Homeಮುಖಪುಟವಕ್ಫ್‌ ತಿದ್ದುಪಡಿ ಪರಿಶೀಲನೆ - ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸೋಮವಾರ ಅದನ್ನು ಅಂಗೀಕರಿಸಿದೆ. ಈ ಮೂಲಕ ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲು ವೇದಿಕೆಯನ್ನು ನಿಗದಿಪಡಿಸಿದೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಬಿಜೆಪಿ ಸಂಸದ ಜಗದಂಬಿಕಾ ಪಾಲ್ ನೇತೃತ್ವದ ಸಮಿತಿಯು ಆಡಳಿತಾರೂಢ ಎನ್‌ಡಿಎ ಸದಸ್ಯರು ಸೂಚಿಸಿದ 14 ತಿದ್ದುಪಡಿಗಳನ್ನು ಅಂಗೀಕರಿಸಿದರೆ, ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಎಲ್ಲವನ್ನೂ 10:16 ಕ್ಕೆ ಧ್ವನಿ ಮತದ ಮೂಲಕ ತಿರಸ್ಕರಿಸಲಾಯಿತು. ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಾದ ಮಸೂದೆಯು 1995 ರ ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿತ್ತು.

ನಿಯಮಗಳನ್ನು ಉಲ್ಲಂಘಿಸಿ ಕಲಾಪವನ್ನು ಬುಡಮೇಲು ಮಾಡಲಾಗಿದೆ ಎಂದು ಆರೋಪಿಸಿ ಸಮಿತಿಯ ಅಧ್ಯಕ್ಷರ ವಿರುದ್ಧ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ್ದರೂ, ತಿದ್ದುಪಡಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಮತಕ್ಕೆ ಹಾಕಲಾಗಿದೆ ಎಂದು ಜಗದಾಂಬಿಕ ಪಾಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಎಂಕೆ ಸಂಸದ ಎ. ರಾಜಾ ಮಾತನಾಡಿ, “ಅಧ್ಯಕ್ಷರು ಸ್ವತಃ ತಿದ್ದುಪಡಿಗಳನ್ನು ಮಂಡಿಸಿದವರ ಹೆಸರುಗಳನ್ನು (ನಾವು ನೀಡಿದ) ಕರೆದರು, ಅವರೇ ನಮ್ಮ ಪರವಾಗಿ ತಿದ್ದುಪಡಿಗಳನ್ನು ಮಂಡಿಸಿದರು, ಮತಗಳ ಎಣಿಕೆ ನಡೆಸಿದರು, ನಂತರ ನಮ್ಮ ತಿದ್ದುಪಡಿಗಳನ್ನು ತಿರಸ್ಕರಿಸುವುದಾಗಿ ಘೋಷಿಸಿದರು. ಒಂದು ವೇಳೆ ಇದು ಮಸೂದೆಯಾದರೆ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ.” ಎಂದು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದಾಂಬಿಕ ಪಾಲ್, ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ ನೀಡುವ ಬದಲು, ಆಸ್ತಿಯು ವಕ್ಫ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಅಧಿಕಾರಿಯನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದು ಈ ಬದಲಾವಣೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. 1995 ರ ವಕ್ಫ್ ಕಾಯ್ದೆಯಲ್ಲಿ, ಆ ಅಧಿಕಾರವನ್ನು ಸರ್ವೇ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರಿಗೆ ನೀಡಲಾಗಿತ್ತು.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದನ್ನು ಕಡ್ಡಾಯಗೊಳಿಸುವ ಮತ್ತೊಂದು ವಿವಾದಾತ್ಮಕ ನಿಬಂಧನೆಗೆ ಬದಲಾವಣೆಗಳನ್ನು ಸಮಿತಿಯು ಅನುಮೋದಿಸಿದೆ. ಇದು ಕಡ್ಡಾಯ ಎಂಬ ಪದವನ್ನು ಕೈಬಿಟ್ಟು, ವಿದ್ವಾಂಸರನ್ನು ಒಳಗೊಂಡಂತೆ ಮೂರು ಸದಸ್ಯರಿಗೆ ಹೆಚ್ಚಿಸುವ ಮೂಲಕ ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

‘ಬಳಕೆದಾರರ ವಕ್ಫ್(ಬೈ ಯೂಸರ್)’ ನಿಬಂಧನೆಯ ಮೇಲೆ ಮತ್ತೊಂದು ಬದಲಾವಣೆ ಪ್ರಸ್ತಾಪಿಸಲಾಗಿತ್ತಾದರೂ, ಮಸೂದೆ ಅದನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ‘ಬಳಕೆದಾರ ವಕ್ಫ್(ಬೈಯೂಸರ್)’ ಕಾನೂನು ಆಸ್ತಿಯನ್ನು ನೋಂದಾಯಿಸುವವರೆಗೆ ಹಿಂದಿನಿಂದ ಬಳಕೆಯಾದ ತಕ್ಷಣ ಅದು ವಕ್ಫ್‌ ಆಗುವುದಿಲ್ಲ ಎಂಬ ತಿದ್ದುಪಡಿಗಳನ್ನು ಸಮಿತಿಯು ಅನುಮೋದಿಸಿತು.

ಕಾಂಗ್ರೆಸ್ ಸಂಸದ, ಜೆಪಿಸಿ ಸದಸ್ಯ ಇಮ್ರಾನ್ ಮಸೂದ್ ಇದನ್ನು ವಿರೋಧಿಸಿದ್ದು, 90% ವಕ್ಫ್ ಆಸ್ತಿಗಳನ್ನು ಇನ್ನೂ ನೋಂದಾಯಿಸಲಾಗಿಲ್ಲ ಎಂದು ಹೇಳಿದ್ವದಾರೆ. ಸರ್ಕಾರವು ಹೊಸ ಮಸೂದೆಯನ್ನು ತರುವ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಹೊಸದೇನಿದೆ?

ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿ ಬದಲಿಗೆ ಆಸ್ತಿಯು ವಕ್ಫ್ ಆಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ನಿರ್ಧರಿಸಲು ಅಧಿಕಾರಿಯನ್ನು ನೇಮಿಸುವ ಹಕ್ಕು. ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರರನ್ನು ಸೇರಿಸುವ ಕಡ್ಡಾಯ ಷರತ್ತನ್ನು ಕೈಬಿಡಲಾಗಿದೆ. ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆ ಪ್ರಸ್ತಾಪಿಸಲಾಗಿದ್ದು, ಅದರಲ್ಲಿ ವಿದ್ವಾಂಸರು ಸೇರಿದಂತೆ ಮೂರು ಸದಸ್ಯರ ಹೆಚ್ಚಳ.

ಸಂಸದೀಯ ಸಮಿತಿಯು ಮಂಗಳವಾರ ಸದಸ್ಯರ ನಡುವೆ ಅಂತಿಮ ಕರಡನ್ನು ಪ್ರಸಾರ ಮಾಡಲಿದೆ. ವರದಿಯನ್ನು ಅಂಗೀಕರಿಸಲು ಜನವರಿ 29 ರಂದು ಸಭೆ ಸೇರಲಿದೆ ಎಂದು ವರದಿಯಾಗಿದೆ. ಜನವರಿ 31 ರಂದು ಲೋಕಸಭಾ ಸ್ಪೀಕರ್‌ಗೆ ವರದಿಯನ್ನು ಸಲ್ಲಿಸಲಾಗುವುದು ಮತ್ತು ಫೆಬ್ರವರಿ 5 ರ ದೆಹಲಿ ಚುನಾವಣೆಗೆ ಮೊದಲು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂಓದಿ:  ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...