Homeಮುಖಪುಟವಕ್ಫ್ ತಿದ್ದುಪಡಿ ಮಸೂದೆ | ಮಧ್ಯಪ್ರವೇಶಕ್ಕೆ ನಿತೀಶ್, ಚಂದ್ರಬಾಬು ನಾಯ್ಡುಗೆ ಪತ್ರ ಬರೆದ ಮೆಹಬೂಬಾ ಮುಫ್ತಿ

ವಕ್ಫ್ ತಿದ್ದುಪಡಿ ಮಸೂದೆ | ಮಧ್ಯಪ್ರವೇಶಕ್ಕೆ ನಿತೀಶ್, ಚಂದ್ರಬಾಬು ನಾಯ್ಡುಗೆ ಪತ್ರ ಬರೆದ ಮೆಹಬೂಬಾ ಮುಫ್ತಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸತ್ ಸಮಿತಿ (ಜೆಸಿಪಿ) ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇರುವುದರಿಂದ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ಭಾರತದ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಈ ಮಸೂದೆಯಿಂದ ಹಾನಿಯಾಗದಂತೆ ತಡೆಯಲು ಇಬ್ಬರು ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಮಧ್ಯಸ್ಥಿಕೆಯನ್ನು ಕೋರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

ನಿತೀಶ್ ಮತ್ತು ನಾಯ್ಡು ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಅವರು, ಕಳೆದ ದಶಕದಿಂದ ಮುಸ್ಲಿಮರನ್ನು ವ್ಯವಸ್ಥಿತವಾಗಿ ಹಕ್ಕುಗಳಿಂದ ವಂಚಿತಗೊಳಿಸಲಾಗಿದೆ, ಅಧಿಕಾರವನ್ನು ಕಸಿದುಕೊಳ್ಳಲಾಗಿದೆ ಮತ್ತು ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ವಂಚಿಸಲಾಗಿರುವ ಈ ಸಮಯದಲ್ಲೆ ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆ ಪ್ರಸ್ತಾಪ ಮಾಡಲಾಗಿದೆ ಎಂದು ಮೆಹಬೂಬಾ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಹುಶಃ ಅತ್ಯಂತ ಕಳವಳಕಾರಿ ವಿಷಯವೆಂದರೆ ಜಂಟಿ ಸಂಸದೀಯ ಸಮಿತಿಗೆ ಸಲ್ಲಿಸಲಾದ ಭಿನ್ನಾಭಿಪ್ರಾಯದ ಟಿಪ್ಪಣಿಗಳ ರೂಪದಲ್ಲಿ ವಿರೋಧ ಪಕ್ಷಗಳು ಎತ್ತಿರುವ ಅನುಮಾನಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಅಸಂವಿಧಾನಿಕ, ಅಸಮಂಜಸ ಮತ್ತು ಸರ್ವಾಧಿಕಾರಿ ಮಸೂದೆಯಿಂದ ಸಂಕಷ್ಟಕ್ಕೀಡಾಗುವ ಸಮುದಾಯವನ್ನು ಸಂಪರ್ಕಿಸಲು ಯಾವುದೇ ನಿಜವಾದ ಪ್ರಯತ್ನಗಳಿಲ್ಲದೆ ಸಮಾಲೋಚನೆ ನಡೆಸುವುದು ಹಾಸ್ಯಾಸ್ಪದವೆಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ದೇಶಾದ್ಯಂತ ವಕ್ಫ್ ಒಡೆತನದ ಆಸ್ತಿಗಳ ಸುಧಾರಣೆ ಎಂದು ಹೇಳಲಾಗುತ್ತಿರುವ ಇದರ (ಬಿಲ್) ನಿಜವಾದ ಉದ್ದೇಶ ವಕ್ಫ್ ಕಾಯ್ದೆಯ ಅಡಿಪಾಯವನ್ನೇ ಹಾಳು ಮಾಡುವುದಾಗಿದೆ ಎಂದು ಮೆಹಬೊಬಾ ಹೇಳಿದ್ದಾರೆ. ಪ್ರತಿಯೊಂದು ಪ್ರಸ್ತಾವಿತ ತಿದ್ದುಪಡಿಯು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಮಾತ್ರವಲ್ಲದೆ ನಮ್ಮ ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಮೇಲೆ ನೇರ ದಾಳಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ತೀವ್ರ ವಿಭಜಕ ಮಸೂದೆಯು 2014 ರಿಂದ ಮುಸ್ಲಿಮರ ವಿರುದ್ಧದ ಕೋಮುವಾದಕ್ಕೆ ಮತ್ತು ವಂಚನೆಗೆ ಕಾರಣವಾಗಿರುವ ಬಹುಸಂಖ್ಯಾತವಾದದ ಸ್ಪಷ್ಟ ಅಭಿವ್ಯಕ್ತಿಯಾಗಿದೆ. ಇದು ವೈವಿಧ್ಯತೆ, ಬಹುತ್ವ ಮತ್ತು ಶಾಂತಿಯುತ ಸಹಬಾಳ್ವೆಯ ಮೂಲ ಮೌಲ್ಯಗಳ ಮೇಲೆ ಅಭಿವೃದ್ಧಿ ಹೊಂದುತ್ತಿರುವ ಭಾರತದ ಕಲ್ಪನೆಯ ಹೃದಯಭಾಗವನ್ನೇ ಹೊಡೆಯುತ್ತದೆ. ಭಾರತಕ್ಕಾಗಿ ಗಾಂಧಿಯವರ ದೃಷ್ಟಿಕೋನದ ಸಾರವನ್ನು ಬದಲಾಯಿಸಲಾಗುತ್ತಿದೆ, ಈ ರಾಷ್ಟ್ರವನ್ನು ಒಟ್ಟಿಗೆ ಕರೆದೊಯ್ಯುವ ಜಾತ್ಯತೀತ ಸಂರಚನೆಯನ್ನು ದುರ್ಬಲಗೊಳಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

“ನೀವು ಯಾವಾಗಲೂ ನಮ್ಮ ಸಂವಿಧಾನದಲ್ಲಿ ದೃಢ ನಂಬಿಕೆಯುಳ್ಳವರಾಗಿದ್ದೀರಿ ಮತ್ತು ಗಂಗಾ – ಜಮುನಾ ಸಹೋದರತ್ವದ ಚೈತನ್ಯವನ್ನು ನಿರಂತರವಾಗಿ ಪ್ರತಿಪಾದಿಸುತ್ತಿದ್ದೀರಿ. ಇಂದು, NDA ಯ ಪ್ರಮುಖ ಸದಸ್ಯರಾಗಿ, ನೀವು ಈ ವಿಷಯದ ಮೇಲೆ ಪ್ರಭಾವ ಬೀರಲು ಮತ್ತು ಈ ದಾಳಿಯನ್ನು ನಿಲ್ಲಿಸುವ ಪ್ರಮುಖ ಸಾಲಿನಲ್ಲಿ ಇರುತ್ತೀರಿ. ಈ ಮಸೂದೆಯು ನಮ್ಮ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಹಾನಿಯಾಗದಂತೆ ತಡೆಯಲು ನಾನು ನಿಮ್ಮನ್ನು ಪ್ರಾಮಾಣಿಕವಾಗಿ ಒತ್ತಾಯಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂಓದಿ:  ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ

ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...