Homeಮುಖಪುಟವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ನಡೆದ ವಾಕ್ಸಮರ ನಡೆಸಿದ್ದರು. ಈ ವೇಳೆ ಅವರು ಗಾಜಿನ ನೀರಿನ ಬಾಟಲಿಯನ್ನು ಒಡೆದು ಕುರ್ಚಿಯತ್ತ ಎಸೆದಿದ್ದರು. ಹಾಗಾಗಿ ಅವರ ಬೆರಳುಗಳಿಗೆ ಗಾಯವಾಗಿತ್ತು.

ಸಮಿತಿಯ ಅಧ್ಯಕ್ಷ ಮತ್ತು ಹಿರಿಯ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ. ಅಂತಹ ಕ್ರಮಗಳು “ಗಂಭೀರವಾಗಿದ್ದು” ಎಲ್ಲಾ ಮಿತಿಗಳನ್ನು ದಾಟಿವೆ ಎಂದು ಅವರು ಹೇಳಿದ್ದಾರೆ. “ಸಂಸದರಾಗಿ ಎಲ್ಲರೂ ಸವಲತ್ತುಗಳನ್ನು ಅನುಭವಿಸುತ್ತಾರೆ, ನಾಳೆ ಯಾರಾದರೂ ರಿವಾಲ್ವರ್‌ನೊಂದಿಗೆ ಕಾಣಿಸಿಕೊಂಡರೆ ಏನರ್ಥ?, ನಾನು ಸ್ವಲ್ಪದರಲ್ಲೇ ಪಾರಾಗಿದೆ” ಎಂದು ಜಗದಾಂಬಿಕ ಪಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮಿತಿಯ ಸಭೆಯಲ್ಲಿ, ಕಲ್ಯಾಣ್ ಬ್ಯಾನರ್ಜಿ ಅವರು ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ವಾಕ್ಸಮರ ನಡೆಸಿದ್ದು, ಇಬ್ಬರೂ ಬಂಗಾಳಿ ಭಾಷೆಯಲ್ಲಿ ಪರಸ್ಪರ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ವಿರೋಧ ಪಕ್ಷದ ಸದಸ್ಯರು ಘಟನೆಗೆ ಅಭಿಜಿತ್ ಅವರನ್ನು ಗುರಿಯಾಗಿಸಿದ್ದಾರೆ.

ಘರ್ಷಣೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹೆಬ್ಬೆರಳು ಮತ್ತು ತೋರುಬೆರಳಿಗೆ ಗಾಯವಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಭೆಯ ಕೋಣೆಗೆ ಮರಳಿ ಕರೆದೊಯ್ದರು.

ಘಟನೆಯ ಕಾರಣಕ್ಕೆ ಅವರ ವಿರುದ್ಧ ಕ್ರಮಕೈಗೊಳ್ಳಲು, ಮುಂದಿನ ಸಭೆ ನಡೆಯುವಾಗ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸುವಂತೆ ಬಿಜೆಪಿ ಸದಸ್ಯರೊಬ್ಬರು ಸೂಚಿಸಿದ್ದಾರೆ. ಇದಕ್ಕೆ ಆಡಳಿತಾರೂಢ ಮೈತ್ರಿಕೂಟ ಮತ್ತು ವಿರೋಧ ಪಕ್ಷದ ಸದಸ್ಯರು ಪಕ್ಷಾತೀತವಾಗಿ ಮತ ಚಲಾಯಿಸಿದ್ದು 10-8 ಮತಗಳು ಚಲಾವಣೆಯಾಗಿವೆ.

ಓದಿ: ಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

ಈ ನಡುವೆ ಕಲ್ಯಾಣ್ ಬ್ಯಾನರ್ಜಿ ಅವರು ಬಾಟಲಿ ಒಡೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದು, ತಾನು ಅದನ್ನು ಜಗದಾಂಬಿಕ ಪಾಲ್ ಕಡೆಗೆ ಎಸೆಯಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೆ ಅವರು “ಪಕ್ಷಪಾತ” ವರ್ತನೆ ತೋರುತ್ತಿದ್ದಾರೆ ಎಂದು ಅವರು  ಆರೋಪಿಸಿದ್ದಾರೆ.

ಕಲ್ಯಾಣ್ ಬ್ಯಾನರ್ಜಿ ಅವರಿಗೆ ಕೇವಲ ಒಂದು ದಿನದ ಅಮಾನತು ಶಿಕ್ಷೆಯನ್ನು ನೀಡಿದ್ದನ್ನು ಅಭಿಜಿತ್ ಗಂಗೋಪಾಧ್ಯಾಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಲ್ಯಾಣ್ ಬ್ಯಾನರ್ಜಿ ಅವರು ತನ್ನ ಮೇಲೆ ನಡೆಸಿದ ಮೌಖಿಕ ದಾಳಿಯ ಬಗ್ಗೆ ಯಾವುದೆ ಪ್ರಸ್ತಾಪ ಮಾಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಈ ಪ್ರಕಣವನ್ನು ಉನ್ನತ ಮಟ್ಟದಲ್ಲಿ ವ್ಯವಹರಿಸುವ ಆಗ್ರಹಿಸುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಸಭೆಯಲ್ಲಿ ಆಗಾಗ್ಗೆ ವಿರೋಧ ಪಕ್ಷದ ಸದಸ್ಯರೊಂದಿಗೆ ವಾಕ್ಸಮರ ನಡೆಯುತ್ತಲೆ ಇವೆ. ಸಮಿತಿಯ ಅಧ್ಯಕ್ಷರು, ವಕ್ಫ್ ಸಮಸ್ಯೆಗಳಲ್ಲಿ ಯಾವುದೇ ಪಾಲು ಇಲ್ಲದ ಹಿಂದೂಗಳ ಪರವಾಗಿ ಕೆಲಸ ಮಾಡುವವರು ಸೇರಿದಂತೆ ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಓದಿ: ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್ ‘ವಾಸದ ಪರವಾನಗಿ’ ನವೀಕರಿಸಿದ ಕೇಂದ್ರ ಸರ್ಕಾರ?

ಮಂಗಳವಾರ ಸಮಿತಿಯು ಒಡಿಶಾ ಮೂಲದ ಎರಡು ಸಂಸ್ಥೆಗಳಾದ ಜಸ್ಟೀಸ್ ಇನ್ ರಿಯಾಲಿಟಿ ಮತ್ತು ಪಂಚಸಖ ಬನಿ ಪ್ರಚಾರ್ ಅವರ ಅಭಿಪ್ರಾಯಗಳನ್ನು ಆಲಿಸುತ್ತಿತ್ತು. ಇವೆರಡೂ ಸಂಘಟನೆಗಳು ನಿವೃತ್ತ ನ್ಯಾಯಾಧೀಶರು ಮತ್ತು ವಕೀಲರನ್ನು ಒಳಗೊಂಡಿವೆ. ಈ ಎರಡೂ ಸಂಸ್ಥೆಗಳು ತಿದ್ದುಪಡಿಗಳನ್ನು ಬೆಂಬಲಿಸಿದ್ದು, ಹೆಚ್ಚಿನ ಸಲಹೆಗಳನ್ನು ನೀಡಿವೆ.

ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ಕೂಡಲೇ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲನೆಗಾಗಿ ಸದನಗಳ ಜಂಟಿ ಸಮಿತಿಗೆ ನೀಡಲಾಗಿತ್ತು.

ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ಈ ಮಸೂದೆ ತಿದ್ದುಪಡಿ ಮಾಡುತ್ತಿದೆ. ವಕ್ಪ್ ಆಡಳಿತದಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರ ಪ್ರಾತಿನಿಧ್ಯವನ್ನು ತಿದ್ದುಪಡಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...