Homeಮುಖಪುಟವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

ವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ವಿರೋಧ ಪಕ್ಷದ ಸದಸ್ಯರು ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾಗಿ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಪಕ್ಷಗಳು ಸ್ಪೀಕರ್ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ವಿರುದ್ಧ ದೂರು ದಾಖಲಿಸಿದ್ದು, ನಿರ್ಣಾಯಕ ವಿಷಯದ ಕಲಾಪವನ್ನು ಬುಡಮೇಲು ಮಾಡಿದ್ದಾರೆ ಎಂದು ಆರೋಪಿಸಿವೆ. ವಕ್ಫ್ ಮಸೂದೆಯ

“ಸಮಿತಿಯ ಅಧ್ಯಕ್ಷರು ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸುತ್ತಿಲ್ಲ ಎಂದು ನಾವು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದೇವೆ. ಅವರು ಆತುರಪಡುತ್ತಿದ್ದು, ಕಲಾಪವನ್ನು ಬುಡಮೇಲು ಮಾಡುತ್ತಿದ್ದಾರೆ” ಎಂದು ಡಿಎಂಕೆ ಸದಸ್ಯ ಎ. ರಾಜಾ ಸ್ಪೀಕರ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಕ್ಫ್ ತಿದ್ದುಪಡಿ ಮಸೂದೆಯು ಅಸ್ತಿತ್ವದಲ್ಲಿರುವ ಕಾನೂನಿಗೆ ಹಲವಾರು ಪ್ರಮುಖ ಬದಲಾವಣೆಗಳನ್ನು ಒಳಗೊಂಡಿರುವ ವಿಸ್ತಾರವಾದ ಶಾಸನವಾಗಿದೆ ಎಂಬುದನ್ನು ಮೊದಲು ಗಮನಿಸಬೇಕು. ಈ ಬದಲಾವಣೆಗಳು ಭಾರತದ ಜನಮುದಾಯದ ದೊಡ್ಡ ವರ್ಗದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ವರದಿಯನ್ನು ಅಂತಿಮಗೊಳಿಸಲು ಕೇವಲ ಮೂರು ತಿಂಗಳ ಸಮಯವು ಅಸಮರ್ಪಕವಾಗಿದ್ದು, ಮಾತ್ರವಲ್ಲದೆ ಅನುಚಿತ ಶಿಫಾರಸುಗಳಿಗೆ ಕಾರಣವಾಗಲಿದೆ” ಎಂದು ಪ್ರತಿಪಕ್ಷಗಳು ಪತ್ರದಲ್ಲಿ ತಿಳಿಸಿವೆ.

“ಆದ್ದರಿಂದ ಸೂಕ್ತ ಸಮಾಲೋಚನೆಗಾಗಿ, ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾದ ಸಮಯದವರೆಗೆ ವಿಸ್ತರಿಸಬೇಕು” ಎಂದು ಪತ್ರವು ಸ್ಪೀಕರ್‌ಗೆ ಆಗ್ರಹಿಸಿದೆ. ವಕ್ಫ್ ಮಸೂದೆಯ

ಸ್ಪೀಕರ್ ಅವರನ್ನು ಭೇಟಿಯಾದವರಲ್ಲಿ ಡಿಎಂಕೆ ನಾಯಕರಾದ ರಾಜಾ ಮತ್ತು ಎಂ. ಅಬ್ದುಲ್ಲಾ, ಕಾಂಗ್ರೆಸ್ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ತೃಣಮೂಲ ಸದಸ್ಯರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ಎಂ. ನಾದಿಮುಲ್ ಹಕ್, ಎಎಪಿ ಸದಸ್ಯ ಸಂಜಯ್ ಸಿಂಗ್, ಎಸ್‌ಪಿ ಸದಸ್ಯ ಮೊಹಿಬ್ಬುಲ್ಲಾ ಮತ್ತು ಎಐಎಂಐಎಂ ಸದಸ್ಯ ಅಸಾದುದ್ದೀನ್ ಓವೈಸಿ ಅವರು ಇದ್ದರು.

“ಸಮಿತಿಯ ಅಧ್ಯಕ್ಷರು ಜಂಟಿ ಸಂಸದೀಯ ಸಮಿತಿಯ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಿಲ್ಲ ಮತ್ತು ನವೆಂಬರ್ 29 ರಂದು ಸಂಸತ್ತಿನಲ್ಲಿ ವರದಿಯನ್ನು ಮಂಡಿಸಬೇಕು ಎಂದು ಸ್ವಯಂ ಪ್ರೇರಿತವಾಗಿ ಘೋಷಿಸಿದ್ದಾರೆ. ಪ್ರಸ್ತಾವಿತ ಮಸೂದೆಯ ಭಿನ್ನಮತದ ಟಿಪ್ಪಣಿಗಳು ಮತ್ತು ಪ್ರತಿ ಷರತ್ತಿನ ಮೇಲೆ ಮತ ಚಲಾಯಿಸುವುದು ಸೇರಿದಂತೆ ಹಲವು ಕಾರ್ಯವಿಧಾನಗಳಿವೆ. ಇವೆಲ್ಲವೂ ಆಗಬೇಕು” ಎಂದು ಎ. ರಾಜಾ ಹೇಳಿದ್ದಾರೆ.

ಸಂಸದೀಯ ಸಮಿತಿಯು 25 ಸಭೆಗಳನ್ನು ನಡೆಸಿದ್ದು, ಅದರಲ್ಲಿ ಹಲವಾರು ಅಪ್ರಸ್ತುತ ಸಂಸ್ಥೆಗಳ ಪುರಾವೆಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ, ಆದರೆ ಬಿಹಾರ, ದೆಹಲಿ ಮತ್ತು ಉತ್ತರ ಪ್ರದೇಶದಂತಹ ವಿವಿಧ ರಾಜ್ಯ ಸರ್ಕಾರಗಳ ಪ್ರಸ್ತುತಿಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಸಂಸದೀಯ ಸಮಿತಿಯಿಂದ ವರದಿಯನ್ನು ನಿರೀಕ್ಷಿಸಿ ಪ್ರಸ್ತುತ ಪ್ರಾರಂಭವಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಶಾಸಕಾಂಗ ಕಾರ್ಯಸೂಚಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಪಟ್ಟಿ ಮಾಡಿದೆ.

ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ‘ವಕ್ಫ್ ಕಾಯಿದೆ-1995’ ಅನ್ನು ತಿದ್ದುಪಡಿ ಮಾಡಲು ಈ ಮಸೂದೆಯು ಪ್ರಯತ್ನಿಸುತ್ತಿದೆ. ಆದರೆ ಭಾರತದಾದ್ಯಂತ ಈ ಮಸೂದೆಗೆ ವಿರೋಧ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ವಕ್ಭ್‌ ಆಸ್ತಿಗಳನ್ನು ಕಬಳಿಸಿ, ಮುಸ್ಲಿಮರಿಗೆ ಅನ್ಯಾಯ ಎಸಗಲು ಇದನ್ನು ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈಗಾಗಲೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ 

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...