Homeಕರ್ನಾಟಕವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ - ಸಿಎಂ...

ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

- Advertisement -
- Advertisement -

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದ್ದು, ಪ್ರಧಾನಮಂತ್ರಿ ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ವಕ್ಫ್‌ ಕಬಳಿಕೆ

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದರು. ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು ಎಂದು  ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘‘ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಕ್ಫ್‌ ಕಬಳಿಕೆ

ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ರಾಜ್ಯ ಬಿಜೆಪಿಯ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಬಿ.ಎಸ್.ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ” ಎಂದು ಸಿಎಂ ಹೇಳಿದ್ದಾರೆ.

“ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ , ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಆರೋಪಿಸಬೇಕಾಗುತ್ತದೆ” ಎಂದು ಸಿಎಂ ಹೇಳಿದ್ದಾರೆ.

“ಪ್ರಧಾನಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.” ಎಂದು ಸಿದ್ದರಾಮಯ್ಯ ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...