Homeಕರ್ನಾಟಕರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ಹೊನವಾಡದ 11 ಎಕರೆ ಮಾತ್ರ ವಕ್ಫ್‌ ಆಸ್ತಿ : ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಟ್ಟ ಸಚಿವರು

- Advertisement -
- Advertisement -

ಭೂ ಸುಧಾರಣೆ ಕಾಯ್ದೆ ಹಾಗೂ ಇನಾಮ್ ರದ್ಧತಿ ಕಾಯ್ದೆಯಡಿ ವಿಜಯಪುರದಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ.ವೈ ವಿಜಯೇಂದ್ರ ನಡುವಿನ ಸಂಘರ್ಷದಿಂದಾಗಿ ಇದಕ್ಕೆ ವಿವಾದದ ರೂಪ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ (ಅ.28) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಝಮೀರ್ ಅಹ್ಮದ್ ಮತ್ತು ಎಂ.ಬಿ ಪಾಟೀಲ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು ಅಧಿಸೂಚನೆ ಆಗಿದೆ. ಈ ಪೈಕಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಮ್ಯುಟೇಷನ್ ಆಗಿರುವುದು ಕೇವಲ 773 ಎಕರೆ ಮಾತ್ರ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1,459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೆರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರ್ಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಳಿದಿರುವ 1,319 ಎಕರೆ ಭೂಮಿಯು ಯಾರ ಅನುಭೋದಲ್ಲಿಯೂ ಇಲ್ಲ. ಅದು ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳು, ಮುತವಲ್ಲಿಗಳ ಹೆಸರಿನಲ್ಲಿದೆ. ಅವುಗಳನ್ನು ಇಂದೀಕರಣ ಮಾಡುವುದರಿಂದ ಒಬ್ಬ ರೈತನಿಗೂ ಅನ್ಯಾಯವಾಗುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ರೈತರಿಗೆ ನೋಟಿಸ್ ನೀಡದೆ 41 ಆಸ್ತಿಗಳನ್ನು ಅಲ್ಲಿನ ತಹಶೀಲ್ದಾರ್ ಇಂದೀಕರಣ ಮಾಡಿದ್ದು ಕರ್ತವ್ಯ ಲೋಪವಾಗಿದೆ. ಈಗಾಗಲೇ ಸಹಾಯಕ ಆಯುಕ್ತರು ಅದನ್ನು ರದ್ದು ಮಾಡಿ, ತಹಶೀಲ್ದಾರ್‌ಗೆ ರೈತರ ಅಹವಾಲು ಆಲಿಸಲು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್‌ ಆಸ್ತಿ

ಹೊನವಾಡ ಗ್ರಾಮದಲ್ಲಿ 1,200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುವುದನ್ನು ತೆಗೆಸಿದ್ದಾರೆ. ಸರ್ಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಟೀಕಿಸಿದರು.

ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ. 1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.

ಅಧಿಸೂಚಿತವಾಗಿದ್ದ ಭೂಮಿಯ ಇಂದೀಕರಣ ಆಗಬೇಕಿತ್ತು. ಆದರೆ, ಕಂದಾಯ ಇಲಾಖೆಯವರು ಮಾಡಿಲ್ಲ, ವಕ್ಫ್ ಇಲಾಖೆಯವರು ಮಾಡಿಸಿಕೊಂಡಿಲ್ಲ. ಬಗರ್‍ಹುಕುಂ ಸಮಿತಿ, ನ್ಯಾಯಾಧೀಕರಣಗಳಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ಹಿಂಪಡೆಯುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಅಧೀನದಲ್ಲಿರುವುದು 773 ಎಕರೆ ಮಾತ್ರ. ಬಿಜೆಪಿಯವರು 1974ರ ಅಧಿಸೂಚನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. 1974ಕ್ಕಿಂತ ಮುಂಚಿತವಾದ ದಾಖಲೆಗಳಿದ್ದರೆ ಅದನ್ನು ಕಾರ್ಯಪಡೆ ಎದುರು ಹಾಜರುಪಡಿಸಬಹುದು. ಅಲ್ಲದೇ, 1964 ರಿಂದ 1974ರವರೆಗಿನ ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿ, ವಕ್ಫ್ ಭೂಮಿ ಸಮುದಾಯದ ದಾನಿಗಳು ದಾನ ಮಾಡಿರುವಂತದ್ದು. ವಕ್ಫ್ ಭೂಮಿ ಸರ್ಕಾರ ನೀಡಿರುವುದು ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿದೆ. ಸ್ಮಶಾನ ಹೊರತುಪಡಿಸಿ ವಕ್ಫ್ ಅಧೀನದಲ್ಲಿ ಸರ್ಕಾರದ ಒಂದಿಂಚು ಜಾಗವೂ ಇಲ್ಲ. 1.12 ಲಕ್ಷ ಎಕರೆ ವಕ್ಫ್ ಭೂಮಿ ದಾನವಾಗಿ ಬಂದಿದೆ. ಅದರಲ್ಲಿ ಉಳಿದಿರುವುದು 23,860 ಎಕರೆ ಮಾತ್ರ. ಅದನ್ನು ಉಳಿಸಲು ವಕ್ಫ್ ಅದಾಲತ್‍ಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಅ.9ರಂದು ವಿಜಯಪುರದಲ್ಲಿ ವಕ್ಫ್ ಅದಾಲತ್ ಮಾಡಿದಾಗ ಬಿಜೆಪಿ ಶಾಸಕ ಯತ್ನಾಳ್ ಅವರಿಗೂ ಆಹ್ವಾನ ನೀಡಲಾಗಿತ್ತು. ಅವರಿಗೆ ರೈತರ ಬಗ್ಗೆ ಕಾಳಜಿಯಿದ್ದಿದ್ದರೆ ಆ ಸಭೆಗೆ ಬಂದು ವಿಚಾರ ಮಂಡನೆ ಮಾಡಬಹುದಿತ್ತು. ವಕ್ಫ್ ಅದಾಲತ್ ಆದ ನಾಲ್ಕು ದಿನಗಳ ನಂತರ ಪ್ರತಿಭಟನೆ ಮಾಡಿದ್ದಾರೆ. ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಕ್ಫ್ ಆಸ್ತಿಗಳ ಬದಲಾಗಿ, ಒತ್ತುವರಿಯಾಗಿರುವ 740 ಎಕರೆ ಮುಜುರಾಯಿ ಆಸ್ತಿಯನ್ನು ರಕ್ಷಿಸಲು ಹೋರಾಟ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ : ವಕ್ಫ್ ಜಟಾಪಟಿ | ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ : ಸಚಿವ ಹೆಚ್‌.ಕೆ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...