Homeಕರ್ನಾಟಕಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

ಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

- Advertisement -
- Advertisement -

“ಜೀವವನ್ನಾದರೂ ಬಿಟ್ಟೇವು, ತುತ್ತು ನೀಡುತ್ತಿರುವ ಭೂಮಿ ಬಿಡಲಾರೆವು” ಎನ್ನುತ್ತಿದ್ದಾರೆ ಅಂಕೋಲಾ ತಾಲ್ಲೂಕಿನ ಅಲಗೇರಿ ಮತ್ತದರ ಆಚೀಚೆಯ ಹಳ್ಳಿಗರು ಒಕ್ಕೊರಳಲ್ಲಿ!! ಎಷ್ಟೆಂತ ತ್ಯಾಗ ಮಾಡೋದು? ಈ ಮಂದಿ ನೌಕಾನೆಲೆ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಯೋಜನೆಗಾಗಿ ನಮ್ಮ ಬದುಕಿಗಾಧಾರವಾದ ಭೂಮಿಯನ್ನು ಕಳೆದುಕೊಂಡಿದ್ದಾರೆ. ಈಗ ಮತ್ತೆ ವಿಮಾನ ನಿಲ್ದಾಣಕ್ಕಾಗಿ ಜಮೀನು ಕೊಡಿ, ಮನೆ-ಮಠ ಬಿಡಿಯೆಂದರೆ ಹೇಗೆ? ಬದುಕುವುದಾದರೂ ಹೇಗೆ? ಸದ್ರಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಅಲಗೇರಿ ಅಂಕೋಲೆಯ ಭೂಪಟದಿಂದ ಅಳಿಸಿ ಹೋಗುತ್ತದೆ!

ಸಹಜವಾಗೇ ಅಲಗೇರಿಯ ಆತಂಕಿತ ಜನರೀಗ ಕೆರಳಿ ಕೆಂಡವಾಗಿದ್ದಾರೆ. ಆಡಳಿತಗಾರರು ಗುಪ್ತವಾಗಿ ಸರ್ವೆ ನಡೆಸುತ್ತಿರುವುದು ಹಳ್ಳಿಗರನ್ನು ದಿಕ್ಕೆಡಿಸಿಬಿಟ್ಟಿದೆ. ಹಾಗೊಮ್ಮೆ ಆಳುವವರು ಹಠದಿಂದ ನಮ್ಮ ಭೂಮಿ ಕಸಿದುಕೊಳ್ಳುತ್ತಾರೆಂದರೆ, ವಿಮಾನ ನಿಲ್ದಾಣ ನಮ್ಮೂರಿನ ಸಮಾಧಿ ಮೇಲೆ ಆಗಲಿ ಎಂದಬ್ಬರಿಸುತ್ತಿದ್ದಾರೆ. ದಿವಂಗತ ರೈತ-ಕಾರ್ಮಿಕ ನಾಯಕ, ಚುಟುಕು ಬ್ರಹ್ಮ ದಿನಕರ ದೇಸಾಯಿ ನೆಚ್ಚಿ ದಾಖಲಾಗಿರುವ ವಿಶಿಷ್ಟ ಗ್ರಾಮ ಇದು. ವಿಪರ್ಯಾಸ ನೋಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜನರೀಗ ಅತಂತ್ರರಾಗುವಂತಾಗಿದೆ! ಸಂತ್ರಸ್ತರಾಗುವ ಸಂಕಟದಲ್ಲಿರುವ ಅಲಗೇರಿ ಭಾಗದವರು ಹೋರಾಟ-ಪ್ರತಿಭಟನೆಗೆ ಅಣಿಯಾಗಿದ್ದಾರೆ.

ಅಂಕೋಲ-ಕಾರವಾರ ನಡುವೆ ಏಷ್ಯಾದಲ್ಲೇ ಅತ್ಯಂತ ದೊಡ್ಡ ನೌಕಾನೆಲೆ ತಲೆಯೆತ್ತಿದೆ. ಅಂದರೆ ಅಲಗೇರಿ ಅಂಚಿನಲ್ಲಿ ನಿಂತಿದೆ. ಈ ಕದಂಬ ನೌಕಾನೆಲೆಗೆ ಯುದ್ಧ ವಿಮಾನ ನಿಲ್ದಾಣ ಜರೂರ್ ಬೇಕಾಗಿದೆ. ಯುದ್ಧ ವಿಮಾನ ನಿಲ್ದಾಣ ಎಂದರೆ ಜನ ತಿರುಗಿ ಬೀಳಬಹುದೆಂಬ ಲೆಕ್ಕಾಚಾರ ಹಾಕಿರುವ ಪ್ರಭುತ್ವ ಪಂಡಿತ ಶಿಖಾಮಣಿಗಳು ಈ ವಿಮಾನ ನಿಲ್ದಾಣ ಟೂ ಇನ್ ಒನ್ ಎನ್ನುತ್ತಿದ್ದಾರೆ. ಈ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ನಾಗರಿಕ ಯಾನ ಏರ್‌ಪೋರ್ಟ್‌ಗೂ ಅವಕಾಶವಿದೆ ಅಂತಿದ್ದಾರೆ. ಅಲಗೇರಿ, ಭಾವಿಕೇರಿ, ಬೆಲೇಕೇರಿ ಏರಿಯಾದ ಬರೋಬ್ಬರಿ 202 ಎಕರೆ ಭೂಸ್ವಾಧೀನಕ್ಕೆ ರಕ್ಷಣಾ ಇಲಾಖೆ ಸ್ಕೆಚ್ ಹಾಕಿದೆ. ಅದಕ್ಕಾಗಿ ಅಲಗೇರಿಯ 160 ಎಕರೆ, ಭಾವಿಕೇರಿಯ 12 ಎಕರೆ ಮತ್ತು ಬೇಲೇಕೇರಿಯ 30 ಎಕರೆ ಭೂ ಪ್ರದೇಶದಲ್ಲಿ ಸರ್ವೆ ಕೂಡ ಮಾಡಿಮುಗಿಸಿಲಾಗಿದೆ.

1983ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ನೌಕಾನೆಲೆಗೆ ಅಡಿಗಲ್ಲು ಇಡುವಾಗಿ “ನಿರಾಶ್ರಿತರಾಗುವ ಮಂದಿಯ ಕಣ್ಣಲ್ಲಿ ಒಂದೇ ಒಂದು ಹನಿ ನೀರು ಬರದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದರು. ಆದರೆ ನೌಕಾನೆಲೆ ಕಾಮಗಾರಿ ಶುರುವಾಗುತ್ತಿದ್ದಂತೆಯೇ ಕಾರವಾರ-ಅಂಕೋಲೆಯಲ್ಲಿ ಸಂತ್ರಸ್ತರ ಕಂಬನಿಯ ಕೋಡಿಯೇ ಮೂರು ದಶಕಗಳ ಕಾಲ ಹರಿದಿದೆ!! ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡ ರಕ್ಷಣಾ ಇಲಾಖೆ ನಿಗದಿ ಪಡಿಸಿದ ಪರಿಹಾರ ಮೊತ್ತ ಎಷ್ಟು ಗೊತ್ತೇ? ಪ್ರತಿ ಗುಂಟೆಗೆ ಕೇವಲ 150ರೂ!!!

ಅಮಾಯಕ ನಿರಾಶ್ರಿತರನ್ನು ಬೆಳೆ ತೆಗೆಯಲಾಗದ, ಕುಲಕಸುಬು ಕಟ್ಟಿಕೊಳ್ಳಲಾಗದ ಬರಡು ಪುನರ್ವಸತಿ ಕೇಂದ್ರಕ್ಕೊಯ್ದು ಬಿಡಲಾಗಿತ್ತು. ಅಕ್ಷರಶಃ ನೀರಿಂದ ತೆಗೆದು ದಂಡೆಗೊಗೆದ ಮೀನಿನಂತಾಗಿದ್ದ ಈ ನಿರಾಶ್ರಿತರ ನೆರವಿಗೆ ಯಾವ ಅಧಿಕಾರಸ್ಥ ಪುಢಾರಿಯೂ ಬರಲಿಲ್ಲ. ಮನೆಗೊಂದು ಉದ್ಯೋಗ, ಸೂಕ್ತ ಪರಿಹಾರ, ನಿರಾಶ್ರಿತರ ಕೋಟಾ ಘೋಷಣೆ ಮಾಡಿದ್ದ ನಾಲಾಯಕ್ ಜನಪ್ರತಿನಿಧಿಗಳು, ಹೊಣೆಗೇಡಿ ಅಧಿಕಾರಗಳು ನಾಪತ್ತೆಯಾಗಿದ್ದರು. ದೇಶ ಕಟ್ಟಲಿಕ್ಕೇ ಹುಟ್ಟಿದ್ದೇನೆಂಬಂತೆ ಪೊಕ್ಕು ವೀರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗಂತೂ ಈ ನೆಲೆ ಕಳಕೊಂಡವರ ಗೋಳು ಕೊನೆವರೆಗೂ ಕೇಳಿಸಲಿಲ್ಲ.

ಹೆಚ್ಚುವರಿ ಪರಿಹಾರಕ್ಕಾಗಿ ಸಂತ್ರಸ್ತರು 35 ವರ್ಷ ಕಾನೂನು ಹೋರಾಟ ನಡೆಸಿ ಗೆದ್ದಿದ್ದಾರೆ. ಈಗ ಪರಿಹಾರ ಪಡೆಯುತ್ತಿದಾರೆ. ಈ ಕ್ರೆಡಿಟ್ ತಮ್ಮದೆಂದು ಸಂಸದ ಮಾಣಿ, ಮಾಜಿ ಮಂತ್ರಿ ದೇಶಪಾಂಡೆ ಹಲಬುತ್ತಿರುವುದು ಹಾಸ್ಯಾಸ್ಪದವಾಗಿದೆ. ಇದೇ ಸಮುದಾಯವನ್ನು ವಿಮಾನ ನಿಲ್ದಾಣದ ಗುಮ್ಮ ಕಾಡತೊಡಗಿದೆ. ವಿಮಾನ ನಿಲ್ದಾಣಕ್ಕೆ 500 ಎಕರೆ ಭೂಮಿ ಬೇಕು. ಒಂದು ಗುಂಟೆ ಜಾಗದಲ್ಲಿ ಎರಡು-ಮೂರು ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಬದುಕುತ್ತಿವೆ. ಫಲವತ್ತಿದ ಕೃಷಿ ಭೂಮಿ, ತೆಂಗಿನ ಮರಗಳ ತೋಟವಿದೆ. ಕೂಲಿ ನಾಲಿ ಮಾಡಿ, ಮೀನುಗಾರಿಕೆ ನಡೆಸಿ, ಸಣ್ಣ-ಪುಟ್ಟ ಉದ್ಯಮ ನಡೆಸಿ ತಲತಲಾಂತರದಿಂದ ಜನ ಜೀವಿಸುತ್ತಿದ್ದಾರೆ. ಇದನ್ನೆಲ್ಲಾ ವಿಮಾನ ನಿಲ್ದಾಣ ಆಪೋಷನ ಪಡೆಯಲಿದೆ.

ಈ ವಿಮಾನ ನಿಲ್ದಾಣದ ಬಗ್ಗೆ ಯಾವ ವರದಿ, ಯೋಜನೆ ನಕ್ಷೆ ಸ್ವಾಧೀನವಾಗುವ ಭೂಮಿ ಬಗ್ಗೆ ಯಾವ ವಿವರವನ್ನೂ ಆಳುವವರು ಮತ್ತವರ ಅಧಿಕಾರ ಗ್ಯಾಂಗು ಬಹಿರಂಗ ಪಡಿಸುತ್ತಿಲ್ಲ. ಜಿಲ್ಲಾಡಳಿತ ಅಧ್ಯಯನ ವರದಿಯನ್ನು ಜನರ ಮುಂದಿಡುತ್ತಿಲ್ಲ. ಎಲ್ಲವೂ ಗುಪ್ತ ಗುಪ್ತ ಏಕೆ? ಕೃಷಿಯನ್ನೇ ನಂಬಿ ಬದುಕಿರುವ ಜನರ ಬೀದಿಪಾಲು ಮಾಡುವ ಈ ಪ್ರಳಯಾಂತಕ ಯೋಜನೆ ಬಂದರೆ 500 ಎಕರೆ ಪ್ರದೇಶದಲ್ಲಿ ಕಾಂಕ್ರಿಟ್ ಮೈದಾನ ಆಗುತ್ತದೆ. ಮಳೆಗಾಲದಲ್ಲಿ ನೀರಿಂಗಲು ಅವಕಾಶವೇ ಇರದು. ಈಗ ಬೀಳುವ ಮಳೆಗೆ ಕೇಣಿ ಹಳ್ಳ, ಬಾಳೆಗುಳಿ ಹೊಳೆಗೆ ಪ್ರವಾಹ ಬಂದು ಸುತ್ತಲಿನ ಊರು-ಕೇರಿ ಮುಳುಗುತ್ತದೆ. ವಿಮಾನ ನಿಲ್ದಾಣವಾದರೆ ಅಂಕೋಲೆಯಲ್ಲಿ ಜಲಪ್ರಳಯ ಗ್ಯಾರಂಟಿ.

ಹಲವು ಹಾನಿಗೆ ಕಾರಣವಾಗುವ ಈ ಸದ್ರಿ ವಿಮಾನ ನಿಲ್ದಾಣ ಬೇಡವೆಂದು ಜನ ಪ್ರತಿಭಟನೆಗೆ ಇಳಿದಿದ್ದಾರೆ. ಶಾಂತವಾಗಿರುವ ಅಂಕೋಲೆಯಲ್ಲಿ ಕ್ರಾಂತಿ ಆಗುವ ಮೊದಲೆ ಜಿಲ್ಲಾಡಳಿತ, ಸ್ಥಳೀಯ ಶಾಸಕಿ ರೂಪಾಲಿಯಮ್ಮ ಎಚ್ಚೆತ್ತುಕೊಳ್ಳುವರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...