Homeಕರ್ನಾಟಕವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

ವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಕಬಳಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಇದರಿಂದ ಭೂ ವ್ಯಾಜ್ಯವೊಂದು ಕೋಮು ಆಯಾಮ ಪಡೆದುಕೊಂಡಿದೆ.

ಬಿಜೆಪಿ ನಾಯಕರ ಆರೋಪಗಳಿಗೆ ಸರ್ಕಾರದ ಕಡೆಯಿಂದ ಸಿಎಂ ಆದಿಯಾಗಿ ಸಚಿವರು ಸ್ಪಷ್ಟನೆ ಕೊಟ್ಟರೂ, ರೈತರಿಗೆ ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯುವುದಾಗಿ ಸರ್ಕಾರ ಹೇಳಿದ್ದರೂ, ಬಿಜೆಪಿ ಪ್ರತಿಭಟನೆ ನಡೆಸುದಾಗಿ ಹೇಳಿದೆ. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೊಳಿಸಲು ಮುಂದಾಗಿರುವುದು, ಅದಕ್ಕೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿರುವಾಗ ಕರ್ನಾಟಕದಲ್ಲಿ ವಕ್ಫ್ ಜಮೀನು ವಿಚಾರ ಮುನ್ನಲೆಗೆ ತಂದಿರುವ ಬಿಜೆಪಿ, ವಕ್ಫ್ ಬೋರ್ಡ್‌ಗಳನ್ನೇ ರದ್ದುಗೊಳಿಸಬೇಕು ಎಂದು ಅಗ್ರಹಿಸುತ್ತಿದೆ.

ಆದರೆ, ಇದೇ ಬಿಜೆಪಿ 2014ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಒತ್ತುವರಿಯಾಗಿರುವ ವಕ್ಫ್‌ ಭೂಮಿಯನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿತ್ತು.

ಬಿಜೆಪಿ ಪ್ರಣಾಳಿಕೆಯ 17ನೇ ಪುಟದಲ್ಲಿ ‘ಅಲ್ಪಸಂಖ್ಯಾತರು-ಸಮಾನ ಅವಕಾಶ‘ ಎಂಬ ಶೀರ್ಷಿಕೆಯಡಿ “ಧಾರ್ಮಿಕ ನಾಯಕರ ಜೊತೆ ಸಮಾಲೋಚನೆ ನಡೆಸಿ ವಕ್ಫ್ ಮಂಡಳಿಗಳ ಸಬಲೀಕರಣ ನಡೆಸಲಾಗುವುದು. ಅನಧಿಕೃತವಾಗಿ ಒತ್ತುವರಿಯಾಗಿರುವ ವಕ್ಫ್‌ ಜಮೀನುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟವಾಗಿ ಹೇಳಿದೆ.

ಅಲ್ಲಿಯೇ ಕೆಳಗಿನ ಪ್ಯಾರಾದಲ್ಲಿ “ಅಲ್ಪ ಸಂಖ್ಯಾತರ ಸಂಸ್ಕೃತಿ ಮತ್ತು ಸ್ಮಾರಕಗಳನ್ನು ರಕ್ಷಣೆ ಮಾಡಲಾಗುವುದು. ಉರ್ದು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ ಮಾಡಲಾಗುವುದು” ಎಂದು ಭರವಸೆ ಕೊಟ್ಟಿರುವುದು ಗಮನಾರ್ಹ.

ಇಲ್ಲಿ ಬಿಜೆಪಿ ಕೊಟ್ಟ ಭರವಸೆಗಳು ತಪ್ಪು ಎಂದಲ್ಲ. ಆದರೆ, ಇದೇ ಬಿಜೆಪಿ ನಾಯಕರು ಕರ್ನಾಟಕ ಸರ್ಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಅವರು ವಕ್ಫ್ ಭೂ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ವಕ್ಫ್ ಅದಾಲತ್ ನಡೆಸಿರುವುದನ್ನು ಮತ್ತು ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿರುವುದನ್ನು ವಿರೋಧಿಸಿ, ಅದಕ್ಕೆ ಕೋಮು ಬಣ್ಣ ಬಳಿದಿರುವುದು ವಿಪರ್ಯಾಸ.

ಪ್ರಸ್ತುತ ವಕ್ಫ್ ವಿಚಾರದಲ್ಲಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ “ವಕ್ಫ್ ಅಲ್ಲಾಹನ ಆಸ್ತಿ, ಅದು ಸಮುದಾಯದ ಏಳಿಗಾಗಿ ನೀಡಿರುವ ಸ್ವತ್ತು. ಅದನ್ನು ಅತಿಕ್ರಮಣ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು.

ಬೊಮ್ಮಾಯಿ ಅವರ ಹಳೆಯ ಹೇಳಿಕೆಯ ವಿಡಿಯೋವನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿದಾಗ, “ಸಚಿವರಾದ ಝಮೀರ್ ಅಹ್ಮದ್ ಅವರು ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೋ ಹರಿಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳುತ್ತಿದ್ದಾರೆ.

ಒಟ್ಟಿನಲ್ಲಿ, ವಕ್ಫ್ ಜಮೀನು ವಿಚಾರದಲ್ಲಿ ರಾಜಕೀಯ ನಾಯಕರು ನೀಡುತ್ತಿರುವ ಹೇಳಿಕೆಗಳು ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಬದಲು, ಪರಸ್ಪರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಜೊತೆಗೆ ಸಿವಿಲ್ ವ್ಯಾಜ್ಯಕ್ಕೆ ಕೋಮು ಬಣ್ಣ ನೀಡಿದೆ.

ಇದನ್ನೂ ಓದಿ : ದೊಡ್ಡಬಳ್ಳಾಪುರ | ದೀಪಾವಳಿ ಹಬ್ಬದಂದೇ ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...