Homeಮುಖಪುಟವಕ್ಫ್ ಮಸೂದೆ | ಸದನ ಸಮಿತಿ ಸಭೆಯಿಂದ ಹೊರ ನಡೆದ ಪ್ರತಿಪಕ್ಷ ಸಂಸದರು

ವಕ್ಫ್ ಮಸೂದೆ | ಸದನ ಸಮಿತಿ ಸಭೆಯಿಂದ ಹೊರ ನಡೆದ ಪ್ರತಿಪಕ್ಷ ಸಂಸದರು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲನೆಗೆ ರಚಿಸಿರುವ ಜಂಟಿ ಸದನ ಸಮಿತಿ ಕಾನೂನು ಹಾಗೂ ನಿಯಮಾವಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿರುವ ಪ್ರತಿ ಪಕ್ಷಗಳ ಸಂಸದರು, ಸೋಮವಾರ ನಡೆದ ಸಭೆಯಿಂದ ಹೊರ ನಡೆದರು.

ಸಂಸತ್‌ನಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷಗಳ ಸಂಸದರ ನಡುವೆ ಮಾತಿನ ಚಕಮಕಿ ನಡೆಯಿತು. ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ವಕ್ಫ್ ಸಮಿತಿಯ ಸಭೆಗೆ ಹಿಂದುತ್ವ ಮುಖಂಡರನ್ನು ಆಹ್ವಾನಿಸಿದ್ದಕ್ಕೆ ಸಮಿತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರ ಹೆಸರೆತ್ತಿದ ಮಾಣಿಪ್ಪಾಡಿ 

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ರೆಹಮಾನ್ ಖಾನ್ ಅವರು ವಕ್ಫ್‌ಗೆ ಸಂಬಂಧಿಸಿದ ಆಸ್ತಿಗಳ ಕಬಳಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿಯ ಮಾಜಿ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಆರೋಪಿಸಿದರು.

ಉನ್ನತ ನಾಯಕರ ಮೇಲೆ ಆರೋಪ ಸಾಭೀತಾಗದೆ ಅವರ ಹೆಸರು ಉಲ್ಲೇಖಿಸಿದ್ದಕ್ಕೆ ಪ್ರತಿಪಕ್ಷ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಸಮಿತಿಯ ಅಧ್ಯಕ್ಷ ಜಗದಾಂಬಿಕ ಪಾಲ್ ಅವರು ಪ್ರತಿಪಕ್ಷ ಸಂಸದರ ವಿರೋಧ ಲೆಕ್ಕಿಸದೆ ಅನ್ವರ್ ಮಾಣಿಪ್ಪಾಡಿ ಅವರಿಗೆ ಮಾತನಾಡಲು ಅವಕಾಶ ಕೊಟ್ಟರು.

ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಸಂಸದರಾದ ಗೌರವ್ ಗೊಗೋಯ್, ಇಮ್ರಾನ್ ಮಸೂದ್, ಡಿಎಂಕೆಯ ಎ.ರಾಜಾ, ಶಿವಸೇನೆ (ಯುಬಿಟಿ) ಯ ಅರವಿಂದ್ ಸಾವಂತ್, ಎಐಎಂಐಎಂನ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ಮೊಹಿಬ್ಬುಲ್ಲಾ, ಆಮ್‌ ಆದ್ಮಿ ಪಕ್ಷದ ಸಂಜಯ್ ಸಿಂಗ್ ಅವರು ಸಭೆಯಿಂದ ಹೊರ ನಡೆದರು.

ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲನೆ ನಡೆಸುತ್ತಿರುವ ಜಂಟಿ ಸದನ ಸಮಿತಿ ಕಾನೂನಿಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಶಿವಸೇನೆಯ ಅರವಿಂದ್ ಸಾವಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮುಂದಿನ ಕಾರ್ಯವಿಧಾನಗಳ ಕುರಿತು ಪ್ರತಿಪಕ್ಷಗಳ ಸಂಸದರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಕುರಿತು ಲೋಕಸಭಾ ಸ್ವೀಕರ್‌ಗೆ ಇಂದು (ಮಂಗಳವಾರ) ಪತ್ರ ಬರೆಯುವ ಸಾಧ್ಯತೆ ಇದೆ.

ಹಿಂದುತ್ವ ನಾಯಕರ ಆಹ್ವಾನಕ್ಕೆ ವಿರೋಧ

ವಕ್ಫ್‌ ಮಸೂದೆಗೆ ಸಂಬಂಧಿಸಿದ ಸಮಿತಿಯ ಸಭೆಗೆ ಹಿಂದುತ್ವ ಸಂಘಟನೆಗಳ ನಾಯಕರನ್ನು ಆಹ್ವಾನಿಸಿದ್ದಕ್ಕೆ ಪ್ರತಿಪಕ್ಷಗಳ ಸಂಸದರು ವಿರೋಧ ವ್ಯಕ್ತಪಡಿಸಿದರು. ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ವಕ್ಫ್ ಕುರಿತು ಹಿಂದುತ್ವ ನಾಯಕರ ಅಭಿಪ್ರಾಯ ಕೇಳುವ ಔಚಿತ್ಯವನ್ನು ಪ್ರಶ್ನಿಸಿದರು.

ಮೂಲಭೂತ ಸಿದ್ದಾಂತ ಹೊಂದಿರುವ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಂಸ್ಥೆಯು ‘ಹಿಂದೂ ರಾಷ್ಟ್ರ ನಿರ್ಮಾಣ’ದ ಗುರಿ ಹೊಂದಿವೆ. ಇಂತವರಿಗೆ ಆಹ್ವಾನ ನೀಡಿರುವುದು ಸರಿಯಲ್ಲ ಎಂದು ಸಮಿತಿ ಅಧ್ಯಕ್ಷ ಜಗದಾಂಬ ಪಾಲ್‌ಗೆ ಬರೆದ ಪತ್ರದಲ್ಲಿ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಹಿಂದುತ್ವ ಪರ ವಕೀಲರಾದ ವಿಷ್ಣು ಶಂಕರ್ ಜೈನ್, ಅಶ್ವಿನಿ ಉಪಾಧ್ಯಾಯ್, ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್ ದೇಗುಲದ ಮಹಾಂತ ಸುಧೀರ್‌ಧಾಸ್ ಮಹಾರಾಜ್ ಅವರನ್ನು ಸಭೆಗೆ ಕರೆದಿದ್ದಕ್ಕೆ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಜಂ-ಇಯತುಲ್-ಉಲೇಮಾ-ಎ-ಹಿಂದ್‌ನ ಮುಹಮ್ಮದ್ ಮದನಿ ಕೂಡ ಭಾಗವಹಿಸಿದ್ದರು. ತಿದ್ದುಪಡಿ ಮಸೂದೆಗೆ ಜಂ-ಇಯತುಲ್-ಉಲೇಮಾ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಬಂಗಾಳದ ಪ್ರತಿಭಟನಾನಿರತ ಕಿರಿಯ ವೈದ್ಯರ ಬೆಂಬಲಕ್ಕೆ ನಿಂತ ಐಎಂಎ; ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...