Homeಮುಖಪುಟಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ...

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಕಾಯ್ದೆಯಿಂದ ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ರಾಜ್ಯ ಔಕಾಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರು ಬಹುಮತ ಸಾಧಿಸಬಹುದು ಎಂಬ ಅರ್ಜಿದಾರರ ವಾದವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.

ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಹಿಂದೂ, ಸಿಖ್ ಹಾಗೂ ಕ್ರೈಸ್ತ ಧಾರ್ಮಿಕ ದತ್ತಿ ಮಂಡಳಿಗಳ ಸಂಯೋಜನೆ ಜೊತೆ ಹೋಲಿಕೆ ಮಾಡುವ ಮೂಲಕ ಮುಸ್ಲಿಮರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದೆ.

ಸೈದ್ಧಾಂತಿಕವಾಗಿ ಮುಸ್ಲಿಮೇತರರು ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ಔಕಾಫ್ ಮಂಡಳಿಗಳಲ್ಲಿ ಬಹುಮತ ಸಾಧಿಸುತ್ತಾರೆ ಎಂಬ ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿರುವ ಅರ್ಜಿದಾರರ ವಾದವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅಲ್ಲಗಳೆದ್ದಾರೆ.

ಈ ಸಂಬಂಧ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಜಂಟಿ ಸಂಸದೀಯ ಸಮಿತಿಗೆ ಭರವಸೆ ನೀಡಿದ ಪತ್ರದ ಪ್ರತಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ಪ್ರತಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಮುಂದೆ ಪ್ರಸ್ತುತಪಡಿಸಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್ ಮಂಗಳವಾರ ಸುಮಾರು 30 ನಿಮಿಷಗಳ ಕಾಲ ವಕ್ಫ್‌ ಕೌನ್ಸಿಲ್ ಮತ್ತು ಮಂಡಳಿಗಳು ತಮ್ಮ ಅಲ್ಪಸಂಖ್ಯಾತ ಸ್ಥಾನವನ್ನು ಕಳೆದುಕೊಳ್ಳುತ್ತಿವೆ ಎಂಬ ಮುಸ್ಲಿಮರಲ್ಲಿರುವ ಆತಂಕವನ್ನು ಎತ್ತಿ ತೋರಿಸಿದ್ದಾರೆ. ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ಮೂಲಕ ಕನಿಷ್ಠ ಸೈದ್ಧಾಂತಿಕವಾಗಿ ಈ ಎರಡು ಸಂಸ್ಥೆಗಳಲ್ಲಿ ಮುಸ್ಲಿಮೇತರರನ್ನು ಬಹುಮತವನ್ನಾಗಿ ಮಾಡಲು ಉದ್ದೇಶಿಸಿದೆ ಎಂದು ಹೇಳಿದ್ದಾರೆ.

ಸರ್ಕಾರ ಹಿಂದೂ, ಸಿಖ್ ಮತ್ತು ಕ್ರೈಸ್ತ ಧರ್ಮಗಳ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಆ ಧರ್ಮಗಳಲ್ಲಿ ನಂಬಿಕೆ ಇಲ್ಲದವರನ್ನು ಸದಸ್ಯರಾಗಿ ಮಾಡಲು ಪ್ರಯತ್ನಿಸಿದರುವಾಗ, ಮುಸ್ಲಿಮರ ವಕ್ಫ್‌ ಮಂಡಳಿಗಳಿಗೆ ಮಾತ್ರ ಏಕೆ ಈ ನಿಯಮ? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ಸರ್ಕಾರದ ಈ ಕ್ರಮವನ್ನು ಧರ್ಮಾಧಾರಿತ ತಾರತಮ್ಯ ಎಂದು ಕರೆದ ಸಿಬಲ್, ಇದು ಸಂವಿಧಾನದ ವಿಧಿ 15 ರ ಅಡಿಯಲ್ಲಿ ಖಾತರಿಪಡಿಸಲಾದ ತಾರತಮ್ಯ ವಿರೋಧಿ, ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, “ಹಿಂದೂ ಧಾರ್ಮಿಕ ದತ್ತಿ ಮಂಡಳಿ ಸದಸ್ಯರು ದೇವಸ್ಥಾನಗಳಿಗೆ ಹೋಗುತ್ತಾರೆ ಮತ್ತು ಪೂಜಾಕ್ರಮಗಳ ಮೇಲ್ವಿಚಾರಣೆ ನಡೆಸುತ್ತಾರೆ ಎಂದಿದ್ದಾರೆ.

ದತ್ತಿ ಆಯುಕ್ತರು ಹಿಂದೂಯೇತರರಾಗಿರಬಹುದು, ಅವರು ಅರ್ಚಕರನ್ನು (ಪೂಜಾರಿಗಳನ್ನು) ನೇಮಿಸಬಹುದು ಮತ್ತು ಆಚರಣೆಗಳನ್ನು ಮಾಡದಿದ್ದಕ್ಕಾಗಿ ಅಥವಾ ಅನೈತಿಕ ಚಟುವಟಿಕೆಗಳಿಗಾಗಿ ಅವರನ್ನು ತೆಗೆದುಹಾಕಬಹುದು. ಅರ್ಚಕರ ನೇಮಕಾತಿಯನ್ನು ಜಾತ್ಯತೀತ ಚಟುವಟಿಕೆ ಎಂದು ಕರೆಯುವ ಮೂಲಕ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎಂದು ಮಹ್ತಾ ಹೇಳಿದ್ದಾರೆ.

ಹಿಂದೂ ವೈಯಕ್ತಿಕ ಕಾನೂನುಗಳನ್ನು 1956ರಲ್ಲಿ ಕ್ರೋಡೀಕರಿಸಲಾಗಿದೆ. ಆದರೆ, ಮುಸ್ಲಿಮರು ಶರಿಯಾ ಕಾನೂನಿನಿಂದ ನಿಯಂತ್ರಿಸಲ್ಪಡುವುದನ್ನು ಮುಂದುವರೆಸಿದ್ದಾರೆ. ಈ ತಾರತಮ್ಯವನ್ನು ಎತ್ತಿ ತೋರಿಸುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 1996ರಲ್ಲಿ ಅಂತಹ ಹೋಲಿಕೆ ಸಾಧ್ಯವಿಲ್ಲ, ವೈಯಕ್ತಿಕ ಕಾನೂನು ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸುಧಾರಣೆಗಳು ಕ್ರಮೇಣ ನಡೆಯುವ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು ಎಂದು ವಿವರಿಸಿದ್ದಾರೆ.

ವಕ್ಫ್ ಮಂಡಳಿಗಳನ್ನು ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳು, ಧರ್ಮ ಮತ್ತು ಆಚರಣೆಗಳೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ವಕ್ಫ್ ಮಂಡಳಿಗಳು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದ್ದಾಗಿವೆ. ಅದು ಜಾತ್ಯತೀತ ಚಟುವಟಿಕೆಯಾಗಿದೆ. ಸರ್ಕಾರ ಶಾಸನದ ಮೂಲಕ ಅದನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿದೆ. ಯಾವುದೇ ಅರ್ಜಿದಾರರು ವಕ್ಫ್ ತಿದ್ದುಪಡಿ ಕಾಯ್ದೆ, 2025 ಅನ್ನು ಜಾರಿಗೆ ತರುವ ಸಂಸತ್ತಿನ ಶಾಸಕಾಂಗ ಸಾಮರ್ಥ್ಯವನ್ನು ಪ್ರಶ್ನಿಸಿಲ್ಲ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ.

ಪ್ರಾಚೀನ ಸ್ಮಾರಕಗಳನ್ನು ವಕ್ಫ್ ವ್ಯಾಪ್ತಿಯಿಂದ ಹೊರತರುವ ಕುರಿತು ಜೆಪಿಸಿ ಭಾರತೀಯ ಪುರಾತತ್ವ ಇಲಾಖೆಯೊಂದಿಗೆ ಸಮಾಲೋಚಿಸಿದೆ. ಸಂರಕ್ಷಿತ ಮತ್ತು ಪ್ರಾಚೀನ ಸ್ಮಾರಕಗಳಲ್ಲಿ ವರ್ಷಗಳಿಂದ ನಡೆಯುತ್ತಿರುವ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿಲ್ಲವಾದರೂ, ಈ ಸ್ಮಾರಕಗಳನ್ನು ವಕ್ಫ್‌ಗಳಾಗಿ ನಿರ್ವಹಿಸುವ ವಕ್ಫ್ ಮಂಡಳಿಗಳು ಅಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಏಕಪಕ್ಷೀಯವಾಗಿ ಅನುಮತಿಸಿವೆ. ಇದು ಸ್ಮಾರಕಗಳ ಸಂರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಮೆಹ್ತಾ ವಾದಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ, ವಕ್ಫ್ ಮಂಡಳಿಗಳು ಪ್ರಾಚೀನ ಸ್ಮಾರಕಗಳ ದುರಸ್ತಿ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಕೈಗೊಳ್ಳದಂತೆ ಎಎಸ್‌ಐ ನಿರ್ಬಂಧಿಸಿವೆ ಎಂದು ಮೆಹ್ತಾ ಹೇಳಿದ್ದಾರೆ.

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...