Homeಮುಖಪುಟವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

- Advertisement -
- Advertisement -

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಮ್‌ಪಿಎಲ್‌ಬಿ) ಮಾರ್ಚ್ 10 ರಂದು ಸಂಸತ್ತಿನ ಬಳಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೃಹತ್ ಹೋರಾಟ ನಡೆಸುವ ಯೋಜನೆಯನ್ನು ಘೋಷಿಸಿದ ಕೆಲವು ದಿನಗಳ ನಂತರ, ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ಕೂಡ ಅದೇ ಸ್ಥಳದಲ್ಲಿ ಮಸೂದೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ವಕ್ಫ್ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತಮ್ಮ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಚೌಧರಿ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಚೌಧರಿ, “ದೆಹಲಿ ಪೊಲೀಸರು ವಕ್ಫ್ ಮಸೂದೆಯ ವಿರುದ್ಧ ಪ್ರತಿಭಟಿಸಲು ಮುಸ್ಲಿಮರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳುತ್ತಾರೆ. ಹಿಂದೂಗಳು ಆ ಸ್ಥಳದಲ್ಲಿ ಮುಸ್ಲಿಮರು ಸೇರದಂತೆ ನೋಡಿಕೊಳ್ಳಬೇಕು” ಎಂದು ಅವರು ಕರೆ ನೀಡಿದ್ದಾರೆ.

“ನಾವೆಲ್ಲರೂ ಹಿಂದೂ ಸಹೋದರರು ಒಟ್ಟಾಗಿ ಹೋರಾಡಿದರೆ, ವಕ್ಫ್ ಮಂಡಳಿಯನ್ನು ಮುಗಿಸಬಹುದು. ಇತರರು ಅದನ್ನು ಮಾಡಲು ಸಾಧ್ಯವಿಲ್ಲ, ಮಾರ್ಚ್ 10 ರಂದು ವಕ್ಫ್ ಸಂಸ್ಥೆಯನ್ನು ವಿರೋಧಿಸಲು ನಾವು ಪೂರ್ಣ ಬಲದಿಂದ ಜಂತರ್ ಮಂತರ್‌ಗೆ ಆಗಮಿಸುತ್ತೇವೆ ಎಂದು ನಾನು ಎlfl ಹಿಂದೂ ಸಹೋದರರಿಗೆ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಸರ್ಕಾರವು ವಕ್ಫ್ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮತ್ತು ದೇಶಾದ್ಯಂತ ಅದರ ವಿರುದ್ಧ ಪ್ರತಿಭಟನೆಗಳನ್ನು ನಡೆಸುವಂತೆ ತಮ್ಮ ಬೆಂಬಲಿಗರನ್ನು ಕೇಳಿಕೊಂಡರು.

ಜಂತರ್ ಮಂತರ್‌ನಲ್ಲಿ ಮುಸ್ಲಿಂ ಪ್ರತಿಭಟನಾಕಾರರೊಂದಿಗೆ ದೈಹಿಕ ಘರ್ಷಣೆಗೆ ತಮ್ಮ ಬೆಂಬಲಿಗರು ಹಿಂಜರಿಯುವುದಿಲ್ಲ. ವಕ್ಫ್ ಮಂಡಳಿಯನ್ನು ಬೆಂಬಲಿಸಲು ಈ ಮುಲ್ಲಾಗಳು ಒಟ್ಟುಗೂಡಲು ನಾವು ಅನುಮತಿಸುವುದಿಲ್ಲ ಎಂದು ಚೌಧರಿ ಪ್ರಚೋಧನಾತ್ಮಕ ಹೇಳಕೆ ನೀಡಿದ್ದಾರೆ.

ಮುಸ್ಲಿಮರು ಪ್ರತಿಭಟಿಸದಿದ್ದರೆ ಜನರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಅವರು ಭಯ ಹುಟ್ಟಿಸುವ ಪ್ರಚಾರವನ್ನು ಸಹ ಮಾಡಿದರು.

ಮಾರ್ಚ್ 1 ರಂದು, ಎಐಎಮ್‌ಪಿಎಲ್‌ಬಿ ವಕ್ತಾರ ಡಾ. ಸೈಯದ್ ಖಾಸಿಂ ರಸೂಲ್ ಇಲ್ಯಾಸ್, ಆ ದಿನ ಸಂಸತ್ತಿನಲ್ಲಿ ಮಂಡಿಸಲಿರುವ ವಕ್ಫ್ ಮಸೂದೆಯ ವಿರುದ್ಧ ಮಂಡಳಿಯು ಪ್ರತಿಭಟನೆಯನ್ನು ಆಯೋಜಿಸುತ್ತದೆ ಎಂದು ಹೇಳಿದರು.

ಮಂಡಳಿಯು ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಸಾಮಾನ್ಯ ಮುಸ್ಲಿಂ ಸಮುದಾಯದೊಂದಿಗೆ ಕೇಂದ್ರ ಸರ್ಕಾರ, ಅದರ ಮಿತ್ರ ಪಕ್ಷಗಳು ಮತ್ತು ವಿಶೇಷವಾಗಿ ಸಂಬಂಧಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮುಂದೆ ತನ್ನ ನಿಲುವನ್ನು ಬಲವಾಗಿ ಮಂಡಿಸಿದೆ ಎಂದು ಅವರು ಹೇಳಿದರು. ಪ್ರಸ್ತಾವಿತ ಮಸೂದೆಯು ವಕ್ಫ್ ಆಸ್ತಿಗಳನ್ನು ವಶಪಡಿಸಿಕೊಳ್ಳುವ, ಅದನ್ನು ನಾಶಮಾಡುವ ಒಂದು ದುಷ್ಟ ಪಿತೂರಿಯಾಗಿದ್ದು, ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಒತ್ತಿ ಹೇಳಿದರು. ಆದರೆ, ಕೇಂದ್ರ ಸರ್ಕಾರವು ಈ ಕಳವಳಗಳಿಗೆ ಕಿವಿಗೊಡಲಿಲ್ಲ.

“ಸರ್ಕಾರವು ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಯೋಜಿಸುತ್ತಿರುವುದರಿಂದ, ಮಂಡಳಿಯ ಕಾರ್ಯಕಾರಿ ಸಮಿತಿಯು ಮಾರ್ಚ್ 10 ರಂದು ಸಂಸತ್ತಿನ ಮುಂದೆ ಜಂತರ್ ಮಂತರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಹಾಗೂ ಅವರ ಪ್ರತಿಭಟನೆಯನ್ನು ನೋಂದಾಯಿಸಲು. ವಿವಿಧ ಧಾರ್ಮಿಕ, ರಾಷ್ಟ್ರೀಯ ಮತ್ತು ಸಾಮಾಜಿಕ ಸಂಘಟನೆಗಳ ಕೇಂದ್ರ ನಾಯಕತ್ವದೊಂದಿಗೆ ಎಐಎಮ್‌ಪಿಎಲ್‌ಬಿಯ ಸಂಪೂರ್ಣ ನಾಯಕತ್ವವು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತದೆ. ಎಲ್ಲ ವಿರೋಧ ಪಕ್ಷಗಳು, ನಾಗರಿಕ ಸಮಾಜ ಚಳುವಳಿಗಳನ್ನು ಈ ಧರಣಿ ಪ್ರತಿಭಟನೆಯಲ್ಲಿ ಸೇರುವಂತೆ ಹಾಗೂ ಈ ಅನ್ಯಾಯ, ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ ಎಐಎಮ್‌ಪಿಎಲ್‌ಬಿ ಒತ್ತಾಯಿಸಿದೆ.

ಈ ಪ್ರತಿಭಟನೆಯಲ್ಲಿ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಸಾಮಾಜಿಕ ಮತ್ತು ರಾಜಕೀಯ ನಾಯಕತ್ವ, ಸಿಖ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಧಾರ್ಮಿಕ ಮುಖಂಡರು ಸಹ ಭಾಗವಹಿಸಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಹೆಚ್ಚುವರಿಯಾಗಿ, ಮಾರ್ಚ್ 7 ರಂದು, ವಿಜಯವಾಡ (ಆಂಧ್ರಪ್ರದೇಶ) ಮತ್ತು ಪಾಟ್ನಾ (ಬಿಹಾರ) ದಲ್ಲಿನ ರಾಜ್ಯ ಸಭೆಗಳ ಮುಂದೆ ಪ್ರತಿಭಟನೆಗಳು ನಡೆಯಲಿವೆ.

ದೇಶದ ಮುಖ್ಯವಾಹಿನಿಯ ಮಾಧ್ಯಮಗಳು ಕೋಮು ಶಕ್ತಿಗಳಿಂದ ನಡೆಸಲ್ಪಡುವ ಆಧಾರರಹಿತ, ದಾರಿತಪ್ಪಿಸುವ ನಿರೂಪಣೆಗಳನ್ನು ಪ್ರಚಾರ ಮಾಡುತ್ತಿರುವುದರ ಬಗ್ಗೆಯೂ ಮಂಡಳಿಯು ಆಕ್ರೋಶ ವ್ಯಕ್ತಪಡಿಸಿದೆ. ಮಿಲಿಟರಿ ಮತ್ತು ರೈಲ್ವೆಗಳ ನಂತರ, ವಕ್ಫ್ ಆಸ್ತಿಗಳು ದೇಶದಲ್ಲಿ ಅತಿ ದೊಡ್ಡದಾಗಿದೆ ಎಂದು ಅವರು ಹೇಳಿಕೊಳ್ಳುತ್ತಾರೆ. ಆದರೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿರುವ ಹಿಂದೂ ವಕ್ಫ್ ಆಸ್ತಿಗಳು ಹಾಗೂ ಒಡಿಶಾದಲ್ಲಿನ ದೇವಾಲಯ ಆಸ್ತಿಗಳು ಒಟ್ಟು ವಕ್ಫ್ ಆಸ್ತಿಗಳಿಗಿಂತ ಹೆಚ್ಚಿನದಾಗಿದೆ.

“ಇನ್ನೊಂದು ನಿರ್ಣಾಯಕ ಅಂಶವೆಂದರೆ, ಈ ಎಲ್ಲ ವಕ್ಫ್ ಆಸ್ತಿಗಳು ಮೂಲತಃ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಮುಸ್ಲಿಂ ಪೂರ್ವಜರು ದಾನ ಮಾಡಿದ ವೈಯಕ್ತಿಕ ಆಸ್ತಿಗಳಾಗಿದ್ದವು. ವಕ್ಫ್ ಕಾನೂನು ಅವುಗಳ ರಕ್ಷಣೆಯನ್ನು ಖಚಿತಪಡಿಸುತ್ತದೆ ಮತ್ತು ಅವುಗಳ ದುರುಪಯೋಗವನ್ನು ತಡೆಯುತ್ತದೆ” ಎಂದು ಡಾ. ಇಲ್ಯಾಸ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಭಾರತವನ್ನು ‘ಹಿಂದಿಯನ್ನಾಗಿ’ಸಲು ಪ್ರಯತ್ನಿಸುತ್ತಿದ್ದೀರಾ..?’; ಹಿಂದಿ ಹೇರಿಕೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಕಮಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...