Homeಮುಖಪುಟವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ನಡೆದ ವಾಕ್ಸಮರ ನಡೆಸಿದ್ದರು. ಈ ವೇಳೆ ಅವರು ಗಾಜಿನ ನೀರಿನ ಬಾಟಲಿಯನ್ನು ಒಡೆದು ಕುರ್ಚಿಯತ್ತ ಎಸೆದಿದ್ದರು. ಹಾಗಾಗಿ ಅವರ ಬೆರಳುಗಳಿಗೆ ಗಾಯವಾಗಿತ್ತು.

ಸಮಿತಿಯ ಅಧ್ಯಕ್ಷ ಮತ್ತು ಹಿರಿಯ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ. ಅಂತಹ ಕ್ರಮಗಳು “ಗಂಭೀರವಾಗಿದ್ದು” ಎಲ್ಲಾ ಮಿತಿಗಳನ್ನು ದಾಟಿವೆ ಎಂದು ಅವರು ಹೇಳಿದ್ದಾರೆ. “ಸಂಸದರಾಗಿ ಎಲ್ಲರೂ ಸವಲತ್ತುಗಳನ್ನು ಅನುಭವಿಸುತ್ತಾರೆ, ನಾಳೆ ಯಾರಾದರೂ ರಿವಾಲ್ವರ್‌ನೊಂದಿಗೆ ಕಾಣಿಸಿಕೊಂಡರೆ ಏನರ್ಥ?, ನಾನು ಸ್ವಲ್ಪದರಲ್ಲೇ ಪಾರಾಗಿದೆ” ಎಂದು ಜಗದಾಂಬಿಕ ಪಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮಿತಿಯ ಸಭೆಯಲ್ಲಿ, ಕಲ್ಯಾಣ್ ಬ್ಯಾನರ್ಜಿ ಅವರು ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ವಾಕ್ಸಮರ ನಡೆಸಿದ್ದು, ಇಬ್ಬರೂ ಬಂಗಾಳಿ ಭಾಷೆಯಲ್ಲಿ ಪರಸ್ಪರ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ವಿರೋಧ ಪಕ್ಷದ ಸದಸ್ಯರು ಘಟನೆಗೆ ಅಭಿಜಿತ್ ಅವರನ್ನು ಗುರಿಯಾಗಿಸಿದ್ದಾರೆ.

ಘರ್ಷಣೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹೆಬ್ಬೆರಳು ಮತ್ತು ತೋರುಬೆರಳಿಗೆ ಗಾಯವಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಭೆಯ ಕೋಣೆಗೆ ಮರಳಿ ಕರೆದೊಯ್ದರು.

ಘಟನೆಯ ಕಾರಣಕ್ಕೆ ಅವರ ವಿರುದ್ಧ ಕ್ರಮಕೈಗೊಳ್ಳಲು, ಮುಂದಿನ ಸಭೆ ನಡೆಯುವಾಗ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸುವಂತೆ ಬಿಜೆಪಿ ಸದಸ್ಯರೊಬ್ಬರು ಸೂಚಿಸಿದ್ದಾರೆ. ಇದಕ್ಕೆ ಆಡಳಿತಾರೂಢ ಮೈತ್ರಿಕೂಟ ಮತ್ತು ವಿರೋಧ ಪಕ್ಷದ ಸದಸ್ಯರು ಪಕ್ಷಾತೀತವಾಗಿ ಮತ ಚಲಾಯಿಸಿದ್ದು 10-8 ಮತಗಳು ಚಲಾವಣೆಯಾಗಿವೆ.

ಓದಿ: ಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

ಈ ನಡುವೆ ಕಲ್ಯಾಣ್ ಬ್ಯಾನರ್ಜಿ ಅವರು ಬಾಟಲಿ ಒಡೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದು, ತಾನು ಅದನ್ನು ಜಗದಾಂಬಿಕ ಪಾಲ್ ಕಡೆಗೆ ಎಸೆಯಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೆ ಅವರು “ಪಕ್ಷಪಾತ” ವರ್ತನೆ ತೋರುತ್ತಿದ್ದಾರೆ ಎಂದು ಅವರು  ಆರೋಪಿಸಿದ್ದಾರೆ.

ಕಲ್ಯಾಣ್ ಬ್ಯಾನರ್ಜಿ ಅವರಿಗೆ ಕೇವಲ ಒಂದು ದಿನದ ಅಮಾನತು ಶಿಕ್ಷೆಯನ್ನು ನೀಡಿದ್ದನ್ನು ಅಭಿಜಿತ್ ಗಂಗೋಪಾಧ್ಯಾಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಲ್ಯಾಣ್ ಬ್ಯಾನರ್ಜಿ ಅವರು ತನ್ನ ಮೇಲೆ ನಡೆಸಿದ ಮೌಖಿಕ ದಾಳಿಯ ಬಗ್ಗೆ ಯಾವುದೆ ಪ್ರಸ್ತಾಪ ಮಾಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಈ ಪ್ರಕಣವನ್ನು ಉನ್ನತ ಮಟ್ಟದಲ್ಲಿ ವ್ಯವಹರಿಸುವ ಆಗ್ರಹಿಸುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಸಭೆಯಲ್ಲಿ ಆಗಾಗ್ಗೆ ವಿರೋಧ ಪಕ್ಷದ ಸದಸ್ಯರೊಂದಿಗೆ ವಾಕ್ಸಮರ ನಡೆಯುತ್ತಲೆ ಇವೆ. ಸಮಿತಿಯ ಅಧ್ಯಕ್ಷರು, ವಕ್ಫ್ ಸಮಸ್ಯೆಗಳಲ್ಲಿ ಯಾವುದೇ ಪಾಲು ಇಲ್ಲದ ಹಿಂದೂಗಳ ಪರವಾಗಿ ಕೆಲಸ ಮಾಡುವವರು ಸೇರಿದಂತೆ ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಓದಿ: ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್ ‘ವಾಸದ ಪರವಾನಗಿ’ ನವೀಕರಿಸಿದ ಕೇಂದ್ರ ಸರ್ಕಾರ?

ಮಂಗಳವಾರ ಸಮಿತಿಯು ಒಡಿಶಾ ಮೂಲದ ಎರಡು ಸಂಸ್ಥೆಗಳಾದ ಜಸ್ಟೀಸ್ ಇನ್ ರಿಯಾಲಿಟಿ ಮತ್ತು ಪಂಚಸಖ ಬನಿ ಪ್ರಚಾರ್ ಅವರ ಅಭಿಪ್ರಾಯಗಳನ್ನು ಆಲಿಸುತ್ತಿತ್ತು. ಇವೆರಡೂ ಸಂಘಟನೆಗಳು ನಿವೃತ್ತ ನ್ಯಾಯಾಧೀಶರು ಮತ್ತು ವಕೀಲರನ್ನು ಒಳಗೊಂಡಿವೆ. ಈ ಎರಡೂ ಸಂಸ್ಥೆಗಳು ತಿದ್ದುಪಡಿಗಳನ್ನು ಬೆಂಬಲಿಸಿದ್ದು, ಹೆಚ್ಚಿನ ಸಲಹೆಗಳನ್ನು ನೀಡಿವೆ.

ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ಕೂಡಲೇ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲನೆಗಾಗಿ ಸದನಗಳ ಜಂಟಿ ಸಮಿತಿಗೆ ನೀಡಲಾಗಿತ್ತು.

ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ಈ ಮಸೂದೆ ತಿದ್ದುಪಡಿ ಮಾಡುತ್ತಿದೆ. ವಕ್ಪ್ ಆಡಳಿತದಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರ ಪ್ರಾತಿನಿಧ್ಯವನ್ನು ತಿದ್ದುಪಡಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...