Homeಮುಖಪುಟವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ 'ಲಜ್ಜೆಗೆಟ್ಟ ದಾಳಿ': ಸೋನಿಯಾ ಗಾಂಧಿ

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸಂವಿಧಾನದ ಮೇಲಿನ “ಲಜ್ಜೆಗೆಟ್ಟ ದಾಳಿ” ಎಂದು ಕರೆದಿದ್ದು, ಈ ಮಸೂದೆ ಸಮಾಜವನ್ನು “ಶಾಶ್ವತ ಧ್ರುವೀಕರಣ” ಸ್ಥಿತಿಯಲ್ಲಿಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಲೋಕಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಸೂದೆಯನ್ನು “ಬಲವಂತವಾಗಿ” ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

ನವದೆಹಲಿಯ ಸಂವಿದಾನ್ ಸದನ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯು ಸಂವಿಧಾನದ ಮತ್ತೊಂದು ಬುಡಮೇಲು ಮಾಡುವ ಮಸೂದೆಯಾಗಿದ್ದು, ಪಕ್ಷವು ಅದನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

“ಶಿಕ್ಷಣ, ನಾಗರಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳು, ನಮ್ಮ ಒಕ್ಕೂಟ ರಚನೆ ಅಥವಾ ಚುನಾವಣೆಗಳನ್ನು ನಡೆಸುವುದಿರಲಿ, ಮೋದಿ ಸರ್ಕಾರವು ದೇಶವನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಈ ವೇಳೆ ನಮ್ಮ ಸಂವಿಧಾನ ಕಾಗದದ ಮೇಲಷ್ಟೆ ಉಳಿಯುತ್ತದೆ. ಅದನ್ನು ಸಹ ಕೆಡವುವುದು ಅವರ ಉದ್ದೇಶ ಎಂದು ನಮಗೆ ತಿಳಿದಿದೆ” ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಪಕ್ಷದ ಸಂಸದರು ಸಭೆಯಲ್ಲಿ ಹಾಜರಿದ್ದರು.

2004-2014ರ ಅವಧಿಯಲ್ಲಿ ಪ್ರಧಾನಿ ತೆಗೆದುಕೊಂಡ ಹಲವಾರು ಉಪಕ್ರಮಗಳನ್ನು ತಮ್ಮದೇ ಆದ ವೈಯಕ್ತಿಕ ಸಾಧನೆಗಳೆಂದು ಮರುಬ್ರಾಂಡ್ ಮಾಡಿ, ಮರುಪ್ಯಾಕ್ ಮಾಡಿ ಮತ್ತು ಮಾರುಕಟ್ಟೆ ಮಾಡಿದ್ದಾರೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಈ ಎಲ್ಲವನ್ನೂ ನಮ್ಮದೇ ಆದ ಸಾರ್ವಜನಿಕ ಸಂಪರ್ಕ ಚಟುವಟಿಕೆಗಳ ಮೂಲಕ ಬಹಿರಂಗಪಡಿಸಬೇಕಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಎರಡೂ ಸದನಗಳ ಕಾರ್ಯನಿರ್ವಹಣೆಯ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷವು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಅವಕಾಶ ನೀಡದಂತೆ ಆಡಳಿತರೂಢ ಸಂಸದರು ಆಗಾಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸದಸ್ಯರು ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರಗಳನ್ನು “ಸಂಪೂರ್ಣ ಸುಳ್ಳುಗಳೊಂದಿಗೆ” ಆಕ್ರಮಣಕಾರಿಯಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ ಅವರು, ಪಕ್ಷದ ಸಂಸದರು ಕೂಡಾ ಅವರಿಗೆ ಸಮಾನವಾಗಿ ಆಕ್ರಮಣಕಾರಿಯಾಗಿರಲು ಮತ್ತು ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ವೈಫಲ್ಯಗಳು ಮತ್ತು ದುರಾಡಳಿತವನ್ನು ಎತ್ತುವಂತೆ ಒತ್ತಾಯಿಸಿದ್ದಾರೆ.

12 ಗಂಟೆಗಳ ಚರ್ಚೆಯ ನಂತರ ಲೋಕಸಭೆಯು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಮಧ್ಯರಾತ್ರಿಯ ನಂತರ ಅಂಗೀಕರಿಸಿತು. ವಿರೋಧ ಪಕ್ಷದ ಸದಸ್ಯರು ಮಂಡಿಸಿದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತಗಳಿಂದ ತಿರಸ್ಕರಿಸಿದ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆ ಪರವಾಗಿ 288 ಮತ್ತು ವಿರುದ್ಧ 232 ಮತಗಳು ಬಿದ್ದ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆಯು ಗುರುವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ವಕ್ಫ್ ತಿದ್ದುಪಡಿ ಮಸೂದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...