Homeಮುಖಪುಟವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ 'ಲಜ್ಜೆಗೆಟ್ಟ ದಾಳಿ': ಸೋನಿಯಾ ಗಾಂಧಿ

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸಂವಿಧಾನದ ಮೇಲಿನ “ಲಜ್ಜೆಗೆಟ್ಟ ದಾಳಿ” ಎಂದು ಕರೆದಿದ್ದು, ಈ ಮಸೂದೆ ಸಮಾಜವನ್ನು “ಶಾಶ್ವತ ಧ್ರುವೀಕರಣ” ಸ್ಥಿತಿಯಲ್ಲಿಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಲೋಕಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಸೂದೆಯನ್ನು “ಬಲವಂತವಾಗಿ” ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

ನವದೆಹಲಿಯ ಸಂವಿದಾನ್ ಸದನ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯು ಸಂವಿಧಾನದ ಮತ್ತೊಂದು ಬುಡಮೇಲು ಮಾಡುವ ಮಸೂದೆಯಾಗಿದ್ದು, ಪಕ್ಷವು ಅದನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

“ಶಿಕ್ಷಣ, ನಾಗರಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳು, ನಮ್ಮ ಒಕ್ಕೂಟ ರಚನೆ ಅಥವಾ ಚುನಾವಣೆಗಳನ್ನು ನಡೆಸುವುದಿರಲಿ, ಮೋದಿ ಸರ್ಕಾರವು ದೇಶವನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಈ ವೇಳೆ ನಮ್ಮ ಸಂವಿಧಾನ ಕಾಗದದ ಮೇಲಷ್ಟೆ ಉಳಿಯುತ್ತದೆ. ಅದನ್ನು ಸಹ ಕೆಡವುವುದು ಅವರ ಉದ್ದೇಶ ಎಂದು ನಮಗೆ ತಿಳಿದಿದೆ” ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಪಕ್ಷದ ಸಂಸದರು ಸಭೆಯಲ್ಲಿ ಹಾಜರಿದ್ದರು.

2004-2014ರ ಅವಧಿಯಲ್ಲಿ ಪ್ರಧಾನಿ ತೆಗೆದುಕೊಂಡ ಹಲವಾರು ಉಪಕ್ರಮಗಳನ್ನು ತಮ್ಮದೇ ಆದ ವೈಯಕ್ತಿಕ ಸಾಧನೆಗಳೆಂದು ಮರುಬ್ರಾಂಡ್ ಮಾಡಿ, ಮರುಪ್ಯಾಕ್ ಮಾಡಿ ಮತ್ತು ಮಾರುಕಟ್ಟೆ ಮಾಡಿದ್ದಾರೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಈ ಎಲ್ಲವನ್ನೂ ನಮ್ಮದೇ ಆದ ಸಾರ್ವಜನಿಕ ಸಂಪರ್ಕ ಚಟುವಟಿಕೆಗಳ ಮೂಲಕ ಬಹಿರಂಗಪಡಿಸಬೇಕಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಎರಡೂ ಸದನಗಳ ಕಾರ್ಯನಿರ್ವಹಣೆಯ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷವು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಅವಕಾಶ ನೀಡದಂತೆ ಆಡಳಿತರೂಢ ಸಂಸದರು ಆಗಾಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸದಸ್ಯರು ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರಗಳನ್ನು “ಸಂಪೂರ್ಣ ಸುಳ್ಳುಗಳೊಂದಿಗೆ” ಆಕ್ರಮಣಕಾರಿಯಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ ಅವರು, ಪಕ್ಷದ ಸಂಸದರು ಕೂಡಾ ಅವರಿಗೆ ಸಮಾನವಾಗಿ ಆಕ್ರಮಣಕಾರಿಯಾಗಿರಲು ಮತ್ತು ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ವೈಫಲ್ಯಗಳು ಮತ್ತು ದುರಾಡಳಿತವನ್ನು ಎತ್ತುವಂತೆ ಒತ್ತಾಯಿಸಿದ್ದಾರೆ.

12 ಗಂಟೆಗಳ ಚರ್ಚೆಯ ನಂತರ ಲೋಕಸಭೆಯು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಮಧ್ಯರಾತ್ರಿಯ ನಂತರ ಅಂಗೀಕರಿಸಿತು. ವಿರೋಧ ಪಕ್ಷದ ಸದಸ್ಯರು ಮಂಡಿಸಿದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತಗಳಿಂದ ತಿರಸ್ಕರಿಸಿದ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆ ಪರವಾಗಿ 288 ಮತ್ತು ವಿರುದ್ಧ 232 ಮತಗಳು ಬಿದ್ದ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆಯು ಗುರುವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ವಕ್ಫ್ ತಿದ್ದುಪಡಿ ಮಸೂದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...