Homeಮುಖಪುಟಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ...

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಕಾಯ್ದೆಯಿಂದ ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ರಾಜ್ಯ ಔಕಾಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರು ಬಹುಮತ ಸಾಧಿಸಬಹುದು ಎಂಬ ಅರ್ಜಿದಾರರ ವಾದವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.

ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಹಿಂದೂ, ಸಿಖ್ ಹಾಗೂ ಕ್ರೈಸ್ತ ಧಾರ್ಮಿಕ ದತ್ತಿ ಮಂಡಳಿಗಳ ಸಂಯೋಜನೆ ಜೊತೆ ಹೋಲಿಕೆ ಮಾಡುವ ಮೂಲಕ ಮುಸ್ಲಿಮರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದೆ.

ಸೈದ್ಧಾಂತಿಕವಾಗಿ ಮುಸ್ಲಿಮೇತರರು ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ಔಕಾಫ್ ಮಂಡಳಿಗಳಲ್ಲಿ ಬಹುಮತ ಸಾಧಿಸುತ್ತಾರೆ ಎಂಬ ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿರುವ ಅರ್ಜಿದಾರರ ವಾದವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅಲ್ಲಗಳೆದ್ದಾರೆ.

ಈ ಸಂಬಂಧ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಜಂಟಿ ಸಂಸದೀಯ ಸಮಿತಿಗೆ ಭರವಸೆ ನೀಡಿದ ಪತ್ರದ ಪ್ರತಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ಪ್ರತಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಮುಂದೆ ಪ್ರಸ್ತುತಪಡಿಸಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್ ಮಂಗಳವಾರ ಸುಮಾರು 30 ನಿಮಿಷಗಳ ಕಾಲ ವಕ್ಫ್‌ ಕೌನ್ಸಿಲ್ ಮತ್ತು ಮಂಡಳಿಗಳು ತಮ್ಮ ಅಲ್ಪಸಂಖ್ಯಾತ ಸ್ಥಾನವನ್ನು ಕಳೆದುಕೊಳ್ಳುತ್ತಿವೆ ಎಂಬ ಮುಸ್ಲಿಮರಲ್ಲಿರುವ ಆತಂಕವನ್ನು ಎತ್ತಿ ತೋರಿಸಿದ್ದಾರೆ. ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ಮೂಲಕ ಕನಿಷ್ಠ ಸೈದ್ಧಾಂತಿಕವಾಗಿ ಈ ಎರಡು ಸಂಸ್ಥೆಗಳಲ್ಲಿ ಮುಸ್ಲಿಮೇತರರನ್ನು ಬಹುಮತವನ್ನಾಗಿ ಮಾಡಲು ಉದ್ದೇಶಿಸಿದೆ ಎಂದು ಹೇಳಿದ್ದಾರೆ.

ಸರ್ಕಾರ ಹಿಂದೂ, ಸಿಖ್ ಮತ್ತು ಕ್ರೈಸ್ತ ಧರ್ಮಗಳ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಆ ಧರ್ಮಗಳಲ್ಲಿ ನಂಬಿಕೆ ಇಲ್ಲದವರನ್ನು ಸದಸ್ಯರಾಗಿ ಮಾಡಲು ಪ್ರಯತ್ನಿಸಿದರುವಾಗ, ಮುಸ್ಲಿಮರ ವಕ್ಫ್‌ ಮಂಡಳಿಗಳಿಗೆ ಮಾತ್ರ ಏಕೆ ಈ ನಿಯಮ? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ಸರ್ಕಾರದ ಈ ಕ್ರಮವನ್ನು ಧರ್ಮಾಧಾರಿತ ತಾರತಮ್ಯ ಎಂದು ಕರೆದ ಸಿಬಲ್, ಇದು ಸಂವಿಧಾನದ ವಿಧಿ 15 ರ ಅಡಿಯಲ್ಲಿ ಖಾತರಿಪಡಿಸಲಾದ ತಾರತಮ್ಯ ವಿರೋಧಿ, ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, “ಹಿಂದೂ ಧಾರ್ಮಿಕ ದತ್ತಿ ಮಂಡಳಿ ಸದಸ್ಯರು ದೇವಸ್ಥಾನಗಳಿಗೆ ಹೋಗುತ್ತಾರೆ ಮತ್ತು ಪೂಜಾಕ್ರಮಗಳ ಮೇಲ್ವಿಚಾರಣೆ ನಡೆಸುತ್ತಾರೆ ಎಂದಿದ್ದಾರೆ.

ದತ್ತಿ ಆಯುಕ್ತರು ಹಿಂದೂಯೇತರರಾಗಿರಬಹುದು, ಅವರು ಅರ್ಚಕರನ್ನು (ಪೂಜಾರಿಗಳನ್ನು) ನೇಮಿಸಬಹುದು ಮತ್ತು ಆಚರಣೆಗಳನ್ನು ಮಾಡದಿದ್ದಕ್ಕಾಗಿ ಅಥವಾ ಅನೈತಿಕ ಚಟುವಟಿಕೆಗಳಿಗಾಗಿ ಅವರನ್ನು ತೆಗೆದುಹಾಕಬಹುದು. ಅರ್ಚಕರ ನೇಮಕಾತಿಯನ್ನು ಜಾತ್ಯತೀತ ಚಟುವಟಿಕೆ ಎಂದು ಕರೆಯುವ ಮೂಲಕ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎಂದು ಮಹ್ತಾ ಹೇಳಿದ್ದಾರೆ.

ಹಿಂದೂ ವೈಯಕ್ತಿಕ ಕಾನೂನುಗಳನ್ನು 1956ರಲ್ಲಿ ಕ್ರೋಡೀಕರಿಸಲಾಗಿದೆ. ಆದರೆ, ಮುಸ್ಲಿಮರು ಶರಿಯಾ ಕಾನೂನಿನಿಂದ ನಿಯಂತ್ರಿಸಲ್ಪಡುವುದನ್ನು ಮುಂದುವರೆಸಿದ್ದಾರೆ. ಈ ತಾರತಮ್ಯವನ್ನು ಎತ್ತಿ ತೋರಿಸುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 1996ರಲ್ಲಿ ಅಂತಹ ಹೋಲಿಕೆ ಸಾಧ್ಯವಿಲ್ಲ, ವೈಯಕ್ತಿಕ ಕಾನೂನು ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸುಧಾರಣೆಗಳು ಕ್ರಮೇಣ ನಡೆಯುವ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು ಎಂದು ವಿವರಿಸಿದ್ದಾರೆ.

ವಕ್ಫ್ ಮಂಡಳಿಗಳನ್ನು ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳು, ಧರ್ಮ ಮತ್ತು ಆಚರಣೆಗಳೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ವಕ್ಫ್ ಮಂಡಳಿಗಳು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದ್ದಾಗಿವೆ. ಅದು ಜಾತ್ಯತೀತ ಚಟುವಟಿಕೆಯಾಗಿದೆ. ಸರ್ಕಾರ ಶಾಸನದ ಮೂಲಕ ಅದನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿದೆ. ಯಾವುದೇ ಅರ್ಜಿದಾರರು ವಕ್ಫ್ ತಿದ್ದುಪಡಿ ಕಾಯ್ದೆ, 2025 ಅನ್ನು ಜಾರಿಗೆ ತರುವ ಸಂಸತ್ತಿನ ಶಾಸಕಾಂಗ ಸಾಮರ್ಥ್ಯವನ್ನು ಪ್ರಶ್ನಿಸಿಲ್ಲ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ.

ಪ್ರಾಚೀನ ಸ್ಮಾರಕಗಳನ್ನು ವಕ್ಫ್ ವ್ಯಾಪ್ತಿಯಿಂದ ಹೊರತರುವ ಕುರಿತು ಜೆಪಿಸಿ ಭಾರತೀಯ ಪುರಾತತ್ವ ಇಲಾಖೆಯೊಂದಿಗೆ ಸಮಾಲೋಚಿಸಿದೆ. ಸಂರಕ್ಷಿತ ಮತ್ತು ಪ್ರಾಚೀನ ಸ್ಮಾರಕಗಳಲ್ಲಿ ವರ್ಷಗಳಿಂದ ನಡೆಯುತ್ತಿರುವ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿಲ್ಲವಾದರೂ, ಈ ಸ್ಮಾರಕಗಳನ್ನು ವಕ್ಫ್‌ಗಳಾಗಿ ನಿರ್ವಹಿಸುವ ವಕ್ಫ್ ಮಂಡಳಿಗಳು ಅಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಏಕಪಕ್ಷೀಯವಾಗಿ ಅನುಮತಿಸಿವೆ. ಇದು ಸ್ಮಾರಕಗಳ ಸಂರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಮೆಹ್ತಾ ವಾದಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ, ವಕ್ಫ್ ಮಂಡಳಿಗಳು ಪ್ರಾಚೀನ ಸ್ಮಾರಕಗಳ ದುರಸ್ತಿ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಕೈಗೊಳ್ಳದಂತೆ ಎಎಸ್‌ಐ ನಿರ್ಬಂಧಿಸಿವೆ ಎಂದು ಮೆಹ್ತಾ ಹೇಳಿದ್ದಾರೆ.

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....