Homeಕರ್ನಾಟಕವಕ್ಫ್ ಒತ್ತುವರಿ ತೆರವು ನೋಟಿಸ್ ಜಾರಿ ಮಾಡಿದರೆ ಕ್ರಮ | ಬಿಜೆಪಿ ಒತ್ತಡಕ್ಕೆ ಮಣಿದ ಕಾಂಗ್ರೆಸ್...

ವಕ್ಫ್ ಒತ್ತುವರಿ ತೆರವು ನೋಟಿಸ್ ಜಾರಿ ಮಾಡಿದರೆ ಕ್ರಮ | ಬಿಜೆಪಿ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ?

- Advertisement -
- Advertisement -

ಭೂ ಮ್ಯುಟೇಶನ್ ದಾಖಲೆಗಳನ್ನು ಬದಲಾಯಿಸುವ ಮತ್ತು ವಕ್ಫ್ ಕಾಯ್ದೆಯಡಿ ರೈತರಿಗೆ ಒತ್ತುವರಿ ತೆರವು ನೋಟಿಸ್ ನೀಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕರ್ನಾಟಕ ವಕ್ಫ್ ಮಂಡಳಿಯ ಪರವಾಗಿ ಕೆಲವು ಭೂ ಆಸ್ತಿಗಳ ಬಗ್ಗೆ ಮಾಡಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸಭೆ ನಡೆಸಿದ್ದರು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಜಿಲ್ಲೆಗಳ ಎಲ್ಲಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಪತ್ರದಲ್ಲಿ ನೆನಪಿಸಿದ್ದಾರೆ. ವಕ್ಫ್ ಒತ್ತುವರಿ

ಮ್ಯುಟೇಶನ್ ದಾಖಲೆಗಳನ್ನು ಬದಲಾಯಿಸಲು ಯಾವುದೇ ಸರ್ಕಾರಿ ಕಚೇರಿ ಅಥವಾ ಪ್ರಾಧಿಕಾರವು ಈ ಹಿಂದೆ ನೀಡಿದ್ದ ಎಲ್ಲಾ ನಿರ್ದೇಶನಗಳನ್ನು ಹಿಂಪಡೆಯಲಾಗಿದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ಎಲ್ಲಾ ನೋಟಿಸ್‌ಗಳನ್ನು ಸಹ ಹಿಂಪಡೆಯಲಾಗಿದ್ದು, ಸದರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ರೈತರು ಮತ್ತು ಭೂ ಮಾಲೀಕರಿಗೆ ನವೆಂಬರ್ 7 ರಂದು ಸಲ್ಲಿಸಿದ ಹಿಂದಿನ ಪತ್ರಗಳು ಮತ್ತು ಇತ್ತೀಚಿನ ಜ್ಞಾಪನೆಗಳನ್ನು ಹಿಂಪಡೆಯಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದ ಹೊರತಾಗಿಯೂ ಜ್ಞಾಪನೆ-2 ನೋಟಿಸ್ ನೀಡಿದ ಅಧಿಕಾರಿಗಳು ಸೂಕ್ತ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಕಟಾರಿಯಾ ತಮ್ಮ ಪತ್ರದಲ್ಲಿ ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನವೆಂಬರ್ 13 ರಂದು ಮೂರು ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನಲೆ ರಾಜ್ಯದಲ್ಲಿ ಹೊಸ ನಿರ್ದೇಶನವನ್ನು ನೀಡಲಾಗಿದೆ. ಉತ್ತರ ಕರ್ನಾಟಕದ ವಿಜಯಪುರದ ಹೊನವಾಡ ಗ್ರಾಮದ ಕೆಲವು ರೈತರು ವಕ್ಫ್‌ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು, ಅದನ್ನು ತೆರವು ಮಾಡಬೇಕು ಎಂದು ಕಳೆದ ತಿಂಗಳು ವಕ್ಫ್ ಮಂಡಳಿಯು ತೆರವು ನೋಟಿಸ್ ನೀಡಿತ್ತು. ಇದರ ನಂತರ ರಾಜ್ಯದಾದ್ಯಂತ ವಿವಾದ ಸೃಷ್ಟಿಯಾಗಿದ್ದು, ಇದೇ ರೀತಿ ದೂರುಗಳು ರಾಜ್ಯದ ಇತರ ಕೆಲವು ಭಾಗಗಳಿಂದ ಬಂದಿದ್ದವು.

ಅಕ್ಟೋಬರ್ 25 ರಂದು, ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ರಾಜ್ಯ ವಕ್ಫ್ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರು ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳಿಗೆ ವಕ್ಫ್ ಬೋರ್ಡ್ ಪರವಾಗಿ ಜಮೀನುಗಳನ್ನು 15 ದಿನಗಳಲ್ಲಿ ನೋಂದಾಯಿಸಲು ಸೂಚಿಸಿದ್ದಾರೆ ಎಂದು ಆರೋಪಿಸಿದ್ದರು. ಇದು ತೀವ್ರ ವಿವಾದವಾಗಿ ಮಾರ್ಪಾಡಾಗಿತ್ತು.

ಸೂರ್ಯ ಅವರ ಕೋರಿಕೆಯ ಮೇರೆಗೆ, ವಕ್ಫ್ (ತಿದ್ದುಪಡಿ) ಮಸೂದೆಯ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನವೆಂಬರ್ 7 ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಹುಬ್ಬಳ್ಳಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಮ್ಮ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂದು ಆರೋಪಿಸಿರುವ ರೈತರನ್ನು ಭೇಟಿ ಮಾಡಿದ್ದರು.

ಇದನ್ನೂ ಓದಿ: ‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...