Homeಕರ್ನಾಟಕರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ಹೊನವಾಡದ 11 ಎಕರೆ ಮಾತ್ರ ವಕ್ಫ್‌ ಆಸ್ತಿ : ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಟ್ಟ ಸಚಿವರು

- Advertisement -
- Advertisement -

ಭೂ ಸುಧಾರಣೆ ಕಾಯ್ದೆ ಹಾಗೂ ಇನಾಮ್ ರದ್ಧತಿ ಕಾಯ್ದೆಯಡಿ ವಿಜಯಪುರದಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ.ವೈ ವಿಜಯೇಂದ್ರ ನಡುವಿನ ಸಂಘರ್ಷದಿಂದಾಗಿ ಇದಕ್ಕೆ ವಿವಾದದ ರೂಪ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ (ಅ.28) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಝಮೀರ್ ಅಹ್ಮದ್ ಮತ್ತು ಎಂ.ಬಿ ಪಾಟೀಲ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು ಅಧಿಸೂಚನೆ ಆಗಿದೆ. ಈ ಪೈಕಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಮ್ಯುಟೇಷನ್ ಆಗಿರುವುದು ಕೇವಲ 773 ಎಕರೆ ಮಾತ್ರ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1,459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೆರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರ್ಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಳಿದಿರುವ 1,319 ಎಕರೆ ಭೂಮಿಯು ಯಾರ ಅನುಭೋದಲ್ಲಿಯೂ ಇಲ್ಲ. ಅದು ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳು, ಮುತವಲ್ಲಿಗಳ ಹೆಸರಿನಲ್ಲಿದೆ. ಅವುಗಳನ್ನು ಇಂದೀಕರಣ ಮಾಡುವುದರಿಂದ ಒಬ್ಬ ರೈತನಿಗೂ ಅನ್ಯಾಯವಾಗುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ರೈತರಿಗೆ ನೋಟಿಸ್ ನೀಡದೆ 41 ಆಸ್ತಿಗಳನ್ನು ಅಲ್ಲಿನ ತಹಶೀಲ್ದಾರ್ ಇಂದೀಕರಣ ಮಾಡಿದ್ದು ಕರ್ತವ್ಯ ಲೋಪವಾಗಿದೆ. ಈಗಾಗಲೇ ಸಹಾಯಕ ಆಯುಕ್ತರು ಅದನ್ನು ರದ್ದು ಮಾಡಿ, ತಹಶೀಲ್ದಾರ್‌ಗೆ ರೈತರ ಅಹವಾಲು ಆಲಿಸಲು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್‌ ಆಸ್ತಿ

ಹೊನವಾಡ ಗ್ರಾಮದಲ್ಲಿ 1,200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುವುದನ್ನು ತೆಗೆಸಿದ್ದಾರೆ. ಸರ್ಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಟೀಕಿಸಿದರು.

ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ. 1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.

ಅಧಿಸೂಚಿತವಾಗಿದ್ದ ಭೂಮಿಯ ಇಂದೀಕರಣ ಆಗಬೇಕಿತ್ತು. ಆದರೆ, ಕಂದಾಯ ಇಲಾಖೆಯವರು ಮಾಡಿಲ್ಲ, ವಕ್ಫ್ ಇಲಾಖೆಯವರು ಮಾಡಿಸಿಕೊಂಡಿಲ್ಲ. ಬಗರ್‍ಹುಕುಂ ಸಮಿತಿ, ನ್ಯಾಯಾಧೀಕರಣಗಳಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ಹಿಂಪಡೆಯುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಅಧೀನದಲ್ಲಿರುವುದು 773 ಎಕರೆ ಮಾತ್ರ. ಬಿಜೆಪಿಯವರು 1974ರ ಅಧಿಸೂಚನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. 1974ಕ್ಕಿಂತ ಮುಂಚಿತವಾದ ದಾಖಲೆಗಳಿದ್ದರೆ ಅದನ್ನು ಕಾರ್ಯಪಡೆ ಎದುರು ಹಾಜರುಪಡಿಸಬಹುದು. ಅಲ್ಲದೇ, 1964 ರಿಂದ 1974ರವರೆಗಿನ ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿ, ವಕ್ಫ್ ಭೂಮಿ ಸಮುದಾಯದ ದಾನಿಗಳು ದಾನ ಮಾಡಿರುವಂತದ್ದು. ವಕ್ಫ್ ಭೂಮಿ ಸರ್ಕಾರ ನೀಡಿರುವುದು ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿದೆ. ಸ್ಮಶಾನ ಹೊರತುಪಡಿಸಿ ವಕ್ಫ್ ಅಧೀನದಲ್ಲಿ ಸರ್ಕಾರದ ಒಂದಿಂಚು ಜಾಗವೂ ಇಲ್ಲ. 1.12 ಲಕ್ಷ ಎಕರೆ ವಕ್ಫ್ ಭೂಮಿ ದಾನವಾಗಿ ಬಂದಿದೆ. ಅದರಲ್ಲಿ ಉಳಿದಿರುವುದು 23,860 ಎಕರೆ ಮಾತ್ರ. ಅದನ್ನು ಉಳಿಸಲು ವಕ್ಫ್ ಅದಾಲತ್‍ಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಅ.9ರಂದು ವಿಜಯಪುರದಲ್ಲಿ ವಕ್ಫ್ ಅದಾಲತ್ ಮಾಡಿದಾಗ ಬಿಜೆಪಿ ಶಾಸಕ ಯತ್ನಾಳ್ ಅವರಿಗೂ ಆಹ್ವಾನ ನೀಡಲಾಗಿತ್ತು. ಅವರಿಗೆ ರೈತರ ಬಗ್ಗೆ ಕಾಳಜಿಯಿದ್ದಿದ್ದರೆ ಆ ಸಭೆಗೆ ಬಂದು ವಿಚಾರ ಮಂಡನೆ ಮಾಡಬಹುದಿತ್ತು. ವಕ್ಫ್ ಅದಾಲತ್ ಆದ ನಾಲ್ಕು ದಿನಗಳ ನಂತರ ಪ್ರತಿಭಟನೆ ಮಾಡಿದ್ದಾರೆ. ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಕ್ಫ್ ಆಸ್ತಿಗಳ ಬದಲಾಗಿ, ಒತ್ತುವರಿಯಾಗಿರುವ 740 ಎಕರೆ ಮುಜುರಾಯಿ ಆಸ್ತಿಯನ್ನು ರಕ್ಷಿಸಲು ಹೋರಾಟ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ : ವಕ್ಫ್ ಜಟಾಪಟಿ | ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ : ಸಚಿವ ಹೆಚ್‌.ಕೆ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...