Homeಮುಖಪುಟಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ...

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಕಾಯ್ದೆಯಿಂದ ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ರಾಜ್ಯ ಔಕಾಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರು ಬಹುಮತ ಸಾಧಿಸಬಹುದು ಎಂಬ ಅರ್ಜಿದಾರರ ವಾದವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.

ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಹಿಂದೂ, ಸಿಖ್ ಹಾಗೂ ಕ್ರೈಸ್ತ ಧಾರ್ಮಿಕ ದತ್ತಿ ಮಂಡಳಿಗಳ ಸಂಯೋಜನೆ ಜೊತೆ ಹೋಲಿಕೆ ಮಾಡುವ ಮೂಲಕ ಮುಸ್ಲಿಮರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದೆ.

ಸೈದ್ಧಾಂತಿಕವಾಗಿ ಮುಸ್ಲಿಮೇತರರು ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ಔಕಾಫ್ ಮಂಡಳಿಗಳಲ್ಲಿ ಬಹುಮತ ಸಾಧಿಸುತ್ತಾರೆ ಎಂಬ ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿರುವ ಅರ್ಜಿದಾರರ ವಾದವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅಲ್ಲಗಳೆದ್ದಾರೆ.

ಈ ಸಂಬಂಧ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಜಂಟಿ ಸಂಸದೀಯ ಸಮಿತಿಗೆ ಭರವಸೆ ನೀಡಿದ ಪತ್ರದ ಪ್ರತಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ಪ್ರತಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಮುಂದೆ ಪ್ರಸ್ತುತಪಡಿಸಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್ ಮಂಗಳವಾರ ಸುಮಾರು 30 ನಿಮಿಷಗಳ ಕಾಲ ವಕ್ಫ್‌ ಕೌನ್ಸಿಲ್ ಮತ್ತು ಮಂಡಳಿಗಳು ತಮ್ಮ ಅಲ್ಪಸಂಖ್ಯಾತ ಸ್ಥಾನವನ್ನು ಕಳೆದುಕೊಳ್ಳುತ್ತಿವೆ ಎಂಬ ಮುಸ್ಲಿಮರಲ್ಲಿರುವ ಆತಂಕವನ್ನು ಎತ್ತಿ ತೋರಿಸಿದ್ದಾರೆ. ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ಮೂಲಕ ಕನಿಷ್ಠ ಸೈದ್ಧಾಂತಿಕವಾಗಿ ಈ ಎರಡು ಸಂಸ್ಥೆಗಳಲ್ಲಿ ಮುಸ್ಲಿಮೇತರರನ್ನು ಬಹುಮತವನ್ನಾಗಿ ಮಾಡಲು ಉದ್ದೇಶಿಸಿದೆ ಎಂದು ಹೇಳಿದ್ದಾರೆ.

ಸರ್ಕಾರ ಹಿಂದೂ, ಸಿಖ್ ಮತ್ತು ಕ್ರೈಸ್ತ ಧರ್ಮಗಳ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಆ ಧರ್ಮಗಳಲ್ಲಿ ನಂಬಿಕೆ ಇಲ್ಲದವರನ್ನು ಸದಸ್ಯರಾಗಿ ಮಾಡಲು ಪ್ರಯತ್ನಿಸಿದರುವಾಗ, ಮುಸ್ಲಿಮರ ವಕ್ಫ್‌ ಮಂಡಳಿಗಳಿಗೆ ಮಾತ್ರ ಏಕೆ ಈ ನಿಯಮ? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ಸರ್ಕಾರದ ಈ ಕ್ರಮವನ್ನು ಧರ್ಮಾಧಾರಿತ ತಾರತಮ್ಯ ಎಂದು ಕರೆದ ಸಿಬಲ್, ಇದು ಸಂವಿಧಾನದ ವಿಧಿ 15 ರ ಅಡಿಯಲ್ಲಿ ಖಾತರಿಪಡಿಸಲಾದ ತಾರತಮ್ಯ ವಿರೋಧಿ, ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, “ಹಿಂದೂ ಧಾರ್ಮಿಕ ದತ್ತಿ ಮಂಡಳಿ ಸದಸ್ಯರು ದೇವಸ್ಥಾನಗಳಿಗೆ ಹೋಗುತ್ತಾರೆ ಮತ್ತು ಪೂಜಾಕ್ರಮಗಳ ಮೇಲ್ವಿಚಾರಣೆ ನಡೆಸುತ್ತಾರೆ ಎಂದಿದ್ದಾರೆ.

ದತ್ತಿ ಆಯುಕ್ತರು ಹಿಂದೂಯೇತರರಾಗಿರಬಹುದು, ಅವರು ಅರ್ಚಕರನ್ನು (ಪೂಜಾರಿಗಳನ್ನು) ನೇಮಿಸಬಹುದು ಮತ್ತು ಆಚರಣೆಗಳನ್ನು ಮಾಡದಿದ್ದಕ್ಕಾಗಿ ಅಥವಾ ಅನೈತಿಕ ಚಟುವಟಿಕೆಗಳಿಗಾಗಿ ಅವರನ್ನು ತೆಗೆದುಹಾಕಬಹುದು. ಅರ್ಚಕರ ನೇಮಕಾತಿಯನ್ನು ಜಾತ್ಯತೀತ ಚಟುವಟಿಕೆ ಎಂದು ಕರೆಯುವ ಮೂಲಕ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎಂದು ಮಹ್ತಾ ಹೇಳಿದ್ದಾರೆ.

ಹಿಂದೂ ವೈಯಕ್ತಿಕ ಕಾನೂನುಗಳನ್ನು 1956ರಲ್ಲಿ ಕ್ರೋಡೀಕರಿಸಲಾಗಿದೆ. ಆದರೆ, ಮುಸ್ಲಿಮರು ಶರಿಯಾ ಕಾನೂನಿನಿಂದ ನಿಯಂತ್ರಿಸಲ್ಪಡುವುದನ್ನು ಮುಂದುವರೆಸಿದ್ದಾರೆ. ಈ ತಾರತಮ್ಯವನ್ನು ಎತ್ತಿ ತೋರಿಸುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 1996ರಲ್ಲಿ ಅಂತಹ ಹೋಲಿಕೆ ಸಾಧ್ಯವಿಲ್ಲ, ವೈಯಕ್ತಿಕ ಕಾನೂನು ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸುಧಾರಣೆಗಳು ಕ್ರಮೇಣ ನಡೆಯುವ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು ಎಂದು ವಿವರಿಸಿದ್ದಾರೆ.

ವಕ್ಫ್ ಮಂಡಳಿಗಳನ್ನು ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳು, ಧರ್ಮ ಮತ್ತು ಆಚರಣೆಗಳೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ವಕ್ಫ್ ಮಂಡಳಿಗಳು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದ್ದಾಗಿವೆ. ಅದು ಜಾತ್ಯತೀತ ಚಟುವಟಿಕೆಯಾಗಿದೆ. ಸರ್ಕಾರ ಶಾಸನದ ಮೂಲಕ ಅದನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿದೆ. ಯಾವುದೇ ಅರ್ಜಿದಾರರು ವಕ್ಫ್ ತಿದ್ದುಪಡಿ ಕಾಯ್ದೆ, 2025 ಅನ್ನು ಜಾರಿಗೆ ತರುವ ಸಂಸತ್ತಿನ ಶಾಸಕಾಂಗ ಸಾಮರ್ಥ್ಯವನ್ನು ಪ್ರಶ್ನಿಸಿಲ್ಲ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ.

ಪ್ರಾಚೀನ ಸ್ಮಾರಕಗಳನ್ನು ವಕ್ಫ್ ವ್ಯಾಪ್ತಿಯಿಂದ ಹೊರತರುವ ಕುರಿತು ಜೆಪಿಸಿ ಭಾರತೀಯ ಪುರಾತತ್ವ ಇಲಾಖೆಯೊಂದಿಗೆ ಸಮಾಲೋಚಿಸಿದೆ. ಸಂರಕ್ಷಿತ ಮತ್ತು ಪ್ರಾಚೀನ ಸ್ಮಾರಕಗಳಲ್ಲಿ ವರ್ಷಗಳಿಂದ ನಡೆಯುತ್ತಿರುವ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿಲ್ಲವಾದರೂ, ಈ ಸ್ಮಾರಕಗಳನ್ನು ವಕ್ಫ್‌ಗಳಾಗಿ ನಿರ್ವಹಿಸುವ ವಕ್ಫ್ ಮಂಡಳಿಗಳು ಅಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಏಕಪಕ್ಷೀಯವಾಗಿ ಅನುಮತಿಸಿವೆ. ಇದು ಸ್ಮಾರಕಗಳ ಸಂರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಮೆಹ್ತಾ ವಾದಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ, ವಕ್ಫ್ ಮಂಡಳಿಗಳು ಪ್ರಾಚೀನ ಸ್ಮಾರಕಗಳ ದುರಸ್ತಿ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಕೈಗೊಳ್ಳದಂತೆ ಎಎಸ್‌ಐ ನಿರ್ಬಂಧಿಸಿವೆ ಎಂದು ಮೆಹ್ತಾ ಹೇಳಿದ್ದಾರೆ.

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...