Homeಕರ್ನಾಟಕವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

ವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಕಬಳಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಇದರಿಂದ ಭೂ ವ್ಯಾಜ್ಯವೊಂದು ಕೋಮು ಆಯಾಮ ಪಡೆದುಕೊಂಡಿದೆ.

ಬಿಜೆಪಿ ನಾಯಕರ ಆರೋಪಗಳಿಗೆ ಸರ್ಕಾರದ ಕಡೆಯಿಂದ ಸಿಎಂ ಆದಿಯಾಗಿ ಸಚಿವರು ಸ್ಪಷ್ಟನೆ ಕೊಟ್ಟರೂ, ರೈತರಿಗೆ ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯುವುದಾಗಿ ಸರ್ಕಾರ ಹೇಳಿದ್ದರೂ, ಬಿಜೆಪಿ ಪ್ರತಿಭಟನೆ ನಡೆಸುದಾಗಿ ಹೇಳಿದೆ. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೊಳಿಸಲು ಮುಂದಾಗಿರುವುದು, ಅದಕ್ಕೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿರುವಾಗ ಕರ್ನಾಟಕದಲ್ಲಿ ವಕ್ಫ್ ಜಮೀನು ವಿಚಾರ ಮುನ್ನಲೆಗೆ ತಂದಿರುವ ಬಿಜೆಪಿ, ವಕ್ಫ್ ಬೋರ್ಡ್‌ಗಳನ್ನೇ ರದ್ದುಗೊಳಿಸಬೇಕು ಎಂದು ಅಗ್ರಹಿಸುತ್ತಿದೆ.

ಆದರೆ, ಇದೇ ಬಿಜೆಪಿ 2014ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಒತ್ತುವರಿಯಾಗಿರುವ ವಕ್ಫ್‌ ಭೂಮಿಯನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿತ್ತು.

ಬಿಜೆಪಿ ಪ್ರಣಾಳಿಕೆಯ 17ನೇ ಪುಟದಲ್ಲಿ ‘ಅಲ್ಪಸಂಖ್ಯಾತರು-ಸಮಾನ ಅವಕಾಶ‘ ಎಂಬ ಶೀರ್ಷಿಕೆಯಡಿ “ಧಾರ್ಮಿಕ ನಾಯಕರ ಜೊತೆ ಸಮಾಲೋಚನೆ ನಡೆಸಿ ವಕ್ಫ್ ಮಂಡಳಿಗಳ ಸಬಲೀಕರಣ ನಡೆಸಲಾಗುವುದು. ಅನಧಿಕೃತವಾಗಿ ಒತ್ತುವರಿಯಾಗಿರುವ ವಕ್ಫ್‌ ಜಮೀನುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟವಾಗಿ ಹೇಳಿದೆ.

ಅಲ್ಲಿಯೇ ಕೆಳಗಿನ ಪ್ಯಾರಾದಲ್ಲಿ “ಅಲ್ಪ ಸಂಖ್ಯಾತರ ಸಂಸ್ಕೃತಿ ಮತ್ತು ಸ್ಮಾರಕಗಳನ್ನು ರಕ್ಷಣೆ ಮಾಡಲಾಗುವುದು. ಉರ್ದು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ ಮಾಡಲಾಗುವುದು” ಎಂದು ಭರವಸೆ ಕೊಟ್ಟಿರುವುದು ಗಮನಾರ್ಹ.

ಇಲ್ಲಿ ಬಿಜೆಪಿ ಕೊಟ್ಟ ಭರವಸೆಗಳು ತಪ್ಪು ಎಂದಲ್ಲ. ಆದರೆ, ಇದೇ ಬಿಜೆಪಿ ನಾಯಕರು ಕರ್ನಾಟಕ ಸರ್ಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಅವರು ವಕ್ಫ್ ಭೂ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ವಕ್ಫ್ ಅದಾಲತ್ ನಡೆಸಿರುವುದನ್ನು ಮತ್ತು ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿರುವುದನ್ನು ವಿರೋಧಿಸಿ, ಅದಕ್ಕೆ ಕೋಮು ಬಣ್ಣ ಬಳಿದಿರುವುದು ವಿಪರ್ಯಾಸ.

ಪ್ರಸ್ತುತ ವಕ್ಫ್ ವಿಚಾರದಲ್ಲಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ “ವಕ್ಫ್ ಅಲ್ಲಾಹನ ಆಸ್ತಿ, ಅದು ಸಮುದಾಯದ ಏಳಿಗಾಗಿ ನೀಡಿರುವ ಸ್ವತ್ತು. ಅದನ್ನು ಅತಿಕ್ರಮಣ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು.

ಬೊಮ್ಮಾಯಿ ಅವರ ಹಳೆಯ ಹೇಳಿಕೆಯ ವಿಡಿಯೋವನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿದಾಗ, “ಸಚಿವರಾದ ಝಮೀರ್ ಅಹ್ಮದ್ ಅವರು ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೋ ಹರಿಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳುತ್ತಿದ್ದಾರೆ.

ಒಟ್ಟಿನಲ್ಲಿ, ವಕ್ಫ್ ಜಮೀನು ವಿಚಾರದಲ್ಲಿ ರಾಜಕೀಯ ನಾಯಕರು ನೀಡುತ್ತಿರುವ ಹೇಳಿಕೆಗಳು ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಬದಲು, ಪರಸ್ಪರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಜೊತೆಗೆ ಸಿವಿಲ್ ವ್ಯಾಜ್ಯಕ್ಕೆ ಕೋಮು ಬಣ್ಣ ನೀಡಿದೆ.

ಇದನ್ನೂ ಓದಿ : ದೊಡ್ಡಬಳ್ಳಾಪುರ | ದೀಪಾವಳಿ ಹಬ್ಬದಂದೇ ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...