Homeಮುಖಪುಟಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ...

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಕಾಯ್ದೆಯಿಂದ ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ರಾಜ್ಯ ಔಕಾಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರು ಬಹುಮತ ಸಾಧಿಸಬಹುದು ಎಂಬ ಅರ್ಜಿದಾರರ ವಾದವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.

ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಹಿಂದೂ, ಸಿಖ್ ಹಾಗೂ ಕ್ರೈಸ್ತ ಧಾರ್ಮಿಕ ದತ್ತಿ ಮಂಡಳಿಗಳ ಸಂಯೋಜನೆ ಜೊತೆ ಹೋಲಿಕೆ ಮಾಡುವ ಮೂಲಕ ಮುಸ್ಲಿಮರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದೆ.

ಸೈದ್ಧಾಂತಿಕವಾಗಿ ಮುಸ್ಲಿಮೇತರರು ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ಔಕಾಫ್ ಮಂಡಳಿಗಳಲ್ಲಿ ಬಹುಮತ ಸಾಧಿಸುತ್ತಾರೆ ಎಂಬ ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿರುವ ಅರ್ಜಿದಾರರ ವಾದವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅಲ್ಲಗಳೆದ್ದಾರೆ.

ಈ ಸಂಬಂಧ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಜಂಟಿ ಸಂಸದೀಯ ಸಮಿತಿಗೆ ಭರವಸೆ ನೀಡಿದ ಪತ್ರದ ಪ್ರತಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ಪ್ರತಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಮುಂದೆ ಪ್ರಸ್ತುತಪಡಿಸಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್ ಮಂಗಳವಾರ ಸುಮಾರು 30 ನಿಮಿಷಗಳ ಕಾಲ ವಕ್ಫ್‌ ಕೌನ್ಸಿಲ್ ಮತ್ತು ಮಂಡಳಿಗಳು ತಮ್ಮ ಅಲ್ಪಸಂಖ್ಯಾತ ಸ್ಥಾನವನ್ನು ಕಳೆದುಕೊಳ್ಳುತ್ತಿವೆ ಎಂಬ ಮುಸ್ಲಿಮರಲ್ಲಿರುವ ಆತಂಕವನ್ನು ಎತ್ತಿ ತೋರಿಸಿದ್ದಾರೆ. ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ಮೂಲಕ ಕನಿಷ್ಠ ಸೈದ್ಧಾಂತಿಕವಾಗಿ ಈ ಎರಡು ಸಂಸ್ಥೆಗಳಲ್ಲಿ ಮುಸ್ಲಿಮೇತರರನ್ನು ಬಹುಮತವನ್ನಾಗಿ ಮಾಡಲು ಉದ್ದೇಶಿಸಿದೆ ಎಂದು ಹೇಳಿದ್ದಾರೆ.

ಸರ್ಕಾರ ಹಿಂದೂ, ಸಿಖ್ ಮತ್ತು ಕ್ರೈಸ್ತ ಧರ್ಮಗಳ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಆ ಧರ್ಮಗಳಲ್ಲಿ ನಂಬಿಕೆ ಇಲ್ಲದವರನ್ನು ಸದಸ್ಯರಾಗಿ ಮಾಡಲು ಪ್ರಯತ್ನಿಸಿದರುವಾಗ, ಮುಸ್ಲಿಮರ ವಕ್ಫ್‌ ಮಂಡಳಿಗಳಿಗೆ ಮಾತ್ರ ಏಕೆ ಈ ನಿಯಮ? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ಸರ್ಕಾರದ ಈ ಕ್ರಮವನ್ನು ಧರ್ಮಾಧಾರಿತ ತಾರತಮ್ಯ ಎಂದು ಕರೆದ ಸಿಬಲ್, ಇದು ಸಂವಿಧಾನದ ವಿಧಿ 15 ರ ಅಡಿಯಲ್ಲಿ ಖಾತರಿಪಡಿಸಲಾದ ತಾರತಮ್ಯ ವಿರೋಧಿ, ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, “ಹಿಂದೂ ಧಾರ್ಮಿಕ ದತ್ತಿ ಮಂಡಳಿ ಸದಸ್ಯರು ದೇವಸ್ಥಾನಗಳಿಗೆ ಹೋಗುತ್ತಾರೆ ಮತ್ತು ಪೂಜಾಕ್ರಮಗಳ ಮೇಲ್ವಿಚಾರಣೆ ನಡೆಸುತ್ತಾರೆ ಎಂದಿದ್ದಾರೆ.

ದತ್ತಿ ಆಯುಕ್ತರು ಹಿಂದೂಯೇತರರಾಗಿರಬಹುದು, ಅವರು ಅರ್ಚಕರನ್ನು (ಪೂಜಾರಿಗಳನ್ನು) ನೇಮಿಸಬಹುದು ಮತ್ತು ಆಚರಣೆಗಳನ್ನು ಮಾಡದಿದ್ದಕ್ಕಾಗಿ ಅಥವಾ ಅನೈತಿಕ ಚಟುವಟಿಕೆಗಳಿಗಾಗಿ ಅವರನ್ನು ತೆಗೆದುಹಾಕಬಹುದು. ಅರ್ಚಕರ ನೇಮಕಾತಿಯನ್ನು ಜಾತ್ಯತೀತ ಚಟುವಟಿಕೆ ಎಂದು ಕರೆಯುವ ಮೂಲಕ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎಂದು ಮಹ್ತಾ ಹೇಳಿದ್ದಾರೆ.

ಹಿಂದೂ ವೈಯಕ್ತಿಕ ಕಾನೂನುಗಳನ್ನು 1956ರಲ್ಲಿ ಕ್ರೋಡೀಕರಿಸಲಾಗಿದೆ. ಆದರೆ, ಮುಸ್ಲಿಮರು ಶರಿಯಾ ಕಾನೂನಿನಿಂದ ನಿಯಂತ್ರಿಸಲ್ಪಡುವುದನ್ನು ಮುಂದುವರೆಸಿದ್ದಾರೆ. ಈ ತಾರತಮ್ಯವನ್ನು ಎತ್ತಿ ತೋರಿಸುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 1996ರಲ್ಲಿ ಅಂತಹ ಹೋಲಿಕೆ ಸಾಧ್ಯವಿಲ್ಲ, ವೈಯಕ್ತಿಕ ಕಾನೂನು ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸುಧಾರಣೆಗಳು ಕ್ರಮೇಣ ನಡೆಯುವ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು ಎಂದು ವಿವರಿಸಿದ್ದಾರೆ.

ವಕ್ಫ್ ಮಂಡಳಿಗಳನ್ನು ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳು, ಧರ್ಮ ಮತ್ತು ಆಚರಣೆಗಳೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ವಕ್ಫ್ ಮಂಡಳಿಗಳು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದ್ದಾಗಿವೆ. ಅದು ಜಾತ್ಯತೀತ ಚಟುವಟಿಕೆಯಾಗಿದೆ. ಸರ್ಕಾರ ಶಾಸನದ ಮೂಲಕ ಅದನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿದೆ. ಯಾವುದೇ ಅರ್ಜಿದಾರರು ವಕ್ಫ್ ತಿದ್ದುಪಡಿ ಕಾಯ್ದೆ, 2025 ಅನ್ನು ಜಾರಿಗೆ ತರುವ ಸಂಸತ್ತಿನ ಶಾಸಕಾಂಗ ಸಾಮರ್ಥ್ಯವನ್ನು ಪ್ರಶ್ನಿಸಿಲ್ಲ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ.

ಪ್ರಾಚೀನ ಸ್ಮಾರಕಗಳನ್ನು ವಕ್ಫ್ ವ್ಯಾಪ್ತಿಯಿಂದ ಹೊರತರುವ ಕುರಿತು ಜೆಪಿಸಿ ಭಾರತೀಯ ಪುರಾತತ್ವ ಇಲಾಖೆಯೊಂದಿಗೆ ಸಮಾಲೋಚಿಸಿದೆ. ಸಂರಕ್ಷಿತ ಮತ್ತು ಪ್ರಾಚೀನ ಸ್ಮಾರಕಗಳಲ್ಲಿ ವರ್ಷಗಳಿಂದ ನಡೆಯುತ್ತಿರುವ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿಲ್ಲವಾದರೂ, ಈ ಸ್ಮಾರಕಗಳನ್ನು ವಕ್ಫ್‌ಗಳಾಗಿ ನಿರ್ವಹಿಸುವ ವಕ್ಫ್ ಮಂಡಳಿಗಳು ಅಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಏಕಪಕ್ಷೀಯವಾಗಿ ಅನುಮತಿಸಿವೆ. ಇದು ಸ್ಮಾರಕಗಳ ಸಂರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಮೆಹ್ತಾ ವಾದಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ, ವಕ್ಫ್ ಮಂಡಳಿಗಳು ಪ್ರಾಚೀನ ಸ್ಮಾರಕಗಳ ದುರಸ್ತಿ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಕೈಗೊಳ್ಳದಂತೆ ಎಎಸ್‌ಐ ನಿರ್ಬಂಧಿಸಿವೆ ಎಂದು ಮೆಹ್ತಾ ಹೇಳಿದ್ದಾರೆ.

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...