Homeಕರ್ನಾಟಕರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ಹೊನವಾಡದ 11 ಎಕರೆ ಮಾತ್ರ ವಕ್ಫ್‌ ಆಸ್ತಿ : ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಟ್ಟ ಸಚಿವರು

- Advertisement -
- Advertisement -

ಭೂ ಸುಧಾರಣೆ ಕಾಯ್ದೆ ಹಾಗೂ ಇನಾಮ್ ರದ್ಧತಿ ಕಾಯ್ದೆಯಡಿ ವಿಜಯಪುರದಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ.ವೈ ವಿಜಯೇಂದ್ರ ನಡುವಿನ ಸಂಘರ್ಷದಿಂದಾಗಿ ಇದಕ್ಕೆ ವಿವಾದದ ರೂಪ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ (ಅ.28) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಝಮೀರ್ ಅಹ್ಮದ್ ಮತ್ತು ಎಂ.ಬಿ ಪಾಟೀಲ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು ಅಧಿಸೂಚನೆ ಆಗಿದೆ. ಈ ಪೈಕಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಮ್ಯುಟೇಷನ್ ಆಗಿರುವುದು ಕೇವಲ 773 ಎಕರೆ ಮಾತ್ರ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1,459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೆರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರ್ಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಳಿದಿರುವ 1,319 ಎಕರೆ ಭೂಮಿಯು ಯಾರ ಅನುಭೋದಲ್ಲಿಯೂ ಇಲ್ಲ. ಅದು ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳು, ಮುತವಲ್ಲಿಗಳ ಹೆಸರಿನಲ್ಲಿದೆ. ಅವುಗಳನ್ನು ಇಂದೀಕರಣ ಮಾಡುವುದರಿಂದ ಒಬ್ಬ ರೈತನಿಗೂ ಅನ್ಯಾಯವಾಗುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ರೈತರಿಗೆ ನೋಟಿಸ್ ನೀಡದೆ 41 ಆಸ್ತಿಗಳನ್ನು ಅಲ್ಲಿನ ತಹಶೀಲ್ದಾರ್ ಇಂದೀಕರಣ ಮಾಡಿದ್ದು ಕರ್ತವ್ಯ ಲೋಪವಾಗಿದೆ. ಈಗಾಗಲೇ ಸಹಾಯಕ ಆಯುಕ್ತರು ಅದನ್ನು ರದ್ದು ಮಾಡಿ, ತಹಶೀಲ್ದಾರ್‌ಗೆ ರೈತರ ಅಹವಾಲು ಆಲಿಸಲು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್‌ ಆಸ್ತಿ

ಹೊನವಾಡ ಗ್ರಾಮದಲ್ಲಿ 1,200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುವುದನ್ನು ತೆಗೆಸಿದ್ದಾರೆ. ಸರ್ಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಟೀಕಿಸಿದರು.

ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ. 1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.

ಅಧಿಸೂಚಿತವಾಗಿದ್ದ ಭೂಮಿಯ ಇಂದೀಕರಣ ಆಗಬೇಕಿತ್ತು. ಆದರೆ, ಕಂದಾಯ ಇಲಾಖೆಯವರು ಮಾಡಿಲ್ಲ, ವಕ್ಫ್ ಇಲಾಖೆಯವರು ಮಾಡಿಸಿಕೊಂಡಿಲ್ಲ. ಬಗರ್‍ಹುಕುಂ ಸಮಿತಿ, ನ್ಯಾಯಾಧೀಕರಣಗಳಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ಹಿಂಪಡೆಯುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಅಧೀನದಲ್ಲಿರುವುದು 773 ಎಕರೆ ಮಾತ್ರ. ಬಿಜೆಪಿಯವರು 1974ರ ಅಧಿಸೂಚನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. 1974ಕ್ಕಿಂತ ಮುಂಚಿತವಾದ ದಾಖಲೆಗಳಿದ್ದರೆ ಅದನ್ನು ಕಾರ್ಯಪಡೆ ಎದುರು ಹಾಜರುಪಡಿಸಬಹುದು. ಅಲ್ಲದೇ, 1964 ರಿಂದ 1974ರವರೆಗಿನ ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿ, ವಕ್ಫ್ ಭೂಮಿ ಸಮುದಾಯದ ದಾನಿಗಳು ದಾನ ಮಾಡಿರುವಂತದ್ದು. ವಕ್ಫ್ ಭೂಮಿ ಸರ್ಕಾರ ನೀಡಿರುವುದು ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿದೆ. ಸ್ಮಶಾನ ಹೊರತುಪಡಿಸಿ ವಕ್ಫ್ ಅಧೀನದಲ್ಲಿ ಸರ್ಕಾರದ ಒಂದಿಂಚು ಜಾಗವೂ ಇಲ್ಲ. 1.12 ಲಕ್ಷ ಎಕರೆ ವಕ್ಫ್ ಭೂಮಿ ದಾನವಾಗಿ ಬಂದಿದೆ. ಅದರಲ್ಲಿ ಉಳಿದಿರುವುದು 23,860 ಎಕರೆ ಮಾತ್ರ. ಅದನ್ನು ಉಳಿಸಲು ವಕ್ಫ್ ಅದಾಲತ್‍ಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಅ.9ರಂದು ವಿಜಯಪುರದಲ್ಲಿ ವಕ್ಫ್ ಅದಾಲತ್ ಮಾಡಿದಾಗ ಬಿಜೆಪಿ ಶಾಸಕ ಯತ್ನಾಳ್ ಅವರಿಗೂ ಆಹ್ವಾನ ನೀಡಲಾಗಿತ್ತು. ಅವರಿಗೆ ರೈತರ ಬಗ್ಗೆ ಕಾಳಜಿಯಿದ್ದಿದ್ದರೆ ಆ ಸಭೆಗೆ ಬಂದು ವಿಚಾರ ಮಂಡನೆ ಮಾಡಬಹುದಿತ್ತು. ವಕ್ಫ್ ಅದಾಲತ್ ಆದ ನಾಲ್ಕು ದಿನಗಳ ನಂತರ ಪ್ರತಿಭಟನೆ ಮಾಡಿದ್ದಾರೆ. ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಕ್ಫ್ ಆಸ್ತಿಗಳ ಬದಲಾಗಿ, ಒತ್ತುವರಿಯಾಗಿರುವ 740 ಎಕರೆ ಮುಜುರಾಯಿ ಆಸ್ತಿಯನ್ನು ರಕ್ಷಿಸಲು ಹೋರಾಟ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ : ವಕ್ಫ್ ಜಟಾಪಟಿ | ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ : ಸಚಿವ ಹೆಚ್‌.ಕೆ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....