Homeಕರ್ನಾಟಕಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

ಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

- Advertisement -
- Advertisement -

“ಜೀವವನ್ನಾದರೂ ಬಿಟ್ಟೇವು, ತುತ್ತು ನೀಡುತ್ತಿರುವ ಭೂಮಿ ಬಿಡಲಾರೆವು” ಎನ್ನುತ್ತಿದ್ದಾರೆ ಅಂಕೋಲಾ ತಾಲ್ಲೂಕಿನ ಅಲಗೇರಿ ಮತ್ತದರ ಆಚೀಚೆಯ ಹಳ್ಳಿಗರು ಒಕ್ಕೊರಳಲ್ಲಿ!! ಎಷ್ಟೆಂತ ತ್ಯಾಗ ಮಾಡೋದು? ಈ ಮಂದಿ ನೌಕಾನೆಲೆ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಯೋಜನೆಗಾಗಿ ನಮ್ಮ ಬದುಕಿಗಾಧಾರವಾದ ಭೂಮಿಯನ್ನು ಕಳೆದುಕೊಂಡಿದ್ದಾರೆ. ಈಗ ಮತ್ತೆ ವಿಮಾನ ನಿಲ್ದಾಣಕ್ಕಾಗಿ ಜಮೀನು ಕೊಡಿ, ಮನೆ-ಮಠ ಬಿಡಿಯೆಂದರೆ ಹೇಗೆ? ಬದುಕುವುದಾದರೂ ಹೇಗೆ? ಸದ್ರಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಅಲಗೇರಿ ಅಂಕೋಲೆಯ ಭೂಪಟದಿಂದ ಅಳಿಸಿ ಹೋಗುತ್ತದೆ!

ಸಹಜವಾಗೇ ಅಲಗೇರಿಯ ಆತಂಕಿತ ಜನರೀಗ ಕೆರಳಿ ಕೆಂಡವಾಗಿದ್ದಾರೆ. ಆಡಳಿತಗಾರರು ಗುಪ್ತವಾಗಿ ಸರ್ವೆ ನಡೆಸುತ್ತಿರುವುದು ಹಳ್ಳಿಗರನ್ನು ದಿಕ್ಕೆಡಿಸಿಬಿಟ್ಟಿದೆ. ಹಾಗೊಮ್ಮೆ ಆಳುವವರು ಹಠದಿಂದ ನಮ್ಮ ಭೂಮಿ ಕಸಿದುಕೊಳ್ಳುತ್ತಾರೆಂದರೆ, ವಿಮಾನ ನಿಲ್ದಾಣ ನಮ್ಮೂರಿನ ಸಮಾಧಿ ಮೇಲೆ ಆಗಲಿ ಎಂದಬ್ಬರಿಸುತ್ತಿದ್ದಾರೆ. ದಿವಂಗತ ರೈತ-ಕಾರ್ಮಿಕ ನಾಯಕ, ಚುಟುಕು ಬ್ರಹ್ಮ ದಿನಕರ ದೇಸಾಯಿ ನೆಚ್ಚಿ ದಾಖಲಾಗಿರುವ ವಿಶಿಷ್ಟ ಗ್ರಾಮ ಇದು. ವಿಪರ್ಯಾಸ ನೋಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜನರೀಗ ಅತಂತ್ರರಾಗುವಂತಾಗಿದೆ! ಸಂತ್ರಸ್ತರಾಗುವ ಸಂಕಟದಲ್ಲಿರುವ ಅಲಗೇರಿ ಭಾಗದವರು ಹೋರಾಟ-ಪ್ರತಿಭಟನೆಗೆ ಅಣಿಯಾಗಿದ್ದಾರೆ.

ಅಂಕೋಲ-ಕಾರವಾರ ನಡುವೆ ಏಷ್ಯಾದಲ್ಲೇ ಅತ್ಯಂತ ದೊಡ್ಡ ನೌಕಾನೆಲೆ ತಲೆಯೆತ್ತಿದೆ. ಅಂದರೆ ಅಲಗೇರಿ ಅಂಚಿನಲ್ಲಿ ನಿಂತಿದೆ. ಈ ಕದಂಬ ನೌಕಾನೆಲೆಗೆ ಯುದ್ಧ ವಿಮಾನ ನಿಲ್ದಾಣ ಜರೂರ್ ಬೇಕಾಗಿದೆ. ಯುದ್ಧ ವಿಮಾನ ನಿಲ್ದಾಣ ಎಂದರೆ ಜನ ತಿರುಗಿ ಬೀಳಬಹುದೆಂಬ ಲೆಕ್ಕಾಚಾರ ಹಾಕಿರುವ ಪ್ರಭುತ್ವ ಪಂಡಿತ ಶಿಖಾಮಣಿಗಳು ಈ ವಿಮಾನ ನಿಲ್ದಾಣ ಟೂ ಇನ್ ಒನ್ ಎನ್ನುತ್ತಿದ್ದಾರೆ. ಈ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ನಾಗರಿಕ ಯಾನ ಏರ್‌ಪೋರ್ಟ್‌ಗೂ ಅವಕಾಶವಿದೆ ಅಂತಿದ್ದಾರೆ. ಅಲಗೇರಿ, ಭಾವಿಕೇರಿ, ಬೆಲೇಕೇರಿ ಏರಿಯಾದ ಬರೋಬ್ಬರಿ 202 ಎಕರೆ ಭೂಸ್ವಾಧೀನಕ್ಕೆ ರಕ್ಷಣಾ ಇಲಾಖೆ ಸ್ಕೆಚ್ ಹಾಕಿದೆ. ಅದಕ್ಕಾಗಿ ಅಲಗೇರಿಯ 160 ಎಕರೆ, ಭಾವಿಕೇರಿಯ 12 ಎಕರೆ ಮತ್ತು ಬೇಲೇಕೇರಿಯ 30 ಎಕರೆ ಭೂ ಪ್ರದೇಶದಲ್ಲಿ ಸರ್ವೆ ಕೂಡ ಮಾಡಿಮುಗಿಸಿಲಾಗಿದೆ.

1983ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ನೌಕಾನೆಲೆಗೆ ಅಡಿಗಲ್ಲು ಇಡುವಾಗಿ “ನಿರಾಶ್ರಿತರಾಗುವ ಮಂದಿಯ ಕಣ್ಣಲ್ಲಿ ಒಂದೇ ಒಂದು ಹನಿ ನೀರು ಬರದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದರು. ಆದರೆ ನೌಕಾನೆಲೆ ಕಾಮಗಾರಿ ಶುರುವಾಗುತ್ತಿದ್ದಂತೆಯೇ ಕಾರವಾರ-ಅಂಕೋಲೆಯಲ್ಲಿ ಸಂತ್ರಸ್ತರ ಕಂಬನಿಯ ಕೋಡಿಯೇ ಮೂರು ದಶಕಗಳ ಕಾಲ ಹರಿದಿದೆ!! ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡ ರಕ್ಷಣಾ ಇಲಾಖೆ ನಿಗದಿ ಪಡಿಸಿದ ಪರಿಹಾರ ಮೊತ್ತ ಎಷ್ಟು ಗೊತ್ತೇ? ಪ್ರತಿ ಗುಂಟೆಗೆ ಕೇವಲ 150ರೂ!!!

ಅಮಾಯಕ ನಿರಾಶ್ರಿತರನ್ನು ಬೆಳೆ ತೆಗೆಯಲಾಗದ, ಕುಲಕಸುಬು ಕಟ್ಟಿಕೊಳ್ಳಲಾಗದ ಬರಡು ಪುನರ್ವಸತಿ ಕೇಂದ್ರಕ್ಕೊಯ್ದು ಬಿಡಲಾಗಿತ್ತು. ಅಕ್ಷರಶಃ ನೀರಿಂದ ತೆಗೆದು ದಂಡೆಗೊಗೆದ ಮೀನಿನಂತಾಗಿದ್ದ ಈ ನಿರಾಶ್ರಿತರ ನೆರವಿಗೆ ಯಾವ ಅಧಿಕಾರಸ್ಥ ಪುಢಾರಿಯೂ ಬರಲಿಲ್ಲ. ಮನೆಗೊಂದು ಉದ್ಯೋಗ, ಸೂಕ್ತ ಪರಿಹಾರ, ನಿರಾಶ್ರಿತರ ಕೋಟಾ ಘೋಷಣೆ ಮಾಡಿದ್ದ ನಾಲಾಯಕ್ ಜನಪ್ರತಿನಿಧಿಗಳು, ಹೊಣೆಗೇಡಿ ಅಧಿಕಾರಗಳು ನಾಪತ್ತೆಯಾಗಿದ್ದರು. ದೇಶ ಕಟ್ಟಲಿಕ್ಕೇ ಹುಟ್ಟಿದ್ದೇನೆಂಬಂತೆ ಪೊಕ್ಕು ವೀರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗಂತೂ ಈ ನೆಲೆ ಕಳಕೊಂಡವರ ಗೋಳು ಕೊನೆವರೆಗೂ ಕೇಳಿಸಲಿಲ್ಲ.

ಹೆಚ್ಚುವರಿ ಪರಿಹಾರಕ್ಕಾಗಿ ಸಂತ್ರಸ್ತರು 35 ವರ್ಷ ಕಾನೂನು ಹೋರಾಟ ನಡೆಸಿ ಗೆದ್ದಿದ್ದಾರೆ. ಈಗ ಪರಿಹಾರ ಪಡೆಯುತ್ತಿದಾರೆ. ಈ ಕ್ರೆಡಿಟ್ ತಮ್ಮದೆಂದು ಸಂಸದ ಮಾಣಿ, ಮಾಜಿ ಮಂತ್ರಿ ದೇಶಪಾಂಡೆ ಹಲಬುತ್ತಿರುವುದು ಹಾಸ್ಯಾಸ್ಪದವಾಗಿದೆ. ಇದೇ ಸಮುದಾಯವನ್ನು ವಿಮಾನ ನಿಲ್ದಾಣದ ಗುಮ್ಮ ಕಾಡತೊಡಗಿದೆ. ವಿಮಾನ ನಿಲ್ದಾಣಕ್ಕೆ 500 ಎಕರೆ ಭೂಮಿ ಬೇಕು. ಒಂದು ಗುಂಟೆ ಜಾಗದಲ್ಲಿ ಎರಡು-ಮೂರು ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಬದುಕುತ್ತಿವೆ. ಫಲವತ್ತಿದ ಕೃಷಿ ಭೂಮಿ, ತೆಂಗಿನ ಮರಗಳ ತೋಟವಿದೆ. ಕೂಲಿ ನಾಲಿ ಮಾಡಿ, ಮೀನುಗಾರಿಕೆ ನಡೆಸಿ, ಸಣ್ಣ-ಪುಟ್ಟ ಉದ್ಯಮ ನಡೆಸಿ ತಲತಲಾಂತರದಿಂದ ಜನ ಜೀವಿಸುತ್ತಿದ್ದಾರೆ. ಇದನ್ನೆಲ್ಲಾ ವಿಮಾನ ನಿಲ್ದಾಣ ಆಪೋಷನ ಪಡೆಯಲಿದೆ.

ಈ ವಿಮಾನ ನಿಲ್ದಾಣದ ಬಗ್ಗೆ ಯಾವ ವರದಿ, ಯೋಜನೆ ನಕ್ಷೆ ಸ್ವಾಧೀನವಾಗುವ ಭೂಮಿ ಬಗ್ಗೆ ಯಾವ ವಿವರವನ್ನೂ ಆಳುವವರು ಮತ್ತವರ ಅಧಿಕಾರ ಗ್ಯಾಂಗು ಬಹಿರಂಗ ಪಡಿಸುತ್ತಿಲ್ಲ. ಜಿಲ್ಲಾಡಳಿತ ಅಧ್ಯಯನ ವರದಿಯನ್ನು ಜನರ ಮುಂದಿಡುತ್ತಿಲ್ಲ. ಎಲ್ಲವೂ ಗುಪ್ತ ಗುಪ್ತ ಏಕೆ? ಕೃಷಿಯನ್ನೇ ನಂಬಿ ಬದುಕಿರುವ ಜನರ ಬೀದಿಪಾಲು ಮಾಡುವ ಈ ಪ್ರಳಯಾಂತಕ ಯೋಜನೆ ಬಂದರೆ 500 ಎಕರೆ ಪ್ರದೇಶದಲ್ಲಿ ಕಾಂಕ್ರಿಟ್ ಮೈದಾನ ಆಗುತ್ತದೆ. ಮಳೆಗಾಲದಲ್ಲಿ ನೀರಿಂಗಲು ಅವಕಾಶವೇ ಇರದು. ಈಗ ಬೀಳುವ ಮಳೆಗೆ ಕೇಣಿ ಹಳ್ಳ, ಬಾಳೆಗುಳಿ ಹೊಳೆಗೆ ಪ್ರವಾಹ ಬಂದು ಸುತ್ತಲಿನ ಊರು-ಕೇರಿ ಮುಳುಗುತ್ತದೆ. ವಿಮಾನ ನಿಲ್ದಾಣವಾದರೆ ಅಂಕೋಲೆಯಲ್ಲಿ ಜಲಪ್ರಳಯ ಗ್ಯಾರಂಟಿ.

ಹಲವು ಹಾನಿಗೆ ಕಾರಣವಾಗುವ ಈ ಸದ್ರಿ ವಿಮಾನ ನಿಲ್ದಾಣ ಬೇಡವೆಂದು ಜನ ಪ್ರತಿಭಟನೆಗೆ ಇಳಿದಿದ್ದಾರೆ. ಶಾಂತವಾಗಿರುವ ಅಂಕೋಲೆಯಲ್ಲಿ ಕ್ರಾಂತಿ ಆಗುವ ಮೊದಲೆ ಜಿಲ್ಲಾಡಳಿತ, ಸ್ಥಳೀಯ ಶಾಸಕಿ ರೂಪಾಲಿಯಮ್ಮ ಎಚ್ಚೆತ್ತುಕೊಳ್ಳುವರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...