪಡಿ ಮಸೂದೆ ಪ್ರಸ್ತಾಪಿಸಿದ್ದು, ಅವುಗಳ ಬಗ್ಗೆ ಸದನ ಸಮಿತಿ ಪರಿಶೀಲನೆ ನಡೆಸಲಿದೆ.

ಸಂಸತ್ತಿನ ಮುಂದಿನ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಜಂಟಿ ಸದನ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ. ಸಮಿತಿಯ 21 ಸದಸ್ಯರನ್ನು ಲೋಕಸಭೆಯಿಂದ ಮತ್ತು ಉಳಿದವರು ರಾಜ್ಯಸಭೆಯಿಂದ ಆಯ್ಕೆ ಮಾಡಲಾಗಿದೆ.

ಲೋಕಸಭೆಯ ಸಂಸದರಾದ ಜಗದಾಂಬಿಕಾ ಪಾಲ್, ಡಾ ನಿಶಿಕಾಂತ್ ದುಬೆ, ತೇಜಸ್ವಿ ಸೂರ್ಯ, ಅಪರಾಜಿತಾ ಸಾರಂಗಿ, ಡಾ ಸಂಜಯ್ ಜೈಸ್ವಾಲ್, ದಿಲೀಪ್ ಸೈಕಿಯಾ, ಅಭಿಜಿತ್ ಗಂಗೋಪಾದಾಯ, ಡಿ ಕೆ ಅರುಣಾ, ಗೌರವ್ ಗೊಗೊಯ್, ಇಮ್ರಾನ್ ಮಸೂದ್, ಡಾ ಮೊಹಮ್ಮದ್ ಜಾವೇದ್, ಮೊಹಿಬ್ಬುಲ್ಲಾ, ಕಲ್ಯಾಣ್ ಬ್ಯಾನರ್ಜಿ, ಎ ರಾಜಾ, ಲಾವು ಶ್ರೀಕೃಷ್ಣ ದೇವರಾಯಲು, ದಿಲೇಶ್ವರ ಕಮೈತ್, ಅರವಿಂದ್ ಸಾವಂತ್, ಮಹ್ತ್ರೆ ಬಲ್ಯ ಮಾಮ ಸುರೇಶ್ ಗೋಪಿನಾಥ್, ನರೇಶ್ ಗಣಪತ್ ಮ್ಹಾಸ್ಕೆ, ಅರುಣ್ ಭಾರತಿ ಮತ್ತು ಅಸಾದುದ್ದೀನ್ ಓವೈಸಿ ಸಮಿಯಲ್ಲಿ ಇದ್ದಾರೆ.

ರಾಜ್ಯಸಭೆಯಿಂದ ಬ್ರಿಜ್ ಲಾಲ್, ಮೇಧಾ ವಿಶ್ರಮ್ ಕುಲಕರ್ಣಿ, ಗುಲಾಮ್ ಅಲಿ, ರಾಧಾ ಮೋಹನ್ ದಾಸ್ ಅಗರವಾಲ್ (ಎಲ್ಲರೂ ಬಿಜೆಪಿ) ಸೈಯದ್ ನಾಸೀರ್ ಹುಸೇನ್ (ಕಾಂಗ್ರೆಸ್), ಮೊಹಮ್ಮದ್ ನದಿಮುಲ್ ಹಕ್ (ಟಿಎಂಸಿ), ವಿ ವಿಜಯಸಾಯಿ ರೆಡ್ಡಿ (ವೈಎಸ್‌ಆರ್‌ಸಿಪಿ) , ಎಂ ಮೊಹಮ್ಮದ್ ಅಬ್ದುಲ್ಲಾ (ಡಿಎಂಕೆ), ಸಂಜಯ್ ಸಿಂಗ್ (ಎಎಪಿ) ಮತ್ತು ನಾಮನಿರ್ದೇಶಿತ ಸದಸ್ಯರಾದ ಧರ್ಮಸ್ಥಳದ ಡಾ. ವಿರೇಂದ್ರ ಹೆಗ್ಗಡೆ ಸಮಿತಿಯ ಸದ್ಯಸರಾಗಿದ್ದಾರೆ.

ಗುರುವಾರ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಲಾಗಿದ್ದು, ತೀವ್ರ ಚರ್ಚೆಯ ನಂತರ ಜಂಟಿ ಸದನ ಸಮಿತಿಗೆ ಕಳುಹಿಸಲಾಗಿದೆ. ಪ್ರಸ್ತಾವಿತ ಕಾನೂನು ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.

ಮುಸ್ಲಿಮರನ್ನು ಗುರಿಯಾಗಿಸಿ ಮಸೂದೆಯನ್ನು ರೂಪಿಸಲಾಗಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ : ಪಠ್ಯ ಪುಸ್ತಕದಿಂದ ‘ಸಂವಿಧಾನದ ಪ್ರಸ್ತಾವನೆ’ ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...