Homeಮುಖಪುಟವಕ್ಫ್‌ ತಿದ್ದುಪಡಿ ಪರಿಶೀಲನೆ - ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

ವಕ್ಫ್‌ ತಿದ್ದುಪಡಿ ಪರಿಶೀಲನೆ – ವಿಪಕ್ಷಗಳ ಎಲ್ಲಾ ಪ್ರಸ್ತಾಪ ತಿರಸ್ಕೃತ!

- Advertisement -
- Advertisement -

ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸೋಮವಾರ ಅದನ್ನು ಅಂಗೀಕರಿಸಿದೆ. ಈ ಮೂಲಕ ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲು ವೇದಿಕೆಯನ್ನು ನಿಗದಿಪಡಿಸಿದೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಬಿಜೆಪಿ ಸಂಸದ ಜಗದಂಬಿಕಾ ಪಾಲ್ ನೇತೃತ್ವದ ಸಮಿತಿಯು ಆಡಳಿತಾರೂಢ ಎನ್‌ಡಿಎ ಸದಸ್ಯರು ಸೂಚಿಸಿದ 14 ತಿದ್ದುಪಡಿಗಳನ್ನು ಅಂಗೀಕರಿಸಿದರೆ, ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಎಲ್ಲವನ್ನೂ 10:16 ಕ್ಕೆ ಧ್ವನಿ ಮತದ ಮೂಲಕ ತಿರಸ್ಕರಿಸಲಾಯಿತು. ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಾದ ಮಸೂದೆಯು 1995 ರ ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿತ್ತು.

ನಿಯಮಗಳನ್ನು ಉಲ್ಲಂಘಿಸಿ ಕಲಾಪವನ್ನು ಬುಡಮೇಲು ಮಾಡಲಾಗಿದೆ ಎಂದು ಆರೋಪಿಸಿ ಸಮಿತಿಯ ಅಧ್ಯಕ್ಷರ ವಿರುದ್ಧ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ್ದರೂ, ತಿದ್ದುಪಡಿಗಳನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಮತಕ್ಕೆ ಹಾಕಲಾಗಿದೆ ಎಂದು ಜಗದಾಂಬಿಕ ಪಾಲ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಎಂಕೆ ಸಂಸದ ಎ. ರಾಜಾ ಮಾತನಾಡಿ, “ಅಧ್ಯಕ್ಷರು ಸ್ವತಃ ತಿದ್ದುಪಡಿಗಳನ್ನು ಮಂಡಿಸಿದವರ ಹೆಸರುಗಳನ್ನು (ನಾವು ನೀಡಿದ) ಕರೆದರು, ಅವರೇ ನಮ್ಮ ಪರವಾಗಿ ತಿದ್ದುಪಡಿಗಳನ್ನು ಮಂಡಿಸಿದರು, ಮತಗಳ ಎಣಿಕೆ ನಡೆಸಿದರು, ನಂತರ ನಮ್ಮ ತಿದ್ದುಪಡಿಗಳನ್ನು ತಿರಸ್ಕರಿಸುವುದಾಗಿ ಘೋಷಿಸಿದರು. ಒಂದು ವೇಳೆ ಇದು ಮಸೂದೆಯಾದರೆ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ.” ಎಂದು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದಾಂಬಿಕ ಪಾಲ್, ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ ನೀಡುವ ಬದಲು, ಆಸ್ತಿಯು ವಕ್ಫ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಅಧಿಕಾರಿಯನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದು ಈ ಬದಲಾವಣೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. 1995 ರ ವಕ್ಫ್ ಕಾಯ್ದೆಯಲ್ಲಿ, ಆ ಅಧಿಕಾರವನ್ನು ಸರ್ವೇ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರಿಗೆ ನೀಡಲಾಗಿತ್ತು.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದನ್ನು ಕಡ್ಡಾಯಗೊಳಿಸುವ ಮತ್ತೊಂದು ವಿವಾದಾತ್ಮಕ ನಿಬಂಧನೆಗೆ ಬದಲಾವಣೆಗಳನ್ನು ಸಮಿತಿಯು ಅನುಮೋದಿಸಿದೆ. ಇದು ಕಡ್ಡಾಯ ಎಂಬ ಪದವನ್ನು ಕೈಬಿಟ್ಟು, ವಿದ್ವಾಂಸರನ್ನು ಒಳಗೊಂಡಂತೆ ಮೂರು ಸದಸ್ಯರಿಗೆ ಹೆಚ್ಚಿಸುವ ಮೂಲಕ ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿದೆ.

‘ಬಳಕೆದಾರರ ವಕ್ಫ್(ಬೈ ಯೂಸರ್)’ ನಿಬಂಧನೆಯ ಮೇಲೆ ಮತ್ತೊಂದು ಬದಲಾವಣೆ ಪ್ರಸ್ತಾಪಿಸಲಾಗಿತ್ತಾದರೂ, ಮಸೂದೆ ಅದನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ‘ಬಳಕೆದಾರ ವಕ್ಫ್(ಬೈಯೂಸರ್)’ ಕಾನೂನು ಆಸ್ತಿಯನ್ನು ನೋಂದಾಯಿಸುವವರೆಗೆ ಹಿಂದಿನಿಂದ ಬಳಕೆಯಾದ ತಕ್ಷಣ ಅದು ವಕ್ಫ್‌ ಆಗುವುದಿಲ್ಲ ಎಂಬ ತಿದ್ದುಪಡಿಗಳನ್ನು ಸಮಿತಿಯು ಅನುಮೋದಿಸಿತು.

ಕಾಂಗ್ರೆಸ್ ಸಂಸದ, ಜೆಪಿಸಿ ಸದಸ್ಯ ಇಮ್ರಾನ್ ಮಸೂದ್ ಇದನ್ನು ವಿರೋಧಿಸಿದ್ದು, 90% ವಕ್ಫ್ ಆಸ್ತಿಗಳನ್ನು ಇನ್ನೂ ನೋಂದಾಯಿಸಲಾಗಿಲ್ಲ ಎಂದು ಹೇಳಿದ್ವದಾರೆ. ಸರ್ಕಾರವು ಹೊಸ ಮಸೂದೆಯನ್ನು ತರುವ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಕ್ಫ್‌ ತಿದ್ದುಪಡಿ ಪರಿಶೀಲನೆ

ಹೊಸದೇನಿದೆ?

ಪ್ರಸ್ತಾವಿತ ಮಸೂದೆಯಲ್ಲಿ ಜಿಲ್ಲಾಧಿಕಾರಿ ಬದಲಿಗೆ ಆಸ್ತಿಯು ವಕ್ಫ್ ಆಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ನಿರ್ಧರಿಸಲು ಅಧಿಕಾರಿಯನ್ನು ನೇಮಿಸುವ ಹಕ್ಕು. ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರರನ್ನು ಸೇರಿಸುವ ಕಡ್ಡಾಯ ಷರತ್ತನ್ನು ಕೈಬಿಡಲಾಗಿದೆ. ವಕ್ಫ್ ಮಂಡಳಿಯ ಸಂಯೋಜನೆಯಲ್ಲಿ ಬದಲಾವಣೆ ಪ್ರಸ್ತಾಪಿಸಲಾಗಿದ್ದು, ಅದರಲ್ಲಿ ವಿದ್ವಾಂಸರು ಸೇರಿದಂತೆ ಮೂರು ಸದಸ್ಯರ ಹೆಚ್ಚಳ.

ಸಂಸದೀಯ ಸಮಿತಿಯು ಮಂಗಳವಾರ ಸದಸ್ಯರ ನಡುವೆ ಅಂತಿಮ ಕರಡನ್ನು ಪ್ರಸಾರ ಮಾಡಲಿದೆ. ವರದಿಯನ್ನು ಅಂಗೀಕರಿಸಲು ಜನವರಿ 29 ರಂದು ಸಭೆ ಸೇರಲಿದೆ ಎಂದು ವರದಿಯಾಗಿದೆ. ಜನವರಿ 31 ರಂದು ಲೋಕಸಭಾ ಸ್ಪೀಕರ್‌ಗೆ ವರದಿಯನ್ನು ಸಲ್ಲಿಸಲಾಗುವುದು ಮತ್ತು ಫೆಬ್ರವರಿ 5 ರ ದೆಹಲಿ ಚುನಾವಣೆಗೆ ಮೊದಲು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂಓದಿ:  ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...