Homeಮುಖಪುಟವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

ವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆಯ ಕುರಿತು ಸಂಸತ್ತಿನಲ್ಲಿ ನಡೆದ ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾತನಾಡದಿದ್ದಕ್ಕಾಗಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದಲಿತರು, ಅಲ್ಪಸಂಖ್ಯಾತರ ವಿಚಾರದಲ್ಲಿ ಸಮಾನವಾಗಿ ವಿಫಲವಾಗಿದೆ ಎಂದು ಹೇಳಿದ್ದಾರೆ. ವಕ್ಫ್ ಕಾಯ್ದೆ

“ರಾಹುಲ್ ಗಾಂಧಿ ಅವರು ವಕ್ಫ್ ವಿಚಾರದಲ್ಲಿ ಮಾತನಾಡದೆ ಇರುವುದರಿಂದ ಮುಸ್ಲಿಮರು ತೀವ್ರಗಾಗಿ ಕೋಪಗೊಳ್ಳುವುದು ಮತ್ತು ಇಂಡಿಯಾ ಮೈತ್ರಿಯ ಪಕ್ಷಗಳು ಈ ವಿಷಯದ ಬಗ್ಗೆ ಆಕ್ರೋಶಗೊಳ್ಳುವುದು ಸಹಜ” ಎಂದು ಮಾಯಾವತಿ ಹೇಳಿದ್ದಾರೆ.

“ವಿರೋಧ ಪಕ್ಷಗಳು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಖಂಡಿಸಿ, ಸಿಎಎಯಂತೆ ಸಂವಿಧಾನವನ್ನು ಉಲ್ಲಂಘಿಸಿದ ಪ್ರಕರಣ ಎಂದು ಕರೆದರೂ, ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ವ್ಯಾಪಕ ಚರ್ಚೆ ನಡೆದಿದ್ದರೂ ಸಹ, ಸದನದಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ಮಾತನಾಡದಿರಲು ವಿಪಕ್ಷ ನಾಯಕ ತೆಗೆದುಕೊಂಡ ನಿರ್ಧಾರ ಸಮರ್ಥನೀಯವೇ?” ಎಂದು ಅವರು ಎಕ್ಸ್‌ನಲ್ಲಿ ಕೇಳಿದ್ದಾರೆ.

ಯಾವುದೇ ಸಂದರ್ಭ ಇರಲಿ, ಕಾಂಗ್ರೆಸ್ ಮತ್ತು ಬಿಜೆಪಿ ದಲಿತರ ಕಲ್ಯಾಣ, ಸರ್ಕಾರಿ ಉದ್ಯೋಗಗಳು, ಶಿಕ್ಷಣದಿಂದ ವಾಸ್ತವದಲ್ಲಿ ವಂಚಿತಗೊಳಿಸಿದ್ದಕ್ಕಾಗಿ ಸಮಾನವಾಗಿ ತಪ್ಪಿತಸ್ಥರು ಎಂದು ಮಾಯಾವತಿ ಹೇಳಿದ್ದಾರೆ. “ಈ ಪಕ್ಷಗಳ ವಂಚನೆಯಿಂದ ತಪ್ಪಿಸಿಕೊಳ್ಳುವ ಅಗತ್ಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಅರಿತುಕೊಳ್ಳುವುದು ಮುಖ್ಯ” ಎಂದು ಅವರು ಹೇಳಿದ್ದಾರೆ.

ಈ ಪಕ್ಷಗಳ ಇಂತಹ ತಂತ್ರಗಳಿಂದಾಗಿ ಬಹುಜನರು ಎಲ್ಲಾ ವಲಯದಲ್ಲೂ ಕಳಪೆ ಸಾಧನೆ ಮಾಡಿದ್ದಾರೆ ಎಂದು ಮಾಯಾವತಿ ಪ್ರತಿಪಾದಿಸಿದ್ದಾರೆ. “ಅಧಿಕಾರ ಮತ್ತು ಇತರ ಕ್ಷೇತ್ರಗಳಲ್ಲಿ ಖಾಸಗೀಕರಣದ ವಿಷಯವು ಸಹ ಆತಂಕಕಾರಿಯಾಗಿದೆ ಮತ್ತು ಸರ್ಕಾರವು ಜನರ ಕಲ್ಯಾಣದ ಕಡೆಗೆ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು” ಎಂದು ಅವರು ಹೇಳಿದ್ದಾರೆ.

ಹೊಸ ವಕ್ಫ್ ಕಾನೂನಿನಲ್ಲಿರುವ ನಿಬಂಧನೆಗಳನ್ನು ಮರುಪರಿಶೀಲಿಸುವಂತೆ ಮತ್ತು ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಬಿಎಸ್‌ಪಿಯ ಮುಖ್ಯಸ್ಥರೂ ಆಗಿರುವ ಮಾಯಾವತಿ ಅವರು ಗುರುವಾರ ಕೇಂದ್ರ ಸರ್ಕಾರವನ್ನು ಕೇಳಿದ್ದರು. ಇತ್ತೀಚೆಗೆ ಅಂಗೀಕರಿಸಲಾದ ವಕ್ಫ್ ಕಾಯ್ದೆಯಲ್ಲಿ, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಕಾಯ್ದೆಯ ನಿಬಂಧನೆಯು ಪ್ರಾಥಮಿಕ ನೋಟದಲ್ಲಿ ಉತ್ತಮವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಮಂಗಳವಾರ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಅಧಿಸೂಚನೆ ಹೊರಡಿಸಿದೆ. ಇದು ಎರಡೂ ಸದನಗಳಲ್ಲಿ ಬಿಸಿ ಚರ್ಚೆಗಳ ನಂತರ ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು. ಅದರ ನಂತರ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆಯಿತು. ಮಸೂದೆಯನ್ನು ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರು ಮತ್ತು 232 ಸದಸ್ಯರು ವಿರೋಧಿಸಿ ಮತ ಚಲಾಯಿಸಿದರು. ವಕ್ಫ್ ಕಾಯ್ದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Man evolved and then came religion/caste/restrictions etc?
    For such evolution man/woman mating relations were necssary and essential?
    Persons of different religions mating will result in children, family etc?

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...