Homeಕರ್ನಾಟಕರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ಹೊನವಾಡದ 11 ಎಕರೆ ಮಾತ್ರ ವಕ್ಫ್‌ ಆಸ್ತಿ : ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಟ್ಟ ಸಚಿವರು

- Advertisement -
- Advertisement -

ಭೂ ಸುಧಾರಣೆ ಕಾಯ್ದೆ ಹಾಗೂ ಇನಾಮ್ ರದ್ಧತಿ ಕಾಯ್ದೆಯಡಿ ವಿಜಯಪುರದಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ.ವೈ ವಿಜಯೇಂದ್ರ ನಡುವಿನ ಸಂಘರ್ಷದಿಂದಾಗಿ ಇದಕ್ಕೆ ವಿವಾದದ ರೂಪ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ (ಅ.28) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಝಮೀರ್ ಅಹ್ಮದ್ ಮತ್ತು ಎಂ.ಬಿ ಪಾಟೀಲ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು ಅಧಿಸೂಚನೆ ಆಗಿದೆ. ಈ ಪೈಕಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಮ್ಯುಟೇಷನ್ ಆಗಿರುವುದು ಕೇವಲ 773 ಎಕರೆ ಮಾತ್ರ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1,459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೆರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರ್ಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಳಿದಿರುವ 1,319 ಎಕರೆ ಭೂಮಿಯು ಯಾರ ಅನುಭೋದಲ್ಲಿಯೂ ಇಲ್ಲ. ಅದು ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳು, ಮುತವಲ್ಲಿಗಳ ಹೆಸರಿನಲ್ಲಿದೆ. ಅವುಗಳನ್ನು ಇಂದೀಕರಣ ಮಾಡುವುದರಿಂದ ಒಬ್ಬ ರೈತನಿಗೂ ಅನ್ಯಾಯವಾಗುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ರೈತರಿಗೆ ನೋಟಿಸ್ ನೀಡದೆ 41 ಆಸ್ತಿಗಳನ್ನು ಅಲ್ಲಿನ ತಹಶೀಲ್ದಾರ್ ಇಂದೀಕರಣ ಮಾಡಿದ್ದು ಕರ್ತವ್ಯ ಲೋಪವಾಗಿದೆ. ಈಗಾಗಲೇ ಸಹಾಯಕ ಆಯುಕ್ತರು ಅದನ್ನು ರದ್ದು ಮಾಡಿ, ತಹಶೀಲ್ದಾರ್‌ಗೆ ರೈತರ ಅಹವಾಲು ಆಲಿಸಲು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್‌ ಆಸ್ತಿ

ಹೊನವಾಡ ಗ್ರಾಮದಲ್ಲಿ 1,200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುವುದನ್ನು ತೆಗೆಸಿದ್ದಾರೆ. ಸರ್ಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಟೀಕಿಸಿದರು.

ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ. 1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.

ಅಧಿಸೂಚಿತವಾಗಿದ್ದ ಭೂಮಿಯ ಇಂದೀಕರಣ ಆಗಬೇಕಿತ್ತು. ಆದರೆ, ಕಂದಾಯ ಇಲಾಖೆಯವರು ಮಾಡಿಲ್ಲ, ವಕ್ಫ್ ಇಲಾಖೆಯವರು ಮಾಡಿಸಿಕೊಂಡಿಲ್ಲ. ಬಗರ್‍ಹುಕುಂ ಸಮಿತಿ, ನ್ಯಾಯಾಧೀಕರಣಗಳಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ಹಿಂಪಡೆಯುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಅಧೀನದಲ್ಲಿರುವುದು 773 ಎಕರೆ ಮಾತ್ರ. ಬಿಜೆಪಿಯವರು 1974ರ ಅಧಿಸೂಚನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. 1974ಕ್ಕಿಂತ ಮುಂಚಿತವಾದ ದಾಖಲೆಗಳಿದ್ದರೆ ಅದನ್ನು ಕಾರ್ಯಪಡೆ ಎದುರು ಹಾಜರುಪಡಿಸಬಹುದು. ಅಲ್ಲದೇ, 1964 ರಿಂದ 1974ರವರೆಗಿನ ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿ, ವಕ್ಫ್ ಭೂಮಿ ಸಮುದಾಯದ ದಾನಿಗಳು ದಾನ ಮಾಡಿರುವಂತದ್ದು. ವಕ್ಫ್ ಭೂಮಿ ಸರ್ಕಾರ ನೀಡಿರುವುದು ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿದೆ. ಸ್ಮಶಾನ ಹೊರತುಪಡಿಸಿ ವಕ್ಫ್ ಅಧೀನದಲ್ಲಿ ಸರ್ಕಾರದ ಒಂದಿಂಚು ಜಾಗವೂ ಇಲ್ಲ. 1.12 ಲಕ್ಷ ಎಕರೆ ವಕ್ಫ್ ಭೂಮಿ ದಾನವಾಗಿ ಬಂದಿದೆ. ಅದರಲ್ಲಿ ಉಳಿದಿರುವುದು 23,860 ಎಕರೆ ಮಾತ್ರ. ಅದನ್ನು ಉಳಿಸಲು ವಕ್ಫ್ ಅದಾಲತ್‍ಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಅ.9ರಂದು ವಿಜಯಪುರದಲ್ಲಿ ವಕ್ಫ್ ಅದಾಲತ್ ಮಾಡಿದಾಗ ಬಿಜೆಪಿ ಶಾಸಕ ಯತ್ನಾಳ್ ಅವರಿಗೂ ಆಹ್ವಾನ ನೀಡಲಾಗಿತ್ತು. ಅವರಿಗೆ ರೈತರ ಬಗ್ಗೆ ಕಾಳಜಿಯಿದ್ದಿದ್ದರೆ ಆ ಸಭೆಗೆ ಬಂದು ವಿಚಾರ ಮಂಡನೆ ಮಾಡಬಹುದಿತ್ತು. ವಕ್ಫ್ ಅದಾಲತ್ ಆದ ನಾಲ್ಕು ದಿನಗಳ ನಂತರ ಪ್ರತಿಭಟನೆ ಮಾಡಿದ್ದಾರೆ. ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಕ್ಫ್ ಆಸ್ತಿಗಳ ಬದಲಾಗಿ, ಒತ್ತುವರಿಯಾಗಿರುವ 740 ಎಕರೆ ಮುಜುರಾಯಿ ಆಸ್ತಿಯನ್ನು ರಕ್ಷಿಸಲು ಹೋರಾಟ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ : ವಕ್ಫ್ ಜಟಾಪಟಿ | ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ : ಸಚಿವ ಹೆಚ್‌.ಕೆ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...