Homeಮುಖಪುಟವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

ವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ವಿರೋಧ ಪಕ್ಷದ ಸದಸ್ಯರು ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾಗಿ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಪಕ್ಷಗಳು ಸ್ಪೀಕರ್ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ವಿರುದ್ಧ ದೂರು ದಾಖಲಿಸಿದ್ದು, ನಿರ್ಣಾಯಕ ವಿಷಯದ ಕಲಾಪವನ್ನು ಬುಡಮೇಲು ಮಾಡಿದ್ದಾರೆ ಎಂದು ಆರೋಪಿಸಿವೆ. ವಕ್ಫ್ ಮಸೂದೆಯ

“ಸಮಿತಿಯ ಅಧ್ಯಕ್ಷರು ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸುತ್ತಿಲ್ಲ ಎಂದು ನಾವು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದೇವೆ. ಅವರು ಆತುರಪಡುತ್ತಿದ್ದು, ಕಲಾಪವನ್ನು ಬುಡಮೇಲು ಮಾಡುತ್ತಿದ್ದಾರೆ” ಎಂದು ಡಿಎಂಕೆ ಸದಸ್ಯ ಎ. ರಾಜಾ ಸ್ಪೀಕರ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಕ್ಫ್ ತಿದ್ದುಪಡಿ ಮಸೂದೆಯು ಅಸ್ತಿತ್ವದಲ್ಲಿರುವ ಕಾನೂನಿಗೆ ಹಲವಾರು ಪ್ರಮುಖ ಬದಲಾವಣೆಗಳನ್ನು ಒಳಗೊಂಡಿರುವ ವಿಸ್ತಾರವಾದ ಶಾಸನವಾಗಿದೆ ಎಂಬುದನ್ನು ಮೊದಲು ಗಮನಿಸಬೇಕು. ಈ ಬದಲಾವಣೆಗಳು ಭಾರತದ ಜನಮುದಾಯದ ದೊಡ್ಡ ವರ್ಗದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ವರದಿಯನ್ನು ಅಂತಿಮಗೊಳಿಸಲು ಕೇವಲ ಮೂರು ತಿಂಗಳ ಸಮಯವು ಅಸಮರ್ಪಕವಾಗಿದ್ದು, ಮಾತ್ರವಲ್ಲದೆ ಅನುಚಿತ ಶಿಫಾರಸುಗಳಿಗೆ ಕಾರಣವಾಗಲಿದೆ” ಎಂದು ಪ್ರತಿಪಕ್ಷಗಳು ಪತ್ರದಲ್ಲಿ ತಿಳಿಸಿವೆ.

“ಆದ್ದರಿಂದ ಸೂಕ್ತ ಸಮಾಲೋಚನೆಗಾಗಿ, ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾದ ಸಮಯದವರೆಗೆ ವಿಸ್ತರಿಸಬೇಕು” ಎಂದು ಪತ್ರವು ಸ್ಪೀಕರ್‌ಗೆ ಆಗ್ರಹಿಸಿದೆ. ವಕ್ಫ್ ಮಸೂದೆಯ

ಸ್ಪೀಕರ್ ಅವರನ್ನು ಭೇಟಿಯಾದವರಲ್ಲಿ ಡಿಎಂಕೆ ನಾಯಕರಾದ ರಾಜಾ ಮತ್ತು ಎಂ. ಅಬ್ದುಲ್ಲಾ, ಕಾಂಗ್ರೆಸ್ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ತೃಣಮೂಲ ಸದಸ್ಯರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ಎಂ. ನಾದಿಮುಲ್ ಹಕ್, ಎಎಪಿ ಸದಸ್ಯ ಸಂಜಯ್ ಸಿಂಗ್, ಎಸ್‌ಪಿ ಸದಸ್ಯ ಮೊಹಿಬ್ಬುಲ್ಲಾ ಮತ್ತು ಎಐಎಂಐಎಂ ಸದಸ್ಯ ಅಸಾದುದ್ದೀನ್ ಓವೈಸಿ ಅವರು ಇದ್ದರು.

“ಸಮಿತಿಯ ಅಧ್ಯಕ್ಷರು ಜಂಟಿ ಸಂಸದೀಯ ಸಮಿತಿಯ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಿಲ್ಲ ಮತ್ತು ನವೆಂಬರ್ 29 ರಂದು ಸಂಸತ್ತಿನಲ್ಲಿ ವರದಿಯನ್ನು ಮಂಡಿಸಬೇಕು ಎಂದು ಸ್ವಯಂ ಪ್ರೇರಿತವಾಗಿ ಘೋಷಿಸಿದ್ದಾರೆ. ಪ್ರಸ್ತಾವಿತ ಮಸೂದೆಯ ಭಿನ್ನಮತದ ಟಿಪ್ಪಣಿಗಳು ಮತ್ತು ಪ್ರತಿ ಷರತ್ತಿನ ಮೇಲೆ ಮತ ಚಲಾಯಿಸುವುದು ಸೇರಿದಂತೆ ಹಲವು ಕಾರ್ಯವಿಧಾನಗಳಿವೆ. ಇವೆಲ್ಲವೂ ಆಗಬೇಕು” ಎಂದು ಎ. ರಾಜಾ ಹೇಳಿದ್ದಾರೆ.

ಸಂಸದೀಯ ಸಮಿತಿಯು 25 ಸಭೆಗಳನ್ನು ನಡೆಸಿದ್ದು, ಅದರಲ್ಲಿ ಹಲವಾರು ಅಪ್ರಸ್ತುತ ಸಂಸ್ಥೆಗಳ ಪುರಾವೆಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ, ಆದರೆ ಬಿಹಾರ, ದೆಹಲಿ ಮತ್ತು ಉತ್ತರ ಪ್ರದೇಶದಂತಹ ವಿವಿಧ ರಾಜ್ಯ ಸರ್ಕಾರಗಳ ಪ್ರಸ್ತುತಿಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಸಂಸದೀಯ ಸಮಿತಿಯಿಂದ ವರದಿಯನ್ನು ನಿರೀಕ್ಷಿಸಿ ಪ್ರಸ್ತುತ ಪ್ರಾರಂಭವಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಶಾಸಕಾಂಗ ಕಾರ್ಯಸೂಚಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಪಟ್ಟಿ ಮಾಡಿದೆ.

ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ‘ವಕ್ಫ್ ಕಾಯಿದೆ-1995’ ಅನ್ನು ತಿದ್ದುಪಡಿ ಮಾಡಲು ಈ ಮಸೂದೆಯು ಪ್ರಯತ್ನಿಸುತ್ತಿದೆ. ಆದರೆ ಭಾರತದಾದ್ಯಂತ ಈ ಮಸೂದೆಗೆ ವಿರೋಧ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ವಕ್ಭ್‌ ಆಸ್ತಿಗಳನ್ನು ಕಬಳಿಸಿ, ಮುಸ್ಲಿಮರಿಗೆ ಅನ್ಯಾಯ ಎಸಗಲು ಇದನ್ನು ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈಗಾಗಲೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ 

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...