Homeಮುಖಪುಟವಕ್ಫ್ ಮಸೂದೆ ವಿರುದ್ಧ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ: ಸ್ಟಾಲಿನ್ ಘೋಷಣೆ

ವಕ್ಫ್ ಮಸೂದೆ ವಿರುದ್ಧ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ: ಸ್ಟಾಲಿನ್ ಘೋಷಣೆ

- Advertisement -
- Advertisement -

ಲೋಕಸಭೆಯಲ್ಲಿ ವಕ್ಫ್ ಮಸೂದೆ (ತಿದ್ದುಪಡಿ) ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ತಮ್ಮ ಪಕ್ಷವು ಮಸೂದೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಿದೆ ಗುರುವಾರ ಹೇಳಿದ್ದಾರೆ. ಮಸೂದೆ ಅಂಗೀಕಾರದ ವಿರುದ್ಧ ಪ್ರತಿಭಟಿಸಿ ಡಿಎಂಕೆ ಮತ್ತು ಅದರ ಮಿತ್ರ ಪಕ್ಷಗಳ ಸದಸ್ಯರು ಗುರುವಾರ ವಿಧಾನಸಭೆ ಕಲಾಪದಲ್ಲಿ ಕಪ್ಪು ಬ್ಯಾಡ್ಜ್ ಧರಿಸಿ ಭಾಗವಹಿಸಿದ್ದರು.

ಕಳೆದ ವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ನೆನಪಿಸಿಕೊಂಡ ಸ್ಟಾಲಿನ್, “2025 ರ ಮಾರ್ಚ್ 27 ರಂದು ಕೇಂದ್ರ ಸರ್ಕಾರವು ವಕ್ಫ್ ಮಸೂದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಬಿಜೆಪಿ ಹೊರತುಪಡಿಸಿ, ಉಳಿದ ಎಲ್ಲಾ ಸದಸ್ಯರು ಅದನ್ನು ಬೆಂಬಲಿಸಿದರು” ಎಂದು ಹೇಳಿದ್ದಾರೆ.

ವಕ್ಫ್ ಮಸೂದೆ (ತಿದ್ದುಪಡಿ) ದೇಶದಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಬಹುದು ಮತ್ತು ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರಬಹುದು ಎಂದು ಒತ್ತಿ ಹೇಳಿದ ಸ್ಟಾಲಿನ್, “ನಾವು ನಿರ್ಣಯವನ್ನು ಅಂಗೀಕರಿಸಿದ್ದೇವೆ ಮತ್ತು ಬಹುಪಾಲು ರಾಜಕೀಯ ಪಕ್ಷಗಳು ಅದನ್ನು ವಿರೋಧಿಸಿದರೂ, ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇದು ಅತ್ಯಂತ ಖಂಡನೀಯ.” ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಮಸೂದೆಯ ವಿರುದ್ಧ 232 ಮತಗಳು ಮತ್ತು ಅದನ್ನು ಬೆಂಬಲಿಸಿದ 288 ಮತಗಳನ್ನು ಎತ್ತಿ ತೋರಿಸಿದ ಸಿಎಂ ಸ್ಟಾಲಿನ್, ಮಸೂದೆಯ ಪರವಾಗಿ ಹೆಚ್ಚಿನ ಜನರು ಮತ ಚಲಾಯಿಸಿದರೂ, ವಿರೋಧಿಸಿದ 232 ಸದಸ್ಯರು ಸಾಮಾನ್ಯ ಸಂಖ್ಯೆಯಲ್ಲ ಎಂದು ಹೇಳಿದ್ದಾರೆ. “ಈ ಮಸೂದೆಯನ್ನು ಕೇವಲ ವಿರೋಧಿಸಬಾರದು, ಸಂಪೂರ್ಣವಾಗಿ ಹಿಂಪಡೆಯಬೇಕು ಎಂಬುದು ನಮ್ಮ ನಿಲುವು” ಎಂದು ಅವರು ಹೇಳಿದ್ದಾರೆ.

ಬಹುಪಾಲು ಪಕ್ಷಗಳ ವಿರೋಧದ ಹೊರತಾಗಿಯೂ ಮತ್ತು ಕೆಲವೇ ಕೆಲವು ಸಮ್ಮಿಶ್ರ ಪಕ್ಷಗಳ (ಬಿಜೆಪಿಯ) ಬೆಂಬಲದೊಂದಿಗೆ ಬೆಳಗಿನ ಜಾವ 2 ಗಂಟೆಗೆ ಮಸೂದೆಯನ್ನು ಅಂಗೀಕರಿಸುವುದು ಸಂವಿಧಾನದ ಮೇಲಿನ “ದಾಳಿ” ಎಂದು ಅವರು ಬಣ್ಣಿಸಿದ್ದಾರೆ. “ಈ ನಡೆಯು ಕೋಮು ಸಾಮರಸ್ಯವನ್ನು ಕದಡುತ್ತದೆ” ಎಂದು ಹೇಳಿದ ಅವರು, ಇದಕ್ಕಾಗಿಯೇ ತಾನು ಮತ್ತು ಇತರ ಸದಸ್ಯರು ಕಪ್ಪು ಬ್ಯಾಡ್ಜ್ ಧರಿಸಿದ್ದಾಗಿ ವಿವರಿಸಿದ್ದಾರೆ.

ಮಸೂದೆಯು ವಕ್ಫ್ ಮಂಡಳಿಯ ಸ್ವಾಯತ್ತತೆಯನ್ನು ನಾಶಪಡಿಸುತ್ತದೆ ಮತ್ತು ಮುಸ್ಲಿಂ ಸಮುದಾಯಕ್ಕೆ ಬೆದರಿಕೆಯಾಗಿ ಪರಿಣಮಿಸುತ್ತದೆ ಎಂದು ಆರೋಪಿಸಿದ ಅವರು, ತಮಿಳುನಾಡು ಅದರ ವಿರುದ್ಧ ಹೋರಾಟ ನಡೆಸಲಿದ್ದು, ಅದರಲ್ಲಿ ತಮಿಳುನಾಡು ಗೆಲ್ಲುತ್ತದೆ ಎಂದು ಅವರು ಘೋಷಿಸಿದ್ದಾರೆ. “ನಾವು ಕಾನೂನು ಕ್ರಮಗಳ ಮೂಲಕ ಮಸೂದೆಯನ್ನು ತಡೆಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...