Homeಮುಖಪುಟವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

ವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ವಿರೋಧ ಪಕ್ಷದ ಸದಸ್ಯರು ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾಗಿ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಪಕ್ಷಗಳು ಸ್ಪೀಕರ್ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ವಿರುದ್ಧ ದೂರು ದಾಖಲಿಸಿದ್ದು, ನಿರ್ಣಾಯಕ ವಿಷಯದ ಕಲಾಪವನ್ನು ಬುಡಮೇಲು ಮಾಡಿದ್ದಾರೆ ಎಂದು ಆರೋಪಿಸಿವೆ. ವಕ್ಫ್ ಮಸೂದೆಯ

“ಸಮಿತಿಯ ಅಧ್ಯಕ್ಷರು ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸುತ್ತಿಲ್ಲ ಎಂದು ನಾವು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದೇವೆ. ಅವರು ಆತುರಪಡುತ್ತಿದ್ದು, ಕಲಾಪವನ್ನು ಬುಡಮೇಲು ಮಾಡುತ್ತಿದ್ದಾರೆ” ಎಂದು ಡಿಎಂಕೆ ಸದಸ್ಯ ಎ. ರಾಜಾ ಸ್ಪೀಕರ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಕ್ಫ್ ತಿದ್ದುಪಡಿ ಮಸೂದೆಯು ಅಸ್ತಿತ್ವದಲ್ಲಿರುವ ಕಾನೂನಿಗೆ ಹಲವಾರು ಪ್ರಮುಖ ಬದಲಾವಣೆಗಳನ್ನು ಒಳಗೊಂಡಿರುವ ವಿಸ್ತಾರವಾದ ಶಾಸನವಾಗಿದೆ ಎಂಬುದನ್ನು ಮೊದಲು ಗಮನಿಸಬೇಕು. ಈ ಬದಲಾವಣೆಗಳು ಭಾರತದ ಜನಮುದಾಯದ ದೊಡ್ಡ ವರ್ಗದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ವರದಿಯನ್ನು ಅಂತಿಮಗೊಳಿಸಲು ಕೇವಲ ಮೂರು ತಿಂಗಳ ಸಮಯವು ಅಸಮರ್ಪಕವಾಗಿದ್ದು, ಮಾತ್ರವಲ್ಲದೆ ಅನುಚಿತ ಶಿಫಾರಸುಗಳಿಗೆ ಕಾರಣವಾಗಲಿದೆ” ಎಂದು ಪ್ರತಿಪಕ್ಷಗಳು ಪತ್ರದಲ್ಲಿ ತಿಳಿಸಿವೆ.

“ಆದ್ದರಿಂದ ಸೂಕ್ತ ಸಮಾಲೋಚನೆಗಾಗಿ, ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾದ ಸಮಯದವರೆಗೆ ವಿಸ್ತರಿಸಬೇಕು” ಎಂದು ಪತ್ರವು ಸ್ಪೀಕರ್‌ಗೆ ಆಗ್ರಹಿಸಿದೆ. ವಕ್ಫ್ ಮಸೂದೆಯ

ಸ್ಪೀಕರ್ ಅವರನ್ನು ಭೇಟಿಯಾದವರಲ್ಲಿ ಡಿಎಂಕೆ ನಾಯಕರಾದ ರಾಜಾ ಮತ್ತು ಎಂ. ಅಬ್ದುಲ್ಲಾ, ಕಾಂಗ್ರೆಸ್ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ತೃಣಮೂಲ ಸದಸ್ಯರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ಎಂ. ನಾದಿಮುಲ್ ಹಕ್, ಎಎಪಿ ಸದಸ್ಯ ಸಂಜಯ್ ಸಿಂಗ್, ಎಸ್‌ಪಿ ಸದಸ್ಯ ಮೊಹಿಬ್ಬುಲ್ಲಾ ಮತ್ತು ಎಐಎಂಐಎಂ ಸದಸ್ಯ ಅಸಾದುದ್ದೀನ್ ಓವೈಸಿ ಅವರು ಇದ್ದರು.

“ಸಮಿತಿಯ ಅಧ್ಯಕ್ಷರು ಜಂಟಿ ಸಂಸದೀಯ ಸಮಿತಿಯ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಿಲ್ಲ ಮತ್ತು ನವೆಂಬರ್ 29 ರಂದು ಸಂಸತ್ತಿನಲ್ಲಿ ವರದಿಯನ್ನು ಮಂಡಿಸಬೇಕು ಎಂದು ಸ್ವಯಂ ಪ್ರೇರಿತವಾಗಿ ಘೋಷಿಸಿದ್ದಾರೆ. ಪ್ರಸ್ತಾವಿತ ಮಸೂದೆಯ ಭಿನ್ನಮತದ ಟಿಪ್ಪಣಿಗಳು ಮತ್ತು ಪ್ರತಿ ಷರತ್ತಿನ ಮೇಲೆ ಮತ ಚಲಾಯಿಸುವುದು ಸೇರಿದಂತೆ ಹಲವು ಕಾರ್ಯವಿಧಾನಗಳಿವೆ. ಇವೆಲ್ಲವೂ ಆಗಬೇಕು” ಎಂದು ಎ. ರಾಜಾ ಹೇಳಿದ್ದಾರೆ.

ಸಂಸದೀಯ ಸಮಿತಿಯು 25 ಸಭೆಗಳನ್ನು ನಡೆಸಿದ್ದು, ಅದರಲ್ಲಿ ಹಲವಾರು ಅಪ್ರಸ್ತುತ ಸಂಸ್ಥೆಗಳ ಪುರಾವೆಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ, ಆದರೆ ಬಿಹಾರ, ದೆಹಲಿ ಮತ್ತು ಉತ್ತರ ಪ್ರದೇಶದಂತಹ ವಿವಿಧ ರಾಜ್ಯ ಸರ್ಕಾರಗಳ ಪ್ರಸ್ತುತಿಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಸಂಸದೀಯ ಸಮಿತಿಯಿಂದ ವರದಿಯನ್ನು ನಿರೀಕ್ಷಿಸಿ ಪ್ರಸ್ತುತ ಪ್ರಾರಂಭವಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಶಾಸಕಾಂಗ ಕಾರ್ಯಸೂಚಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಪಟ್ಟಿ ಮಾಡಿದೆ.

ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ‘ವಕ್ಫ್ ಕಾಯಿದೆ-1995’ ಅನ್ನು ತಿದ್ದುಪಡಿ ಮಾಡಲು ಈ ಮಸೂದೆಯು ಪ್ರಯತ್ನಿಸುತ್ತಿದೆ. ಆದರೆ ಭಾರತದಾದ್ಯಂತ ಈ ಮಸೂದೆಗೆ ವಿರೋಧ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ವಕ್ಭ್‌ ಆಸ್ತಿಗಳನ್ನು ಕಬಳಿಸಿ, ಮುಸ್ಲಿಮರಿಗೆ ಅನ್ಯಾಯ ಎಸಗಲು ಇದನ್ನು ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈಗಾಗಲೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ 

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...