Homeಮುಖಪುಟವಕ್ಫ್ ತಿದ್ದುಪಡಿ ಮಸೂದೆ | ಮಧ್ಯಪ್ರವೇಶಕ್ಕೆ ನಿತೀಶ್, ಚಂದ್ರಬಾಬು ನಾಯ್ಡುಗೆ ಪತ್ರ ಬರೆದ ಮೆಹಬೂಬಾ ಮುಫ್ತಿ

ವಕ್ಫ್ ತಿದ್ದುಪಡಿ ಮಸೂದೆ | ಮಧ್ಯಪ್ರವೇಶಕ್ಕೆ ನಿತೀಶ್, ಚಂದ್ರಬಾಬು ನಾಯ್ಡುಗೆ ಪತ್ರ ಬರೆದ ಮೆಹಬೂಬಾ ಮುಫ್ತಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸತ್ ಸಮಿತಿ (ಜೆಸಿಪಿ) ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇರುವುದರಿಂದ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ಭಾರತದ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಈ ಮಸೂದೆಯಿಂದ ಹಾನಿಯಾಗದಂತೆ ತಡೆಯಲು ಇಬ್ಬರು ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಮಧ್ಯಸ್ಥಿಕೆಯನ್ನು ಕೋರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

ನಿತೀಶ್ ಮತ್ತು ನಾಯ್ಡು ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಅವರು, ಕಳೆದ ದಶಕದಿಂದ ಮುಸ್ಲಿಮರನ್ನು ವ್ಯವಸ್ಥಿತವಾಗಿ ಹಕ್ಕುಗಳಿಂದ ವಂಚಿತಗೊಳಿಸಲಾಗಿದೆ, ಅಧಿಕಾರವನ್ನು ಕಸಿದುಕೊಳ್ಳಲಾಗಿದೆ ಮತ್ತು ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ವಂಚಿಸಲಾಗಿರುವ ಈ ಸಮಯದಲ್ಲೆ ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆ ಪ್ರಸ್ತಾಪ ಮಾಡಲಾಗಿದೆ ಎಂದು ಮೆಹಬೂಬಾ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಹುಶಃ ಅತ್ಯಂತ ಕಳವಳಕಾರಿ ವಿಷಯವೆಂದರೆ ಜಂಟಿ ಸಂಸದೀಯ ಸಮಿತಿಗೆ ಸಲ್ಲಿಸಲಾದ ಭಿನ್ನಾಭಿಪ್ರಾಯದ ಟಿಪ್ಪಣಿಗಳ ರೂಪದಲ್ಲಿ ವಿರೋಧ ಪಕ್ಷಗಳು ಎತ್ತಿರುವ ಅನುಮಾನಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಅಸಂವಿಧಾನಿಕ, ಅಸಮಂಜಸ ಮತ್ತು ಸರ್ವಾಧಿಕಾರಿ ಮಸೂದೆಯಿಂದ ಸಂಕಷ್ಟಕ್ಕೀಡಾಗುವ ಸಮುದಾಯವನ್ನು ಸಂಪರ್ಕಿಸಲು ಯಾವುದೇ ನಿಜವಾದ ಪ್ರಯತ್ನಗಳಿಲ್ಲದೆ ಸಮಾಲೋಚನೆ ನಡೆಸುವುದು ಹಾಸ್ಯಾಸ್ಪದವೆಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ದೇಶಾದ್ಯಂತ ವಕ್ಫ್ ಒಡೆತನದ ಆಸ್ತಿಗಳ ಸುಧಾರಣೆ ಎಂದು ಹೇಳಲಾಗುತ್ತಿರುವ ಇದರ (ಬಿಲ್) ನಿಜವಾದ ಉದ್ದೇಶ ವಕ್ಫ್ ಕಾಯ್ದೆಯ ಅಡಿಪಾಯವನ್ನೇ ಹಾಳು ಮಾಡುವುದಾಗಿದೆ ಎಂದು ಮೆಹಬೊಬಾ ಹೇಳಿದ್ದಾರೆ. ಪ್ರತಿಯೊಂದು ಪ್ರಸ್ತಾವಿತ ತಿದ್ದುಪಡಿಯು ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಮಾತ್ರವಲ್ಲದೆ ನಮ್ಮ ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಮೇಲೆ ನೇರ ದಾಳಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ತೀವ್ರ ವಿಭಜಕ ಮಸೂದೆಯು 2014 ರಿಂದ ಮುಸ್ಲಿಮರ ವಿರುದ್ಧದ ಕೋಮುವಾದಕ್ಕೆ ಮತ್ತು ವಂಚನೆಗೆ ಕಾರಣವಾಗಿರುವ ಬಹುಸಂಖ್ಯಾತವಾದದ ಸ್ಪಷ್ಟ ಅಭಿವ್ಯಕ್ತಿಯಾಗಿದೆ. ಇದು ವೈವಿಧ್ಯತೆ, ಬಹುತ್ವ ಮತ್ತು ಶಾಂತಿಯುತ ಸಹಬಾಳ್ವೆಯ ಮೂಲ ಮೌಲ್ಯಗಳ ಮೇಲೆ ಅಭಿವೃದ್ಧಿ ಹೊಂದುತ್ತಿರುವ ಭಾರತದ ಕಲ್ಪನೆಯ ಹೃದಯಭಾಗವನ್ನೇ ಹೊಡೆಯುತ್ತದೆ. ಭಾರತಕ್ಕಾಗಿ ಗಾಂಧಿಯವರ ದೃಷ್ಟಿಕೋನದ ಸಾರವನ್ನು ಬದಲಾಯಿಸಲಾಗುತ್ತಿದೆ, ಈ ರಾಷ್ಟ್ರವನ್ನು ಒಟ್ಟಿಗೆ ಕರೆದೊಯ್ಯುವ ಜಾತ್ಯತೀತ ಸಂರಚನೆಯನ್ನು ದುರ್ಬಲಗೊಳಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ

“ನೀವು ಯಾವಾಗಲೂ ನಮ್ಮ ಸಂವಿಧಾನದಲ್ಲಿ ದೃಢ ನಂಬಿಕೆಯುಳ್ಳವರಾಗಿದ್ದೀರಿ ಮತ್ತು ಗಂಗಾ – ಜಮುನಾ ಸಹೋದರತ್ವದ ಚೈತನ್ಯವನ್ನು ನಿರಂತರವಾಗಿ ಪ್ರತಿಪಾದಿಸುತ್ತಿದ್ದೀರಿ. ಇಂದು, NDA ಯ ಪ್ರಮುಖ ಸದಸ್ಯರಾಗಿ, ನೀವು ಈ ವಿಷಯದ ಮೇಲೆ ಪ್ರಭಾವ ಬೀರಲು ಮತ್ತು ಈ ದಾಳಿಯನ್ನು ನಿಲ್ಲಿಸುವ ಪ್ರಮುಖ ಸಾಲಿನಲ್ಲಿ ಇರುತ್ತೀರಿ. ಈ ಮಸೂದೆಯು ನಮ್ಮ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಹಾನಿಯಾಗದಂತೆ ತಡೆಯಲು ನಾನು ನಿಮ್ಮನ್ನು ಪ್ರಾಮಾಣಿಕವಾಗಿ ಒತ್ತಾಯಿಸುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂಓದಿ:  ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ

ಸಂಸದ ರಶೀದ್ ಬಿಡುಗಡೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...