Homeಮುಖಪುಟವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

ವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ವಿರೋಧ ಪಕ್ಷದ ಸದಸ್ಯರು ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾಗಿ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಪಕ್ಷಗಳು ಸ್ಪೀಕರ್ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ವಿರುದ್ಧ ದೂರು ದಾಖಲಿಸಿದ್ದು, ನಿರ್ಣಾಯಕ ವಿಷಯದ ಕಲಾಪವನ್ನು ಬುಡಮೇಲು ಮಾಡಿದ್ದಾರೆ ಎಂದು ಆರೋಪಿಸಿವೆ. ವಕ್ಫ್ ಮಸೂದೆಯ

“ಸಮಿತಿಯ ಅಧ್ಯಕ್ಷರು ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸುತ್ತಿಲ್ಲ ಎಂದು ನಾವು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದೇವೆ. ಅವರು ಆತುರಪಡುತ್ತಿದ್ದು, ಕಲಾಪವನ್ನು ಬುಡಮೇಲು ಮಾಡುತ್ತಿದ್ದಾರೆ” ಎಂದು ಡಿಎಂಕೆ ಸದಸ್ಯ ಎ. ರಾಜಾ ಸ್ಪೀಕರ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಕ್ಫ್ ತಿದ್ದುಪಡಿ ಮಸೂದೆಯು ಅಸ್ತಿತ್ವದಲ್ಲಿರುವ ಕಾನೂನಿಗೆ ಹಲವಾರು ಪ್ರಮುಖ ಬದಲಾವಣೆಗಳನ್ನು ಒಳಗೊಂಡಿರುವ ವಿಸ್ತಾರವಾದ ಶಾಸನವಾಗಿದೆ ಎಂಬುದನ್ನು ಮೊದಲು ಗಮನಿಸಬೇಕು. ಈ ಬದಲಾವಣೆಗಳು ಭಾರತದ ಜನಮುದಾಯದ ದೊಡ್ಡ ವರ್ಗದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ವರದಿಯನ್ನು ಅಂತಿಮಗೊಳಿಸಲು ಕೇವಲ ಮೂರು ತಿಂಗಳ ಸಮಯವು ಅಸಮರ್ಪಕವಾಗಿದ್ದು, ಮಾತ್ರವಲ್ಲದೆ ಅನುಚಿತ ಶಿಫಾರಸುಗಳಿಗೆ ಕಾರಣವಾಗಲಿದೆ” ಎಂದು ಪ್ರತಿಪಕ್ಷಗಳು ಪತ್ರದಲ್ಲಿ ತಿಳಿಸಿವೆ.

“ಆದ್ದರಿಂದ ಸೂಕ್ತ ಸಮಾಲೋಚನೆಗಾಗಿ, ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾದ ಸಮಯದವರೆಗೆ ವಿಸ್ತರಿಸಬೇಕು” ಎಂದು ಪತ್ರವು ಸ್ಪೀಕರ್‌ಗೆ ಆಗ್ರಹಿಸಿದೆ. ವಕ್ಫ್ ಮಸೂದೆಯ

ಸ್ಪೀಕರ್ ಅವರನ್ನು ಭೇಟಿಯಾದವರಲ್ಲಿ ಡಿಎಂಕೆ ನಾಯಕರಾದ ರಾಜಾ ಮತ್ತು ಎಂ. ಅಬ್ದುಲ್ಲಾ, ಕಾಂಗ್ರೆಸ್ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ತೃಣಮೂಲ ಸದಸ್ಯರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ಎಂ. ನಾದಿಮುಲ್ ಹಕ್, ಎಎಪಿ ಸದಸ್ಯ ಸಂಜಯ್ ಸಿಂಗ್, ಎಸ್‌ಪಿ ಸದಸ್ಯ ಮೊಹಿಬ್ಬುಲ್ಲಾ ಮತ್ತು ಎಐಎಂಐಎಂ ಸದಸ್ಯ ಅಸಾದುದ್ದೀನ್ ಓವೈಸಿ ಅವರು ಇದ್ದರು.

“ಸಮಿತಿಯ ಅಧ್ಯಕ್ಷರು ಜಂಟಿ ಸಂಸದೀಯ ಸಮಿತಿಯ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಿಲ್ಲ ಮತ್ತು ನವೆಂಬರ್ 29 ರಂದು ಸಂಸತ್ತಿನಲ್ಲಿ ವರದಿಯನ್ನು ಮಂಡಿಸಬೇಕು ಎಂದು ಸ್ವಯಂ ಪ್ರೇರಿತವಾಗಿ ಘೋಷಿಸಿದ್ದಾರೆ. ಪ್ರಸ್ತಾವಿತ ಮಸೂದೆಯ ಭಿನ್ನಮತದ ಟಿಪ್ಪಣಿಗಳು ಮತ್ತು ಪ್ರತಿ ಷರತ್ತಿನ ಮೇಲೆ ಮತ ಚಲಾಯಿಸುವುದು ಸೇರಿದಂತೆ ಹಲವು ಕಾರ್ಯವಿಧಾನಗಳಿವೆ. ಇವೆಲ್ಲವೂ ಆಗಬೇಕು” ಎಂದು ಎ. ರಾಜಾ ಹೇಳಿದ್ದಾರೆ.

ಸಂಸದೀಯ ಸಮಿತಿಯು 25 ಸಭೆಗಳನ್ನು ನಡೆಸಿದ್ದು, ಅದರಲ್ಲಿ ಹಲವಾರು ಅಪ್ರಸ್ತುತ ಸಂಸ್ಥೆಗಳ ಪುರಾವೆಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ, ಆದರೆ ಬಿಹಾರ, ದೆಹಲಿ ಮತ್ತು ಉತ್ತರ ಪ್ರದೇಶದಂತಹ ವಿವಿಧ ರಾಜ್ಯ ಸರ್ಕಾರಗಳ ಪ್ರಸ್ತುತಿಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಸಂಸದೀಯ ಸಮಿತಿಯಿಂದ ವರದಿಯನ್ನು ನಿರೀಕ್ಷಿಸಿ ಪ್ರಸ್ತುತ ಪ್ರಾರಂಭವಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಶಾಸಕಾಂಗ ಕಾರ್ಯಸೂಚಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಪಟ್ಟಿ ಮಾಡಿದೆ.

ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ‘ವಕ್ಫ್ ಕಾಯಿದೆ-1995’ ಅನ್ನು ತಿದ್ದುಪಡಿ ಮಾಡಲು ಈ ಮಸೂದೆಯು ಪ್ರಯತ್ನಿಸುತ್ತಿದೆ. ಆದರೆ ಭಾರತದಾದ್ಯಂತ ಈ ಮಸೂದೆಗೆ ವಿರೋಧ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ವಕ್ಭ್‌ ಆಸ್ತಿಗಳನ್ನು ಕಬಳಿಸಿ, ಮುಸ್ಲಿಮರಿಗೆ ಅನ್ಯಾಯ ಎಸಗಲು ಇದನ್ನು ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈಗಾಗಲೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ 

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...