Homeಮುಖಪುಟವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ನಡೆದ ವಾಕ್ಸಮರ ನಡೆಸಿದ್ದರು. ಈ ವೇಳೆ ಅವರು ಗಾಜಿನ ನೀರಿನ ಬಾಟಲಿಯನ್ನು ಒಡೆದು ಕುರ್ಚಿಯತ್ತ ಎಸೆದಿದ್ದರು. ಹಾಗಾಗಿ ಅವರ ಬೆರಳುಗಳಿಗೆ ಗಾಯವಾಗಿತ್ತು.

ಸಮಿತಿಯ ಅಧ್ಯಕ್ಷ ಮತ್ತು ಹಿರಿಯ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ. ಅಂತಹ ಕ್ರಮಗಳು “ಗಂಭೀರವಾಗಿದ್ದು” ಎಲ್ಲಾ ಮಿತಿಗಳನ್ನು ದಾಟಿವೆ ಎಂದು ಅವರು ಹೇಳಿದ್ದಾರೆ. “ಸಂಸದರಾಗಿ ಎಲ್ಲರೂ ಸವಲತ್ತುಗಳನ್ನು ಅನುಭವಿಸುತ್ತಾರೆ, ನಾಳೆ ಯಾರಾದರೂ ರಿವಾಲ್ವರ್‌ನೊಂದಿಗೆ ಕಾಣಿಸಿಕೊಂಡರೆ ಏನರ್ಥ?, ನಾನು ಸ್ವಲ್ಪದರಲ್ಲೇ ಪಾರಾಗಿದೆ” ಎಂದು ಜಗದಾಂಬಿಕ ಪಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮಿತಿಯ ಸಭೆಯಲ್ಲಿ, ಕಲ್ಯಾಣ್ ಬ್ಯಾನರ್ಜಿ ಅವರು ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ವಾಕ್ಸಮರ ನಡೆಸಿದ್ದು, ಇಬ್ಬರೂ ಬಂಗಾಳಿ ಭಾಷೆಯಲ್ಲಿ ಪರಸ್ಪರ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ವಿರೋಧ ಪಕ್ಷದ ಸದಸ್ಯರು ಘಟನೆಗೆ ಅಭಿಜಿತ್ ಅವರನ್ನು ಗುರಿಯಾಗಿಸಿದ್ದಾರೆ.

ಘರ್ಷಣೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹೆಬ್ಬೆರಳು ಮತ್ತು ತೋರುಬೆರಳಿಗೆ ಗಾಯವಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಭೆಯ ಕೋಣೆಗೆ ಮರಳಿ ಕರೆದೊಯ್ದರು.

ಘಟನೆಯ ಕಾರಣಕ್ಕೆ ಅವರ ವಿರುದ್ಧ ಕ್ರಮಕೈಗೊಳ್ಳಲು, ಮುಂದಿನ ಸಭೆ ನಡೆಯುವಾಗ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸುವಂತೆ ಬಿಜೆಪಿ ಸದಸ್ಯರೊಬ್ಬರು ಸೂಚಿಸಿದ್ದಾರೆ. ಇದಕ್ಕೆ ಆಡಳಿತಾರೂಢ ಮೈತ್ರಿಕೂಟ ಮತ್ತು ವಿರೋಧ ಪಕ್ಷದ ಸದಸ್ಯರು ಪಕ್ಷಾತೀತವಾಗಿ ಮತ ಚಲಾಯಿಸಿದ್ದು 10-8 ಮತಗಳು ಚಲಾವಣೆಯಾಗಿವೆ.

ಓದಿ: ಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

ಈ ನಡುವೆ ಕಲ್ಯಾಣ್ ಬ್ಯಾನರ್ಜಿ ಅವರು ಬಾಟಲಿ ಒಡೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದು, ತಾನು ಅದನ್ನು ಜಗದಾಂಬಿಕ ಪಾಲ್ ಕಡೆಗೆ ಎಸೆಯಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೆ ಅವರು “ಪಕ್ಷಪಾತ” ವರ್ತನೆ ತೋರುತ್ತಿದ್ದಾರೆ ಎಂದು ಅವರು  ಆರೋಪಿಸಿದ್ದಾರೆ.

ಕಲ್ಯಾಣ್ ಬ್ಯಾನರ್ಜಿ ಅವರಿಗೆ ಕೇವಲ ಒಂದು ದಿನದ ಅಮಾನತು ಶಿಕ್ಷೆಯನ್ನು ನೀಡಿದ್ದನ್ನು ಅಭಿಜಿತ್ ಗಂಗೋಪಾಧ್ಯಾಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಲ್ಯಾಣ್ ಬ್ಯಾನರ್ಜಿ ಅವರು ತನ್ನ ಮೇಲೆ ನಡೆಸಿದ ಮೌಖಿಕ ದಾಳಿಯ ಬಗ್ಗೆ ಯಾವುದೆ ಪ್ರಸ್ತಾಪ ಮಾಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಈ ಪ್ರಕಣವನ್ನು ಉನ್ನತ ಮಟ್ಟದಲ್ಲಿ ವ್ಯವಹರಿಸುವ ಆಗ್ರಹಿಸುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಸಭೆಯಲ್ಲಿ ಆಗಾಗ್ಗೆ ವಿರೋಧ ಪಕ್ಷದ ಸದಸ್ಯರೊಂದಿಗೆ ವಾಕ್ಸಮರ ನಡೆಯುತ್ತಲೆ ಇವೆ. ಸಮಿತಿಯ ಅಧ್ಯಕ್ಷರು, ವಕ್ಫ್ ಸಮಸ್ಯೆಗಳಲ್ಲಿ ಯಾವುದೇ ಪಾಲು ಇಲ್ಲದ ಹಿಂದೂಗಳ ಪರವಾಗಿ ಕೆಲಸ ಮಾಡುವವರು ಸೇರಿದಂತೆ ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಓದಿ: ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್ ‘ವಾಸದ ಪರವಾನಗಿ’ ನವೀಕರಿಸಿದ ಕೇಂದ್ರ ಸರ್ಕಾರ?

ಮಂಗಳವಾರ ಸಮಿತಿಯು ಒಡಿಶಾ ಮೂಲದ ಎರಡು ಸಂಸ್ಥೆಗಳಾದ ಜಸ್ಟೀಸ್ ಇನ್ ರಿಯಾಲಿಟಿ ಮತ್ತು ಪಂಚಸಖ ಬನಿ ಪ್ರಚಾರ್ ಅವರ ಅಭಿಪ್ರಾಯಗಳನ್ನು ಆಲಿಸುತ್ತಿತ್ತು. ಇವೆರಡೂ ಸಂಘಟನೆಗಳು ನಿವೃತ್ತ ನ್ಯಾಯಾಧೀಶರು ಮತ್ತು ವಕೀಲರನ್ನು ಒಳಗೊಂಡಿವೆ. ಈ ಎರಡೂ ಸಂಸ್ಥೆಗಳು ತಿದ್ದುಪಡಿಗಳನ್ನು ಬೆಂಬಲಿಸಿದ್ದು, ಹೆಚ್ಚಿನ ಸಲಹೆಗಳನ್ನು ನೀಡಿವೆ.

ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ಕೂಡಲೇ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲನೆಗಾಗಿ ಸದನಗಳ ಜಂಟಿ ಸಮಿತಿಗೆ ನೀಡಲಾಗಿತ್ತು.

ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ಈ ಮಸೂದೆ ತಿದ್ದುಪಡಿ ಮಾಡುತ್ತಿದೆ. ವಕ್ಪ್ ಆಡಳಿತದಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರ ಪ್ರಾತಿನಿಧ್ಯವನ್ನು ತಿದ್ದುಪಡಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...