Homeಕರ್ನಾಟಕರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ಹೊನವಾಡದ 11 ಎಕರೆ ಮಾತ್ರ ವಕ್ಫ್‌ ಆಸ್ತಿ : ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಟ್ಟ ಸಚಿವರು

- Advertisement -
- Advertisement -

ಭೂ ಸುಧಾರಣೆ ಕಾಯ್ದೆ ಹಾಗೂ ಇನಾಮ್ ರದ್ಧತಿ ಕಾಯ್ದೆಯಡಿ ವಿಜಯಪುರದಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ.ವೈ ವಿಜಯೇಂದ್ರ ನಡುವಿನ ಸಂಘರ್ಷದಿಂದಾಗಿ ಇದಕ್ಕೆ ವಿವಾದದ ರೂಪ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ (ಅ.28) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಝಮೀರ್ ಅಹ್ಮದ್ ಮತ್ತು ಎಂ.ಬಿ ಪಾಟೀಲ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು ಅಧಿಸೂಚನೆ ಆಗಿದೆ. ಈ ಪೈಕಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಮ್ಯುಟೇಷನ್ ಆಗಿರುವುದು ಕೇವಲ 773 ಎಕರೆ ಮಾತ್ರ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1,459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೆರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರ್ಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಳಿದಿರುವ 1,319 ಎಕರೆ ಭೂಮಿಯು ಯಾರ ಅನುಭೋದಲ್ಲಿಯೂ ಇಲ್ಲ. ಅದು ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳು, ಮುತವಲ್ಲಿಗಳ ಹೆಸರಿನಲ್ಲಿದೆ. ಅವುಗಳನ್ನು ಇಂದೀಕರಣ ಮಾಡುವುದರಿಂದ ಒಬ್ಬ ರೈತನಿಗೂ ಅನ್ಯಾಯವಾಗುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ರೈತರಿಗೆ ನೋಟಿಸ್ ನೀಡದೆ 41 ಆಸ್ತಿಗಳನ್ನು ಅಲ್ಲಿನ ತಹಶೀಲ್ದಾರ್ ಇಂದೀಕರಣ ಮಾಡಿದ್ದು ಕರ್ತವ್ಯ ಲೋಪವಾಗಿದೆ. ಈಗಾಗಲೇ ಸಹಾಯಕ ಆಯುಕ್ತರು ಅದನ್ನು ರದ್ದು ಮಾಡಿ, ತಹಶೀಲ್ದಾರ್‌ಗೆ ರೈತರ ಅಹವಾಲು ಆಲಿಸಲು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್‌ ಆಸ್ತಿ

ಹೊನವಾಡ ಗ್ರಾಮದಲ್ಲಿ 1,200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುವುದನ್ನು ತೆಗೆಸಿದ್ದಾರೆ. ಸರ್ಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಟೀಕಿಸಿದರು.

ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ. 1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.

ಅಧಿಸೂಚಿತವಾಗಿದ್ದ ಭೂಮಿಯ ಇಂದೀಕರಣ ಆಗಬೇಕಿತ್ತು. ಆದರೆ, ಕಂದಾಯ ಇಲಾಖೆಯವರು ಮಾಡಿಲ್ಲ, ವಕ್ಫ್ ಇಲಾಖೆಯವರು ಮಾಡಿಸಿಕೊಂಡಿಲ್ಲ. ಬಗರ್‍ಹುಕುಂ ಸಮಿತಿ, ನ್ಯಾಯಾಧೀಕರಣಗಳಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ಹಿಂಪಡೆಯುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಅಧೀನದಲ್ಲಿರುವುದು 773 ಎಕರೆ ಮಾತ್ರ. ಬಿಜೆಪಿಯವರು 1974ರ ಅಧಿಸೂಚನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. 1974ಕ್ಕಿಂತ ಮುಂಚಿತವಾದ ದಾಖಲೆಗಳಿದ್ದರೆ ಅದನ್ನು ಕಾರ್ಯಪಡೆ ಎದುರು ಹಾಜರುಪಡಿಸಬಹುದು. ಅಲ್ಲದೇ, 1964 ರಿಂದ 1974ರವರೆಗಿನ ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿ, ವಕ್ಫ್ ಭೂಮಿ ಸಮುದಾಯದ ದಾನಿಗಳು ದಾನ ಮಾಡಿರುವಂತದ್ದು. ವಕ್ಫ್ ಭೂಮಿ ಸರ್ಕಾರ ನೀಡಿರುವುದು ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿದೆ. ಸ್ಮಶಾನ ಹೊರತುಪಡಿಸಿ ವಕ್ಫ್ ಅಧೀನದಲ್ಲಿ ಸರ್ಕಾರದ ಒಂದಿಂಚು ಜಾಗವೂ ಇಲ್ಲ. 1.12 ಲಕ್ಷ ಎಕರೆ ವಕ್ಫ್ ಭೂಮಿ ದಾನವಾಗಿ ಬಂದಿದೆ. ಅದರಲ್ಲಿ ಉಳಿದಿರುವುದು 23,860 ಎಕರೆ ಮಾತ್ರ. ಅದನ್ನು ಉಳಿಸಲು ವಕ್ಫ್ ಅದಾಲತ್‍ಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಅ.9ರಂದು ವಿಜಯಪುರದಲ್ಲಿ ವಕ್ಫ್ ಅದಾಲತ್ ಮಾಡಿದಾಗ ಬಿಜೆಪಿ ಶಾಸಕ ಯತ್ನಾಳ್ ಅವರಿಗೂ ಆಹ್ವಾನ ನೀಡಲಾಗಿತ್ತು. ಅವರಿಗೆ ರೈತರ ಬಗ್ಗೆ ಕಾಳಜಿಯಿದ್ದಿದ್ದರೆ ಆ ಸಭೆಗೆ ಬಂದು ವಿಚಾರ ಮಂಡನೆ ಮಾಡಬಹುದಿತ್ತು. ವಕ್ಫ್ ಅದಾಲತ್ ಆದ ನಾಲ್ಕು ದಿನಗಳ ನಂತರ ಪ್ರತಿಭಟನೆ ಮಾಡಿದ್ದಾರೆ. ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಕ್ಫ್ ಆಸ್ತಿಗಳ ಬದಲಾಗಿ, ಒತ್ತುವರಿಯಾಗಿರುವ 740 ಎಕರೆ ಮುಜುರಾಯಿ ಆಸ್ತಿಯನ್ನು ರಕ್ಷಿಸಲು ಹೋರಾಟ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ : ವಕ್ಫ್ ಜಟಾಪಟಿ | ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ : ಸಚಿವ ಹೆಚ್‌.ಕೆ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...