Homeಮುಖಪುಟವಕ್ಫ್ ಮಸೂದೆಗೆ ನಿತೀಶ್ ಕುಮಾರ್ ಬೆಂಬಲ | ಇಫ್ತಾರ್ ಕೂಟ ಬಹಿಷ್ಕರಿಸಿದ ಮುಸ್ಲಿಂ ಸಂಘಟನೆಗಳು

ವಕ್ಫ್ ಮಸೂದೆಗೆ ನಿತೀಶ್ ಕುಮಾರ್ ಬೆಂಬಲ | ಇಫ್ತಾರ್ ಕೂಟ ಬಹಿಷ್ಕರಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

2024ರ ವಕ್ಫ್ ತಿದ್ದುಪಡಿ ಮಸೂದೆಗೆ ಜನತಾದಳ (ಯುನೈಟೆಡ್) ಬೆಂಬಲ ನೀಡಿರುವುದನ್ನು ಉಲ್ಲೇಖಿಸಿ ಬಿಹಾರದ ಹಲವಾರು ಮುಸ್ಲಿಂ ಸಂಘಟನೆಗಳು ಭಾನುವಾರ ಪಾಟ್ನಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನೆಯಲ್ಲಿ ಆಯೋಜಿಸಿದ್ದ ಇಫ್ತಾರ್ ಔತಣಕೂಟವನ್ನು ಬಹಿಷ್ಕರಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ. ವಕ್ಫ್ ಮಸೂದೆಗೆ ನಿತೀಶ್

ಏಳು ಮುಸ್ಲಿಂ ಸಂಘಟನೆಗಳು ನಿತೀಶ್‌ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ, ಜಾತ್ಯತೀತ ಸರ್ಕಾರ ನೀಡುವುದಾಗಿ ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯ ಭರವಸೆಯ ಮೇರೆಗೆ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಬಿಜೆಪಿಯೊಂದಿಗಿನ ನಿಮ್ಮ ಮೈತ್ರಿ ಮತ್ತು ತರ್ಕಬದ್ಧವಲ್ಲದ ಮತ್ತು ಸಂವಿಧಾನಬಾಹಿರ ವಕ್ಫ್ ತಿದ್ದುಪಡಿ ಮಸೂದೆಗೆ ನಿಮ್ಮ ಬೆಂಬಲವು ನಿಮ್ಮ ಅದೇ ಭರವಸೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಉಲ್ಲೇಖಿಸಿವೆ.

ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಬಿಹಾರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಕೇಂದ್ರದಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಯ ಭಾಗವಾಗಿದೆ.

ವಕ್ಫ್ ಮಸೂದೆಯನ್ನು ವಿರೋಧ ಪಕ್ಷದ ಇಂಡಿಯಾ ಮೈತ್ರಿಯ ನಾಯಕರು ಮತ್ತು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ. ಈ ಮಸೂದೆಯು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮತ್ತು ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ. ಈ ಕಾಯ್ದೆಗೆ ಕೊನೆಯದಾಗಿ 2013 ರಲ್ಲಿ ತಿದ್ದುಪಡಿ ತರಲಾಗಿದೆ.

ಆದಾಗ್ಯೂ, ನಿತೀಶ್ ನೇತೃತ್ವದ ಜನತಾ ದಳ (ಯುನೈಟೆಡ್) ಕಾಯ್ದೆಗೆ ತರಲಾಗುತ್ತಿರುವ ಪ್ರಸ್ತಾವಿತ ತಿದ್ದುಪಡಿಗಳನ್ನು ಬೆಂಬಲಿಸಿದ್ದು, ಈ ಬದಲಾವಣೆಗಳು ಮುಸ್ಲಿಂ ವಿರೋಧಿಯಲ್ಲ ಎಂದು ಹೇಳಿದೆ ಎಂದು ದಿ ಹಿಂದೂ ವರದಿ ಮಾಡಿದೆ. ವಕ್ಫ್ ಮಂಡಳಿಗಳ ಕಾರ್ಯಾಚರಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಮಸೂದೆ ಹೊಂದಿದ್ದು, ಬದಲಾಗಿ ಮಸೀದಿಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನವಲ್ಲ ಎಂದು ಪಕ್ಷ ಹೇಳಿದೆ.

ವಕ್ಫ್ ಎಂದರೆ ಮುಸ್ಲಿಮರು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ನೀಡುವ ಆಸ್ತಿ. ಭಾರತದಲ್ಲಿ, ವಕ್ಫ್‌ಗಳನ್ನು ವಕ್ಫ್ ಕಾಯ್ದೆಯಡಿಯಲ್ಲಿ ನಿಯಂತ್ರಿಸಲಾಗುತ್ತದೆ. ಪ್ರತಿಯೊಂದು ರಾಜ್ಯವು ಕಾನೂನು ಘಟಕದ ನೇತೃತ್ವದಲ್ಲಿ ವಕ್ಫ್ ಮಂಡಳಿಯನ್ನು ಹೊಂದಿದ್ದು, ಅದು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು, ಹಿಡಿದಿಡಲು ಮತ್ತು ವರ್ಗಾಯಿಸಲು ಅಧಿಕಾರ ಹೊಂದಿದೆ.

“ನಿಮ್ಮ ಇಫ್ತಾರ್ ಹಬ್ಬದ ಉದ್ದೇಶವು ಸದ್ಭಾವನೆ ಮತ್ತು ವಿಶ್ವಾಸವನ್ನು ಉತ್ತೇಜಿಸುವುದು. ಆದರೆ ಅಂತಹ ವಿಶ್ವಾಸವನ್ನು ಔಪಚಾರಿಕ ಹಬ್ಬಗಳಿಂದ ಮಾತ್ರ ನಿರ್ಮಿಸಲು ಸಾಧ್ಯವಿಲ್ಲ. ಅದನ್ನು ಸಂಕೀರ್ಣ ನೀತಿ ಕ್ರಮಗಳಿಂದ ನಿರ್ಮಿಸಲಾಗುತ್ತದೆ” ಎಂದು ಮುಸ್ಲಿಂ ಸಂಘಟನೆಗಳು ಪತ್ರದಲ್ಲಿ ಉಲ್ಲೇಖಿಸಿವೆ.

“ಮುಸ್ಲಿಮರ ಕಾನೂನುಬದ್ಧ ಬೇಡಿಕೆಗಳನ್ನು ನಿಮ್ಮ ಸರ್ಕಾರವು ನಿರ್ಲಕ್ಷಿಸುವುದರಿಂದ, ಇಫ್ತಾರ್‌ನಂತಹ ಔಪಚಾರಿಕ ಹಬ್ಬಗಳು ಅರ್ಥಹೀನವಾಗುತ್ತವೆ.” ಎಂದು ಪತ್ರವು ಹೇಳಿದೆ.

ಕೇಂದ್ರದ ಕರಡು ಶಾಸನವು ಜಾರಿಗೆ ಬಂದರೆ, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಮಹಿಳಾ ಕೇಂದ್ರಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಶತಮಾನಗಳಷ್ಟು ಹಳೆಯದಾದ ವಕ್ಫ್ ಆಸ್ತಿಗಳ ಹಕ್ಕನ್ನು ತೆಗೆದುಹಾಕುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇದು ಸಾಚಾರ್ ಸಮಿತಿ ವರದಿಯಲ್ಲಿ ಈಗಾಗಲೇ ಹೇಳಿರುವಂತೆ ಮುಸ್ಲಿಂ ಸಮುದಾಯದಲ್ಲಿ ಬಡತನ ಮತ್ತು ಅಭಾವವನ್ನು ಮತ್ತಷ್ಟು ಹೆಚ್ಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವು 2005 ರಲ್ಲಿ ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಾಚಾರ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿತ್ತು. ವರದಿಯನ್ನು ನವೆಂಬರ್ 2006 ರಲ್ಲಿ ಸಲ್ಲಿಸಲಾಯಿತು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಇಮಾರತ್-ಎ-ಶರಿಯಾ, ಜಮಿಯತ್ ಉಲಮಾ-ಇ-ಹಿಂದ್, ಜಮಿಯತ್ ಅಹ್ಲೆ ಹದೀಸ್, ಜಮಾತ್‌-ಎ-ಇಸ್ಲಾಮಿ ಹಿಂದ್, ಖಾಂಕಾ ಮುಜಿಬಿಯಾ ಮತ್ತು ಖಾಂಕಾ ರಹಮಾನಿ ಎಂಬ ಸಂಘಟನೆಗಳು ಮುಖ್ಯಮಂತ್ರಿಯ ಇಫ್ತಾರ್ ಆಹ್ವಾನವನ್ನು ತಿರಸ್ಕರಿಸಿ ತಮ್ಮ ಪ್ರತಿಭಟನೆಗಳನ್ನು ದಾಖಲಿಸಿದೆ.

ಮತ್ತೊಂದು ಮುಸ್ಲಿಂ ಸಂಘಟನೆಯಾದ ಇಮಾರತ್-ಎ-ಶರಿಯಾ ಕೂಡಾ ನಿತೀಶ್ ಕುಮಾರ್ ಅವರು ಮಸೂದೆಗೆ ಬೆಂಬಲ ನೀಡಿರುವುದನ್ನು ಪ್ರತಿಭಟಿಸಿ ಆಯೋಜಿಸಿದ್ದ “ಸರ್ಕಾರಿ” ಇಫ್ತಾರ್‌ಗೆ ಹಾಜರಾಗುವುದಿಲ್ಲ ಎಂದು ಘೋಷಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದಾಗ್ಯೂ, ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿದ್ದರೂ ಮುಸ್ಲಿಂ ಸಮುದಾಯದ ಹಲವಾರು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇಮಾರತ್-ಎ-ಶರಿಯಾ ಬಹಿಷ್ಕಾರದ ಕರೆಗೆ ಪ್ರತಿಕ್ರಿಯಿಸಿರುವ ಜನತಾದಳ (ಯುನೈಟೆಡ್) ವಕ್ತಾರ ನೀರಜ್ ಕುಮಾರ್, ಇದು “ಅನಪೇಕ್ಷಿತ” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಹಲವಾರು ಮುಸ್ಲಿಂ ನಾಯಕರು ನಮ್ಮ ಇಫ್ತಾರ್‌ನಲ್ಲಿ ಭಾಗವಹಿಸಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಅವರು ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ವಕ್ಫ್ ಮಸೂದೆಯಲ್ಲಿನ 44 ತಿದ್ದುಪಡಿಗಳು, ವಕ್ಫ್ ಮಂಡಳಿಗಳ ಅಧಿಕಾರವನ್ನು ಮೊಟಕುಗೊಳಿಸಲು ಮತ್ತು ಅವುಗಳ ಮೇಲೆ ಹೆಚ್ಚಿನ ಸರ್ಕಾರಿ ನಿಯಂತ್ರಣವನ್ನು ಅನುಮತಿಸಲು ಪ್ರಸ್ತಾಪಿಸುತ್ತವೆ. ಅವು ಮುಸ್ಲಿಮೇತರರು ಮಂಡಳಿಯ ಸದಸ್ಯರಾಗಲು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸಲು ಮತ್ತು ವಕ್ಫ್ ನ್ಯಾಯಮಂಡಳಿಗಳ ಕಾರ್ಯವನ್ನು ಬದಲಾಯಿಸಲು ಸಹ ಅವಕಾಶ ನೀಡುತ್ತವೆ.

ವಿರೋಧ ಪಕ್ಷದ ಆಕ್ಷೇಪಣೆಗಳ ನಂತರ ಆಗಸ್ಟ್ 8 ರಂದು ಕರಡು ಶಾಸನವನ್ನು ಜಂಟಿ ಸಂಸದೀಯ ಸಮಿತಿಗೆ ಉಲ್ಲೇಖಿಸಲಾಯಿತು. ಜನವರಿ 29 ರಂದು, ಜಂಟಿ ಸಂಸದೀಯ ಸಮಿತಿಯು ಪರಿಷ್ಕೃತ 2024 ರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮತ ಚಲಾಯಿಸಿದ ನಂತರ ಅಂಗೀಕರಿಸಿತು. ಅದರ ಕರಡು ವರದಿಯ ಪರವಾಗಿ 15 ಮತಗಳು ಮತ್ತು ವಿರುದ್ಧವಾಗಿ 11 ಮತಗಳು ಬಂದವು. ಎರಡು ದಿನಗಳ ಹಿಂದೆ, NDA ಸದಸ್ಯರ ಪ್ರಸ್ತಾವನೆಗಳನ್ನು ಸ್ವೀಕರಿಸಿದ ನಂತರ ಅದು ಮಸೂದೆಯನ್ನು ಅಂಗೀಕರಿಸಿತು. ಜೊತೆಗೆ, ವಿರೋಧ ಪಕ್ಷದ ಸಂಸದರು ಪ್ರಸ್ತಾಪಿಸಿದ ತಿದ್ದುಪಡಿಗಳನ್ನು ತಿರಸ್ಕರಿಸಲಾಯಿತು. ವಕ್ಫ್ ಮಸೂದೆಗೆ ನಿತೀಶ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪಲ್ಟು ಚಾಚಾ ಕಹಾ ಹೈ..’; ಸಿಎಂ ನಿತೀಶ್ ಕುಮಾರ್ ನಿವಾಸದ ಮುಂದೆ ಹೋಳಿ ಆಚರಿಸಿದ ತೇಜ್ ಪ್ರತಾಪ್

‘ಪಲ್ಟು ಚಾಚಾ ಕಹಾ ಹೈ..’; ಸಿಎಂ ನಿತೀಶ್ ಕುಮಾರ್ ನಿವಾಸದ ಮುಂದೆ ಹೋಳಿ ಆಚರಿಸಿದ ತೇಜ್ ಪ್ರತಾಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...