Homeಮುಖಪುಟವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

ವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ವಿರೋಧ ಪಕ್ಷದ ಸದಸ್ಯರು ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾಗಿ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಪಕ್ಷಗಳು ಸ್ಪೀಕರ್ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ವಿರುದ್ಧ ದೂರು ದಾಖಲಿಸಿದ್ದು, ನಿರ್ಣಾಯಕ ವಿಷಯದ ಕಲಾಪವನ್ನು ಬುಡಮೇಲು ಮಾಡಿದ್ದಾರೆ ಎಂದು ಆರೋಪಿಸಿವೆ. ವಕ್ಫ್ ಮಸೂದೆಯ

“ಸಮಿತಿಯ ಅಧ್ಯಕ್ಷರು ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸುತ್ತಿಲ್ಲ ಎಂದು ನಾವು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದೇವೆ. ಅವರು ಆತುರಪಡುತ್ತಿದ್ದು, ಕಲಾಪವನ್ನು ಬುಡಮೇಲು ಮಾಡುತ್ತಿದ್ದಾರೆ” ಎಂದು ಡಿಎಂಕೆ ಸದಸ್ಯ ಎ. ರಾಜಾ ಸ್ಪೀಕರ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಕ್ಫ್ ತಿದ್ದುಪಡಿ ಮಸೂದೆಯು ಅಸ್ತಿತ್ವದಲ್ಲಿರುವ ಕಾನೂನಿಗೆ ಹಲವಾರು ಪ್ರಮುಖ ಬದಲಾವಣೆಗಳನ್ನು ಒಳಗೊಂಡಿರುವ ವಿಸ್ತಾರವಾದ ಶಾಸನವಾಗಿದೆ ಎಂಬುದನ್ನು ಮೊದಲು ಗಮನಿಸಬೇಕು. ಈ ಬದಲಾವಣೆಗಳು ಭಾರತದ ಜನಮುದಾಯದ ದೊಡ್ಡ ವರ್ಗದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ವರದಿಯನ್ನು ಅಂತಿಮಗೊಳಿಸಲು ಕೇವಲ ಮೂರು ತಿಂಗಳ ಸಮಯವು ಅಸಮರ್ಪಕವಾಗಿದ್ದು, ಮಾತ್ರವಲ್ಲದೆ ಅನುಚಿತ ಶಿಫಾರಸುಗಳಿಗೆ ಕಾರಣವಾಗಲಿದೆ” ಎಂದು ಪ್ರತಿಪಕ್ಷಗಳು ಪತ್ರದಲ್ಲಿ ತಿಳಿಸಿವೆ.

“ಆದ್ದರಿಂದ ಸೂಕ್ತ ಸಮಾಲೋಚನೆಗಾಗಿ, ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾದ ಸಮಯದವರೆಗೆ ವಿಸ್ತರಿಸಬೇಕು” ಎಂದು ಪತ್ರವು ಸ್ಪೀಕರ್‌ಗೆ ಆಗ್ರಹಿಸಿದೆ. ವಕ್ಫ್ ಮಸೂದೆಯ

ಸ್ಪೀಕರ್ ಅವರನ್ನು ಭೇಟಿಯಾದವರಲ್ಲಿ ಡಿಎಂಕೆ ನಾಯಕರಾದ ರಾಜಾ ಮತ್ತು ಎಂ. ಅಬ್ದುಲ್ಲಾ, ಕಾಂಗ್ರೆಸ್ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ತೃಣಮೂಲ ಸದಸ್ಯರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ಎಂ. ನಾದಿಮುಲ್ ಹಕ್, ಎಎಪಿ ಸದಸ್ಯ ಸಂಜಯ್ ಸಿಂಗ್, ಎಸ್‌ಪಿ ಸದಸ್ಯ ಮೊಹಿಬ್ಬುಲ್ಲಾ ಮತ್ತು ಎಐಎಂಐಎಂ ಸದಸ್ಯ ಅಸಾದುದ್ದೀನ್ ಓವೈಸಿ ಅವರು ಇದ್ದರು.

“ಸಮಿತಿಯ ಅಧ್ಯಕ್ಷರು ಜಂಟಿ ಸಂಸದೀಯ ಸಮಿತಿಯ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಿಲ್ಲ ಮತ್ತು ನವೆಂಬರ್ 29 ರಂದು ಸಂಸತ್ತಿನಲ್ಲಿ ವರದಿಯನ್ನು ಮಂಡಿಸಬೇಕು ಎಂದು ಸ್ವಯಂ ಪ್ರೇರಿತವಾಗಿ ಘೋಷಿಸಿದ್ದಾರೆ. ಪ್ರಸ್ತಾವಿತ ಮಸೂದೆಯ ಭಿನ್ನಮತದ ಟಿಪ್ಪಣಿಗಳು ಮತ್ತು ಪ್ರತಿ ಷರತ್ತಿನ ಮೇಲೆ ಮತ ಚಲಾಯಿಸುವುದು ಸೇರಿದಂತೆ ಹಲವು ಕಾರ್ಯವಿಧಾನಗಳಿವೆ. ಇವೆಲ್ಲವೂ ಆಗಬೇಕು” ಎಂದು ಎ. ರಾಜಾ ಹೇಳಿದ್ದಾರೆ.

ಸಂಸದೀಯ ಸಮಿತಿಯು 25 ಸಭೆಗಳನ್ನು ನಡೆಸಿದ್ದು, ಅದರಲ್ಲಿ ಹಲವಾರು ಅಪ್ರಸ್ತುತ ಸಂಸ್ಥೆಗಳ ಪುರಾವೆಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ, ಆದರೆ ಬಿಹಾರ, ದೆಹಲಿ ಮತ್ತು ಉತ್ತರ ಪ್ರದೇಶದಂತಹ ವಿವಿಧ ರಾಜ್ಯ ಸರ್ಕಾರಗಳ ಪ್ರಸ್ತುತಿಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಸಂಸದೀಯ ಸಮಿತಿಯಿಂದ ವರದಿಯನ್ನು ನಿರೀಕ್ಷಿಸಿ ಪ್ರಸ್ತುತ ಪ್ರಾರಂಭವಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಶಾಸಕಾಂಗ ಕಾರ್ಯಸೂಚಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಪಟ್ಟಿ ಮಾಡಿದೆ.

ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ‘ವಕ್ಫ್ ಕಾಯಿದೆ-1995’ ಅನ್ನು ತಿದ್ದುಪಡಿ ಮಾಡಲು ಈ ಮಸೂದೆಯು ಪ್ರಯತ್ನಿಸುತ್ತಿದೆ. ಆದರೆ ಭಾರತದಾದ್ಯಂತ ಈ ಮಸೂದೆಗೆ ವಿರೋಧ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ವಕ್ಭ್‌ ಆಸ್ತಿಗಳನ್ನು ಕಬಳಿಸಿ, ಮುಸ್ಲಿಮರಿಗೆ ಅನ್ಯಾಯ ಎಸಗಲು ಇದನ್ನು ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈಗಾಗಲೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ 

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...