Homeಮುಖಪುಟವಕ್ಫ್‌ ತಿದ್ದುಪಡಿ ಪರಿಶೀಲನೆ - ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸೋಮವಾರ ಅದನ್ನು ಅಂಗೀಕರಿಸಿದೆ. ಈ ಮೂಲಕ ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲು ವೇದಿಕೆಯನ್ನು ನಿಗದಿಪಡಿಸಿದೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಬಿಜೆಪಿ ಸಂಸದ ಜಗದಂಬಿಕಾ ಪಾಲ್ ನೇತೃತ್ವದ ಸಮಿತಿಯು ಆಡಳಿತಾರೂಢ ಎನ್‌ಡಿಎ ಸದಸ್ಯರು ಸೂಚಿಸಿದ 14 ತಿದ್ದುಪಡಿಗಳನ್ನು ಅಂಗೀಕರಿಸಿದರೆ, ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಎಲ್ಲವನ್ನೂ 10:16 ಕ್ಕೆ ಧ್ವನಿ ಮತದ ಮೂಲಕ ತಿರಸ್ಕರಿಸಲಾಯಿತು. ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಾದ ಮಸೂದೆಯು 1995 ರ ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿತ್ತು.

ನಿಯಮಗಳನ್ನು ಉಲ್ಲಂಘಿಸಿ ಕಲಾಪವನ್ನು ಬುಡಮೇಲು ಮಾಡಲಾಗಿದೆ ಎಂದು ಆರೋಪಿಸಿ ಸಮಿತಿಯ ಅಧ್ಯಕ್ಷರ ವಿರುದ್ಧ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ್ದರೂ, ತಿದ್ದುಪಡಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಮತಕ್ಕೆ ಹಾಕಲಾಗಿದೆ ಎಂದು ಜಗದಾಂಬಿಕ ಪಾಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಎಂಕೆ ಸಂಸದ ಎ. ರಾಜಾ ಮಾತನಾಡಿ, “ಅಧ್ಯಕ್ಷರು ಸ್ವತಃ ತಿದ್ದುಪಡಿಗಳನ್ನು ಮಂಡಿಸಿದವರ ಹೆಸರುಗಳನ್ನು (ನಾವು ನೀಡಿದ) ಕರೆದರು, ಅವರೇ ನಮ್ಮ ಪರವಾಗಿ ತಿದ್ದುಪಡಿಗಳನ್ನು ಮಂಡಿಸಿದರು, ಮತಗಳ ಎಣಿಕೆ ನಡೆಸಿದರು, ನಂತರ ನಮ್ಮ ತಿದ್ದುಪಡಿಗಳನ್ನು ತಿರಸ್ಕರಿಸುವುದಾಗಿ ಘೋಷಿಸಿದರು. ಒಂದು ವೇಳೆ ಇದು ಮಸೂದೆಯಾದರೆ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ.” ಎಂದು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದಾಂಬಿಕ ಪಾಲ್, ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ ನೀಡುವ ಬದಲು, ಆಸ್ತಿಯು ವಕ್ಫ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಅಧಿಕಾರಿಯನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದು ಈ ಬದಲಾವಣೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. 1995 ರ ವಕ್ಫ್ ಕಾಯ್ದೆಯಲ್ಲಿ, ಆ ಅಧಿಕಾರವನ್ನು ಸರ್ವೇ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರಿಗೆ ನೀಡಲಾಗಿತ್ತು.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದನ್ನು ಕಡ್ಡಾಯಗೊಳಿಸುವ ಮತ್ತೊಂದು ವಿವಾದಾತ್ಮಕ ನಿಬಂಧನೆಗೆ ಬದಲಾವಣೆಗಳನ್ನು ಸಮಿತಿಯು ಅನುಮೋದಿಸಿದೆ. ಇದು ಕಡ್ಡಾಯ ಎಂಬ ಪದವನ್ನು ಕೈಬಿಟ್ಟು, ವಿದ್ವಾಂಸರನ್ನು ಒಳಗೊಂಡಂತೆ ಮೂರು ಸದಸ್ಯರಿಗೆ ಹೆಚ್ಚಿಸುವ ಮೂಲಕ ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

‘ಬಳಕೆದಾರರ ವಕ್ಫ್(ಬೈ ಯೂಸರ್)’ ನಿಬಂಧನೆಯ ಮೇಲೆ ಮತ್ತೊಂದು ಬದಲಾವಣೆ ಪ್ರಸ್ತಾಪಿಸಲಾಗಿತ್ತಾದರೂ, ಮಸೂದೆ ಅದನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ‘ಬಳಕೆದಾರ ವಕ್ಫ್(ಬೈಯೂಸರ್)’ ಕಾನೂನು ಆಸ್ತಿಯನ್ನು ನೋಂದಾಯಿಸುವವರೆಗೆ ಹಿಂದಿನಿಂದ ಬಳಕೆಯಾದ ತಕ್ಷಣ ಅದು ವಕ್ಫ್‌ ಆಗುವುದಿಲ್ಲ ಎಂಬ ತಿದ್ದುಪಡಿಗಳನ್ನು ಸಮಿತಿಯು ಅನುಮೋದಿಸಿತು.

ಕಾಂಗ್ರೆಸ್ ಸಂಸದ, ಜೆಪಿಸಿ ಸದಸ್ಯ ಇಮ್ರಾನ್ ಮಸೂದ್ ಇದನ್ನು ವಿರೋಧಿಸಿದ್ದು, 90% ವಕ್ಫ್ ಆಸ್ತಿಗಳನ್ನು ಇನ್ನೂ ನೋಂದಾಯಿಸಲಾಗಿಲ್ಲ ಎಂದು ಹೇಳಿದ್ವದಾರೆ. ಸರ್ಕಾರವು ಹೊಸ ಮಸೂದೆಯನ್ನು ತರುವ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಹೊಸದೇನಿದೆ?

ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿ ಬದಲಿಗೆ ಆಸ್ತಿಯು ವಕ್ಫ್ ಆಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ನಿರ್ಧರಿಸಲು ಅಧಿಕಾರಿಯನ್ನು ನೇಮಿಸುವ ಹಕ್ಕು. ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರರನ್ನು ಸೇರಿಸುವ ಕಡ್ಡಾಯ ಷರತ್ತನ್ನು ಕೈಬಿಡಲಾಗಿದೆ. ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆ ಪ್ರಸ್ತಾಪಿಸಲಾಗಿದ್ದು, ಅದರಲ್ಲಿ ವಿದ್ವಾಂಸರು ಸೇರಿದಂತೆ ಮೂರು ಸದಸ್ಯರ ಹೆಚ್ಚಳ.

ಸಂಸದೀಯ ಸಮಿತಿಯು ಮಂಗಳವಾರ ಸದಸ್ಯರ ನಡುವೆ ಅಂತಿಮ ಕರಡನ್ನು ಪ್ರಸಾರ ಮಾಡಲಿದೆ. ವರದಿಯನ್ನು ಅಂಗೀಕರಿಸಲು ಜನವರಿ 29 ರಂದು ಸಭೆ ಸೇರಲಿದೆ ಎಂದು ವರದಿಯಾಗಿದೆ. ಜನವರಿ 31 ರಂದು ಲೋಕಸಭಾ ಸ್ಪೀಕರ್‌ಗೆ ವರದಿಯನ್ನು ಸಲ್ಲಿಸಲಾಗುವುದು ಮತ್ತು ಫೆಬ್ರವರಿ 5 ರ ದೆಹಲಿ ಚುನಾವಣೆಗೆ ಮೊದಲು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂಓದಿ:  ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...