Homeಕರ್ನಾಟಕರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ಹೊನವಾಡದ 11 ಎಕರೆ ಮಾತ್ರ ವಕ್ಫ್‌ ಆಸ್ತಿ : ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಟ್ಟ ಸಚಿವರು

- Advertisement -
- Advertisement -

ಭೂ ಸುಧಾರಣೆ ಕಾಯ್ದೆ ಹಾಗೂ ಇನಾಮ್ ರದ್ಧತಿ ಕಾಯ್ದೆಯಡಿ ವಿಜಯಪುರದಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ.ವೈ ವಿಜಯೇಂದ್ರ ನಡುವಿನ ಸಂಘರ್ಷದಿಂದಾಗಿ ಇದಕ್ಕೆ ವಿವಾದದ ರೂಪ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ (ಅ.28) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಝಮೀರ್ ಅಹ್ಮದ್ ಮತ್ತು ಎಂ.ಬಿ ಪಾಟೀಲ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು ಅಧಿಸೂಚನೆ ಆಗಿದೆ. ಈ ಪೈಕಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಮ್ಯುಟೇಷನ್ ಆಗಿರುವುದು ಕೇವಲ 773 ಎಕರೆ ಮಾತ್ರ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1,459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೆರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರ್ಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಳಿದಿರುವ 1,319 ಎಕರೆ ಭೂಮಿಯು ಯಾರ ಅನುಭೋದಲ್ಲಿಯೂ ಇಲ್ಲ. ಅದು ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳು, ಮುತವಲ್ಲಿಗಳ ಹೆಸರಿನಲ್ಲಿದೆ. ಅವುಗಳನ್ನು ಇಂದೀಕರಣ ಮಾಡುವುದರಿಂದ ಒಬ್ಬ ರೈತನಿಗೂ ಅನ್ಯಾಯವಾಗುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ರೈತರಿಗೆ ನೋಟಿಸ್ ನೀಡದೆ 41 ಆಸ್ತಿಗಳನ್ನು ಅಲ್ಲಿನ ತಹಶೀಲ್ದಾರ್ ಇಂದೀಕರಣ ಮಾಡಿದ್ದು ಕರ್ತವ್ಯ ಲೋಪವಾಗಿದೆ. ಈಗಾಗಲೇ ಸಹಾಯಕ ಆಯುಕ್ತರು ಅದನ್ನು ರದ್ದು ಮಾಡಿ, ತಹಶೀಲ್ದಾರ್‌ಗೆ ರೈತರ ಅಹವಾಲು ಆಲಿಸಲು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್‌ ಆಸ್ತಿ

ಹೊನವಾಡ ಗ್ರಾಮದಲ್ಲಿ 1,200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುವುದನ್ನು ತೆಗೆಸಿದ್ದಾರೆ. ಸರ್ಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಟೀಕಿಸಿದರು.

ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ. 1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.

ಅಧಿಸೂಚಿತವಾಗಿದ್ದ ಭೂಮಿಯ ಇಂದೀಕರಣ ಆಗಬೇಕಿತ್ತು. ಆದರೆ, ಕಂದಾಯ ಇಲಾಖೆಯವರು ಮಾಡಿಲ್ಲ, ವಕ್ಫ್ ಇಲಾಖೆಯವರು ಮಾಡಿಸಿಕೊಂಡಿಲ್ಲ. ಬಗರ್‍ಹುಕುಂ ಸಮಿತಿ, ನ್ಯಾಯಾಧೀಕರಣಗಳಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ಹಿಂಪಡೆಯುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಅಧೀನದಲ್ಲಿರುವುದು 773 ಎಕರೆ ಮಾತ್ರ. ಬಿಜೆಪಿಯವರು 1974ರ ಅಧಿಸೂಚನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. 1974ಕ್ಕಿಂತ ಮುಂಚಿತವಾದ ದಾಖಲೆಗಳಿದ್ದರೆ ಅದನ್ನು ಕಾರ್ಯಪಡೆ ಎದುರು ಹಾಜರುಪಡಿಸಬಹುದು. ಅಲ್ಲದೇ, 1964 ರಿಂದ 1974ರವರೆಗಿನ ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿ, ವಕ್ಫ್ ಭೂಮಿ ಸಮುದಾಯದ ದಾನಿಗಳು ದಾನ ಮಾಡಿರುವಂತದ್ದು. ವಕ್ಫ್ ಭೂಮಿ ಸರ್ಕಾರ ನೀಡಿರುವುದು ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿದೆ. ಸ್ಮಶಾನ ಹೊರತುಪಡಿಸಿ ವಕ್ಫ್ ಅಧೀನದಲ್ಲಿ ಸರ್ಕಾರದ ಒಂದಿಂಚು ಜಾಗವೂ ಇಲ್ಲ. 1.12 ಲಕ್ಷ ಎಕರೆ ವಕ್ಫ್ ಭೂಮಿ ದಾನವಾಗಿ ಬಂದಿದೆ. ಅದರಲ್ಲಿ ಉಳಿದಿರುವುದು 23,860 ಎಕರೆ ಮಾತ್ರ. ಅದನ್ನು ಉಳಿಸಲು ವಕ್ಫ್ ಅದಾಲತ್‍ಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಅ.9ರಂದು ವಿಜಯಪುರದಲ್ಲಿ ವಕ್ಫ್ ಅದಾಲತ್ ಮಾಡಿದಾಗ ಬಿಜೆಪಿ ಶಾಸಕ ಯತ್ನಾಳ್ ಅವರಿಗೂ ಆಹ್ವಾನ ನೀಡಲಾಗಿತ್ತು. ಅವರಿಗೆ ರೈತರ ಬಗ್ಗೆ ಕಾಳಜಿಯಿದ್ದಿದ್ದರೆ ಆ ಸಭೆಗೆ ಬಂದು ವಿಚಾರ ಮಂಡನೆ ಮಾಡಬಹುದಿತ್ತು. ವಕ್ಫ್ ಅದಾಲತ್ ಆದ ನಾಲ್ಕು ದಿನಗಳ ನಂತರ ಪ್ರತಿಭಟನೆ ಮಾಡಿದ್ದಾರೆ. ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಕ್ಫ್ ಆಸ್ತಿಗಳ ಬದಲಾಗಿ, ಒತ್ತುವರಿಯಾಗಿರುವ 740 ಎಕರೆ ಮುಜುರಾಯಿ ಆಸ್ತಿಯನ್ನು ರಕ್ಷಿಸಲು ಹೋರಾಟ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ : ವಕ್ಫ್ ಜಟಾಪಟಿ | ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ : ಸಚಿವ ಹೆಚ್‌.ಕೆ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...