Homeಮುಖಪುಟವಕ್ಫ್ ಮಸೂದೆಗೆ ನಿತೀಶ್ ಕುಮಾರ್ ಬೆಂಬಲ | ಇಫ್ತಾರ್ ಕೂಟ ಬಹಿಷ್ಕರಿಸಿದ ಮುಸ್ಲಿಂ ಸಂಘಟನೆಗಳು

ವಕ್ಫ್ ಮಸೂದೆಗೆ ನಿತೀಶ್ ಕುಮಾರ್ ಬೆಂಬಲ | ಇಫ್ತಾರ್ ಕೂಟ ಬಹಿಷ್ಕರಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

2024ರ ವಕ್ಫ್ ತಿದ್ದುಪಡಿ ಮಸೂದೆಗೆ ಜನತಾದಳ (ಯುನೈಟೆಡ್) ಬೆಂಬಲ ನೀಡಿರುವುದನ್ನು ಉಲ್ಲೇಖಿಸಿ ಬಿಹಾರದ ಹಲವಾರು ಮುಸ್ಲಿಂ ಸಂಘಟನೆಗಳು ಭಾನುವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನೆಯಲ್ಲಿ ಆಯೋಜಿಸಿದ್ದ ಇಫ್ತಾರ್ ಔತಣಕೂಟವನ್ನು ಬಹಿಷ್ಕರಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ. ವಕ್ಫ್ ಮಸೂದೆಗೆ ನಿತೀಶ್

ಏಳು ಮುಸ್ಲಿಂ ಸಂಘಟನೆಗಳು ನಿತೀಶ್‌ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ, ಜಾತ್ಯತೀತ ಸರ್ಕಾರ ನೀಡುವುದಾಗಿ ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯ ಭರವಸೆಯ ಮೇರೆಗೆ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಬಿಜೆಪಿಯೊಂದಿಗಿನ ನಿಮ್ಮ ಮೈತ್ರಿ ಮತ್ತು ತರ್ಕಬದ್ಧವಲ್ಲದ ಮತ್ತು ಸಂವಿಧಾನಬಾಹಿರ ವಕ್ಫ್ ತಿದ್ದುಪಡಿ ಮಸೂದೆಗೆ ನಿಮ್ಮ ಬೆಂಬಲವು ನಿಮ್ಮ ಅದೇ ಭರವಸೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಉಲ್ಲೇಖಿಸಿವೆ.

ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಬಿಹಾರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಕೇಂದ್ರದಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಯ ಭಾಗವಾಗಿದೆ.

ವಕ್ಫ್ ಮಸೂದೆಯನ್ನು ವಿರೋಧ ಪಕ್ಷದ ಇಂಡಿಯಾ ಮೈತ್ರಿಯ ನಾಯಕರು ಮತ್ತು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ. ಈ ಮಸೂದೆಯು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮತ್ತು ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ. ಈ ಕಾಯ್ದೆಗೆ ಕೊನೆಯದಾಗಿ 2013 ರಲ್ಲಿ ತಿದ್ದುಪಡಿ ತರಲಾಗಿದೆ.

ಆದಾಗ್ಯೂ, ನಿತೀಶ್ ನೇತೃತ್ವದ ಜನತಾ ದಳ (ಯುನೈಟೆಡ್) ಕಾಯ್ದೆಗೆ ತರಲಾಗುತ್ತಿರುವ ಪ್ರಸ್ತಾವಿತ ತಿದ್ದುಪಡಿಗಳನ್ನು ಬೆಂಬಲಿಸಿದ್ದು, ಈ ಬದಲಾವಣೆಗಳು ಮುಸ್ಲಿಂ ವಿರೋಧಿಯಲ್ಲ ಎಂದು ಹೇಳಿದೆ ಎಂದು ದಿ ಹಿಂದೂ ವರದಿ ಮಾಡಿದೆ. ವಕ್ಫ್ ಮಂಡಳಿಗಳ ಕಾರ್ಯಾಚರಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಮಸೂದೆ ಹೊಂದಿದ್ದು, ಬದಲಾಗಿ ಮಸೀದಿಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನವಲ್ಲ ಎಂದು ಪಕ್ಷ ಹೇಳಿದೆ.

ವಕ್ಫ್ ಎಂದರೆ ಮುಸ್ಲಿಮರು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ನೀಡುವ ಆಸ್ತಿ. ಭಾರತದಲ್ಲಿ, ವಕ್ಫ್‌ಗಳನ್ನು ವಕ್ಫ್ ಕಾಯ್ದೆಯಡಿಯಲ್ಲಿ ನಿಯಂತ್ರಿಸಲಾಗುತ್ತದೆ. ಪ್ರತಿಯೊಂದು ರಾಜ್ಯವು ಕಾನೂನು ಘಟಕದ ನೇತೃತ್ವದಲ್ಲಿ ವಕ್ಫ್ ಮಂಡಳಿಯನ್ನು ಹೊಂದಿದ್ದು, ಅದು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು, ಹಿಡಿದಿಡಲು ಮತ್ತು ವರ್ಗಾಯಿಸಲು ಅಧಿಕಾರ ಹೊಂದಿದೆ.

“ನಿಮ್ಮ ಇಫ್ತಾರ್ ಹಬ್ಬದ ಉದ್ದೇಶವು ಸದ್ಭಾವನೆ ಮತ್ತು ವಿಶ್ವಾಸವನ್ನು ಉತ್ತೇಜಿಸುವುದು. ಆದರೆ ಅಂತಹ ವಿಶ್ವಾಸವನ್ನು ಔಪಚಾರಿಕ ಹಬ್ಬಗಳಿಂದ ಮಾತ್ರ ನಿರ್ಮಿಸಲು ಸಾಧ್ಯವಿಲ್ಲ. ಅದನ್ನು ಸಂಕೀರ್ಣ ನೀತಿ ಕ್ರಮಗಳಿಂದ ನಿರ್ಮಿಸಲಾಗುತ್ತದೆ” ಎಂದು ಮುಸ್ಲಿಂ ಸಂಘಟನೆಗಳು ಪತ್ರದಲ್ಲಿ ಉಲ್ಲೇಖಿಸಿವೆ.

“ಮುಸ್ಲಿಮರ ಕಾನೂನುಬದ್ಧ ಬೇಡಿಕೆಗಳನ್ನು ನಿಮ್ಮ ಸರ್ಕಾರವು ನಿರ್ಲಕ್ಷಿಸುವುದರಿಂದ, ಇಫ್ತಾರ್‌ನಂತಹ ಔಪಚಾರಿಕ ಹಬ್ಬಗಳು ಅರ್ಥಹೀನವಾಗುತ್ತವೆ.” ಎಂದು ಪತ್ರವು ಹೇಳಿದೆ.

ಕೇಂದ್ರದ ಕರಡು ಶಾಸನವು ಜಾರಿಗೆ ಬಂದರೆ, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಮಹಿಳಾ ಕೇಂದ್ರಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಶತಮಾನಗಳಷ್ಟು ಹಳೆಯದಾದ ವಕ್ಫ್ ಆಸ್ತಿಗಳ ಹಕ್ಕನ್ನು ತೆಗೆದುಹಾಕುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇದು ಸಾಚಾರ್ ಸಮಿತಿ ವರದಿಯಲ್ಲಿ ಈಗಾಗಲೇ ಹೇಳಿರುವಂತೆ ಮುಸ್ಲಿಂ ಸಮುದಾಯದಲ್ಲಿ ಬಡತನ ಮತ್ತು ಅಭಾವವನ್ನು ಮತ್ತಷ್ಟು ಹೆಚ್ಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವು 2005 ರಲ್ಲಿ ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಾಚಾರ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿತ್ತು. ವರದಿಯನ್ನು ನವೆಂಬರ್ 2006 ರಲ್ಲಿ ಸಲ್ಲಿಸಲಾಯಿತು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಇಮಾರತ್-ಎ-ಶರಿಯಾ, ಜಮಿಯತ್ ಉಲಮಾ-ಇ-ಹಿಂದ್, ಜಮಿಯತ್ ಅಹ್ಲೆ ಹದೀಸ್, ಜಮಾತ್‌-ಎ-ಇಸ್ಲಾಮಿ ಹಿಂದ್, ಖಾಂಕಾ ಮುಜಿಬಿಯಾ ಮತ್ತು ಖಾಂಕಾ ರಹಮಾನಿ ಎಂಬ ಸಂಘಟನೆಗಳು ಮುಖ್ಯಮಂತ್ರಿಯ ಇಫ್ತಾರ್ ಆಹ್ವಾನವನ್ನು ತಿರಸ್ಕರಿಸಿ ತಮ್ಮ ಪ್ರತಿಭಟನೆಗಳನ್ನು ದಾಖಲಿಸಿದೆ.

ಮತ್ತೊಂದು ಮುಸ್ಲಿಂ ಸಂಘಟನೆಯಾದ ಇಮಾರತ್-ಎ-ಶರಿಯಾ ಕೂಡಾ ನಿತೀಶ್ ಕುಮಾರ್ ಅವರು ಮಸೂದೆಗೆ ಬೆಂಬಲ ನೀಡಿರುವುದನ್ನು ಪ್ರತಿಭಟಿಸಿ ಆಯೋಜಿಸಿದ್ದ “ಸರ್ಕಾರಿ” ಇಫ್ತಾರ್‌ಗೆ ಹಾಜರಾಗುವುದಿಲ್ಲ ಎಂದು ಘೋಷಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದಾಗ್ಯೂ, ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿದ್ದರೂ ಮುಸ್ಲಿಂ ಸಮುದಾಯದ ಹಲವಾರು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇಮಾರತ್-ಎ-ಶರಿಯಾ ಬಹಿಷ್ಕಾರದ ಕರೆಗೆ ಪ್ರತಿಕ್ರಿಯಿಸಿರುವ ಜನತಾದಳ (ಯುನೈಟೆಡ್) ವಕ್ತಾರ ನೀರಜ್ ಕುಮಾರ್, ಇದು “ಅನಪೇಕ್ಷಿತ” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಹಲವಾರು ಮುಸ್ಲಿಂ ನಾಯಕರು ನಮ್ಮ ಇಫ್ತಾರ್‌ನಲ್ಲಿ ಭಾಗವಹಿಸಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಅವರು ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ವಕ್ಫ್ ಮಸೂದೆಯಲ್ಲಿನ 44 ತಿದ್ದುಪಡಿಗಳು, ವಕ್ಫ್ ಮಂಡಳಿಗಳ ಅಧಿಕಾರವನ್ನು ಮೊಟಕುಗೊಳಿಸಲು ಮತ್ತು ಅವುಗಳ ಮೇಲೆ ಹೆಚ್ಚಿನ ಸರ್ಕಾರಿ ನಿಯಂತ್ರಣವನ್ನು ಅನುಮತಿಸಲು ಪ್ರಸ್ತಾಪಿಸುತ್ತವೆ. ಅವು ಮುಸ್ಲಿಮೇತರರು ಮಂಡಳಿಯ ಸದಸ್ಯರಾಗಲು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸಲು ಮತ್ತು ವಕ್ಫ್ ನ್ಯಾಯಮಂಡಳಿಗಳ ಕಾರ್ಯವನ್ನು ಬದಲಾಯಿಸಲು ಸಹ ಅವಕಾಶ ನೀಡುತ್ತವೆ.

ವಿರೋಧ ಪಕ್ಷದ ಆಕ್ಷೇಪಣೆಗಳ ನಂತರ ಆಗಸ್ಟ್ 8 ರಂದು ಕರಡು ಶಾಸನವನ್ನು ಜಂಟಿ ಸಂಸದೀಯ ಸಮಿತಿಗೆ ಉಲ್ಲೇಖಿಸಲಾಯಿತು. ಜನವರಿ 29 ರಂದು, ಜಂಟಿ ಸಂಸದೀಯ ಸಮಿತಿಯು ಪರಿಷ್ಕೃತ 2024 ರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮತ ಚಲಾಯಿಸಿದ ನಂತರ ಅಂಗೀಕರಿಸಿತು. ಅದರ ಕರಡು ವರದಿಯ ಪರವಾಗಿ 15 ಮತಗಳು ಮತ್ತು ವಿರುದ್ಧವಾಗಿ 11 ಮತಗಳು ಬಂದವು. ಎರಡು ದಿನಗಳ ಹಿಂದೆ, NDA ಸದಸ್ಯರ ಪ್ರಸ್ತಾವನೆಗಳನ್ನು ಸ್ವೀಕರಿಸಿದ ನಂತರ ಅದು ಮಸೂದೆಯನ್ನು ಅಂಗೀಕರಿಸಿತು. ಜೊತೆಗೆ, ವಿರೋಧ ಪಕ್ಷದ ಸಂಸದರು ಪ್ರಸ್ತಾಪಿಸಿದ ತಿದ್ದುಪಡಿಗಳನ್ನು ತಿರಸ್ಕರಿಸಲಾಯಿತು. ವಕ್ಫ್ ಮಸೂದೆಗೆ ನಿತೀಶ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪಲ್ಟು ಚಾಚಾ ಕಹಾ ಹೈ..’; ಸಿಎಂ ನಿತೀಶ್ ಕುಮಾರ್ ನಿವಾಸದ ಮುಂದೆ ಹೋಳಿ ಆಚರಿಸಿದ ತೇಜ್ ಪ್ರತಾಪ್

‘ಪಲ್ಟು ಚಾಚಾ ಕಹಾ ಹೈ..’; ಸಿಎಂ ನಿತೀಶ್ ಕುಮಾರ್ ನಿವಾಸದ ಮುಂದೆ ಹೋಳಿ ಆಚರಿಸಿದ ತೇಜ್ ಪ್ರತಾಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...