Homeಮುಖಪುಟವಕ್ಫ್ ಮಸೂದೆ ವಿರುದ್ಧ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ: ಸ್ಟಾಲಿನ್ ಘೋಷಣೆ

ವಕ್ಫ್ ಮಸೂದೆ ವಿರುದ್ಧ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ: ಸ್ಟಾಲಿನ್ ಘೋಷಣೆ

- Advertisement -
- Advertisement -

ಲೋಕಸಭೆಯಲ್ಲಿ ವಕ್ಫ್ ಮಸೂದೆ (ತಿದ್ದುಪಡಿ) ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ತಮ್ಮ ಪಕ್ಷವು ಮಸೂದೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಿದೆ ಗುರುವಾರ ಹೇಳಿದ್ದಾರೆ. ಮಸೂದೆ ಅಂಗೀಕಾರದ ವಿರುದ್ಧ ಪ್ರತಿಭಟಿಸಿ ಡಿಎಂಕೆ ಮತ್ತು ಅದರ ಮಿತ್ರ ಪಕ್ಷಗಳ ಸದಸ್ಯರು ಗುರುವಾರ ವಿಧಾನಸಭೆ ಕಲಾಪದಲ್ಲಿ ಕಪ್ಪು ಬ್ಯಾಡ್ಜ್ ಧರಿಸಿ ಭಾಗವಹಿಸಿದ್ದರು.

ಕಳೆದ ವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ನೆನಪಿಸಿಕೊಂಡ ಸ್ಟಾಲಿನ್, “2025 ರ ಮಾರ್ಚ್ 27 ರಂದು ಕೇಂದ್ರ ಸರ್ಕಾರವು ವಕ್ಫ್ ಮಸೂದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಬಿಜೆಪಿ ಹೊರತುಪಡಿಸಿ, ಉಳಿದ ಎಲ್ಲಾ ಸದಸ್ಯರು ಅದನ್ನು ಬೆಂಬಲಿಸಿದರು” ಎಂದು ಹೇಳಿದ್ದಾರೆ.

ವಕ್ಫ್ ಮಸೂದೆ (ತಿದ್ದುಪಡಿ) ದೇಶದಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಬಹುದು ಮತ್ತು ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರಬಹುದು ಎಂದು ಒತ್ತಿ ಹೇಳಿದ ಸ್ಟಾಲಿನ್, “ನಾವು ನಿರ್ಣಯವನ್ನು ಅಂಗೀಕರಿಸಿದ್ದೇವೆ ಮತ್ತು ಬಹುಪಾಲು ರಾಜಕೀಯ ಪಕ್ಷಗಳು ಅದನ್ನು ವಿರೋಧಿಸಿದರೂ, ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇದು ಅತ್ಯಂತ ಖಂಡನೀಯ.” ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಮಸೂದೆಯ ವಿರುದ್ಧ 232 ಮತಗಳು ಮತ್ತು ಅದನ್ನು ಬೆಂಬಲಿಸಿದ 288 ಮತಗಳನ್ನು ಎತ್ತಿ ತೋರಿಸಿದ ಸಿಎಂ ಸ್ಟಾಲಿನ್, ಮಸೂದೆಯ ಪರವಾಗಿ ಹೆಚ್ಚಿನ ಜನರು ಮತ ಚಲಾಯಿಸಿದರೂ, ವಿರೋಧಿಸಿದ 232 ಸದಸ್ಯರು ಸಾಮಾನ್ಯ ಸಂಖ್ಯೆಯಲ್ಲ ಎಂದು ಹೇಳಿದ್ದಾರೆ. “ಈ ಮಸೂದೆಯನ್ನು ಕೇವಲ ವಿರೋಧಿಸಬಾರದು, ಸಂಪೂರ್ಣವಾಗಿ ಹಿಂಪಡೆಯಬೇಕು ಎಂಬುದು ನಮ್ಮ ನಿಲುವು” ಎಂದು ಅವರು ಹೇಳಿದ್ದಾರೆ.

ಬಹುಪಾಲು ಪಕ್ಷಗಳ ವಿರೋಧದ ಹೊರತಾಗಿಯೂ ಮತ್ತು ಕೆಲವೇ ಕೆಲವು ಸಮ್ಮಿಶ್ರ ಪಕ್ಷಗಳ (ಬಿಜೆಪಿಯ) ಬೆಂಬಲದೊಂದಿಗೆ ಬೆಳಗಿನ ಜಾವ 2 ಗಂಟೆಗೆ ಮಸೂದೆಯನ್ನು ಅಂಗೀಕರಿಸುವುದು ಸಂವಿಧಾನದ ಮೇಲಿನ “ದಾಳಿ” ಎಂದು ಅವರು ಬಣ್ಣಿಸಿದ್ದಾರೆ. “ಈ ನಡೆಯು ಕೋಮು ಸಾಮರಸ್ಯವನ್ನು ಕದಡುತ್ತದೆ” ಎಂದು ಹೇಳಿದ ಅವರು, ಇದಕ್ಕಾಗಿಯೇ ತಾನು ಮತ್ತು ಇತರ ಸದಸ್ಯರು ಕಪ್ಪು ಬ್ಯಾಡ್ಜ್ ಧರಿಸಿದ್ದಾಗಿ ವಿವರಿಸಿದ್ದಾರೆ.

ಮಸೂದೆಯು ವಕ್ಫ್ ಮಂಡಳಿಯ ಸ್ವಾಯತ್ತತೆಯನ್ನು ನಾಶಪಡಿಸುತ್ತದೆ ಮತ್ತು ಮುಸ್ಲಿಂ ಸಮುದಾಯಕ್ಕೆ ಬೆದರಿಕೆಯಾಗಿ ಪರಿಣಮಿಸುತ್ತದೆ ಎಂದು ಆರೋಪಿಸಿದ ಅವರು, ತಮಿಳುನಾಡು ಅದರ ವಿರುದ್ಧ ಹೋರಾಟ ನಡೆಸಲಿದ್ದು, ಅದರಲ್ಲಿ ತಮಿಳುನಾಡು ಗೆಲ್ಲುತ್ತದೆ ಎಂದು ಅವರು ಘೋಷಿಸಿದ್ದಾರೆ. “ನಾವು ಕಾನೂನು ಕ್ರಮಗಳ ಮೂಲಕ ಮಸೂದೆಯನ್ನು ತಡೆಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...