Homeಕರ್ನಾಟಕಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

ಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

- Advertisement -
- Advertisement -

“ಜೀವವನ್ನಾದರೂ ಬಿಟ್ಟೇವು, ತುತ್ತು ನೀಡುತ್ತಿರುವ ಭೂಮಿ ಬಿಡಲಾರೆವು” ಎನ್ನುತ್ತಿದ್ದಾರೆ ಅಂಕೋಲಾ ತಾಲ್ಲೂಕಿನ ಅಲಗೇರಿ ಮತ್ತದರ ಆಚೀಚೆಯ ಹಳ್ಳಿಗರು ಒಕ್ಕೊರಳಲ್ಲಿ!! ಎಷ್ಟೆಂತ ತ್ಯಾಗ ಮಾಡೋದು? ಈ ಮಂದಿ ನೌಕಾನೆಲೆ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಯೋಜನೆಗಾಗಿ ನಮ್ಮ ಬದುಕಿಗಾಧಾರವಾದ ಭೂಮಿಯನ್ನು ಕಳೆದುಕೊಂಡಿದ್ದಾರೆ. ಈಗ ಮತ್ತೆ ವಿಮಾನ ನಿಲ್ದಾಣಕ್ಕಾಗಿ ಜಮೀನು ಕೊಡಿ, ಮನೆ-ಮಠ ಬಿಡಿಯೆಂದರೆ ಹೇಗೆ? ಬದುಕುವುದಾದರೂ ಹೇಗೆ? ಸದ್ರಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಅಲಗೇರಿ ಅಂಕೋಲೆಯ ಭೂಪಟದಿಂದ ಅಳಿಸಿ ಹೋಗುತ್ತದೆ!

ಸಹಜವಾಗೇ ಅಲಗೇರಿಯ ಆತಂಕಿತ ಜನರೀಗ ಕೆರಳಿ ಕೆಂಡವಾಗಿದ್ದಾರೆ. ಆಡಳಿತಗಾರರು ಗುಪ್ತವಾಗಿ ಸರ್ವೆ ನಡೆಸುತ್ತಿರುವುದು ಹಳ್ಳಿಗರನ್ನು ದಿಕ್ಕೆಡಿಸಿಬಿಟ್ಟಿದೆ. ಹಾಗೊಮ್ಮೆ ಆಳುವವರು ಹಠದಿಂದ ನಮ್ಮ ಭೂಮಿ ಕಸಿದುಕೊಳ್ಳುತ್ತಾರೆಂದರೆ, ವಿಮಾನ ನಿಲ್ದಾಣ ನಮ್ಮೂರಿನ ಸಮಾಧಿ ಮೇಲೆ ಆಗಲಿ ಎಂದಬ್ಬರಿಸುತ್ತಿದ್ದಾರೆ. ದಿವಂಗತ ರೈತ-ಕಾರ್ಮಿಕ ನಾಯಕ, ಚುಟುಕು ಬ್ರಹ್ಮ ದಿನಕರ ದೇಸಾಯಿ ನೆಚ್ಚಿ ದಾಖಲಾಗಿರುವ ವಿಶಿಷ್ಟ ಗ್ರಾಮ ಇದು. ವಿಪರ್ಯಾಸ ನೋಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜನರೀಗ ಅತಂತ್ರರಾಗುವಂತಾಗಿದೆ! ಸಂತ್ರಸ್ತರಾಗುವ ಸಂಕಟದಲ್ಲಿರುವ ಅಲಗೇರಿ ಭಾಗದವರು ಹೋರಾಟ-ಪ್ರತಿಭಟನೆಗೆ ಅಣಿಯಾಗಿದ್ದಾರೆ.

ಅಂಕೋಲ-ಕಾರವಾರ ನಡುವೆ ಏಷ್ಯಾದಲ್ಲೇ ಅತ್ಯಂತ ದೊಡ್ಡ ನೌಕಾನೆಲೆ ತಲೆಯೆತ್ತಿದೆ. ಅಂದರೆ ಅಲಗೇರಿ ಅಂಚಿನಲ್ಲಿ ನಿಂತಿದೆ. ಈ ಕದಂಬ ನೌಕಾನೆಲೆಗೆ ಯುದ್ಧ ವಿಮಾನ ನಿಲ್ದಾಣ ಜರೂರ್ ಬೇಕಾಗಿದೆ. ಯುದ್ಧ ವಿಮಾನ ನಿಲ್ದಾಣ ಎಂದರೆ ಜನ ತಿರುಗಿ ಬೀಳಬಹುದೆಂಬ ಲೆಕ್ಕಾಚಾರ ಹಾಕಿರುವ ಪ್ರಭುತ್ವ ಪಂಡಿತ ಶಿಖಾಮಣಿಗಳು ಈ ವಿಮಾನ ನಿಲ್ದಾಣ ಟೂ ಇನ್ ಒನ್ ಎನ್ನುತ್ತಿದ್ದಾರೆ. ಈ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ನಾಗರಿಕ ಯಾನ ಏರ್‌ಪೋರ್ಟ್‌ಗೂ ಅವಕಾಶವಿದೆ ಅಂತಿದ್ದಾರೆ. ಅಲಗೇರಿ, ಭಾವಿಕೇರಿ, ಬೆಲೇಕೇರಿ ಏರಿಯಾದ ಬರೋಬ್ಬರಿ 202 ಎಕರೆ ಭೂಸ್ವಾಧೀನಕ್ಕೆ ರಕ್ಷಣಾ ಇಲಾಖೆ ಸ್ಕೆಚ್ ಹಾಕಿದೆ. ಅದಕ್ಕಾಗಿ ಅಲಗೇರಿಯ 160 ಎಕರೆ, ಭಾವಿಕೇರಿಯ 12 ಎಕರೆ ಮತ್ತು ಬೇಲೇಕೇರಿಯ 30 ಎಕರೆ ಭೂ ಪ್ರದೇಶದಲ್ಲಿ ಸರ್ವೆ ಕೂಡ ಮಾಡಿಮುಗಿಸಿಲಾಗಿದೆ.

1983ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ನೌಕಾನೆಲೆಗೆ ಅಡಿಗಲ್ಲು ಇಡುವಾಗಿ “ನಿರಾಶ್ರಿತರಾಗುವ ಮಂದಿಯ ಕಣ್ಣಲ್ಲಿ ಒಂದೇ ಒಂದು ಹನಿ ನೀರು ಬರದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದರು. ಆದರೆ ನೌಕಾನೆಲೆ ಕಾಮಗಾರಿ ಶುರುವಾಗುತ್ತಿದ್ದಂತೆಯೇ ಕಾರವಾರ-ಅಂಕೋಲೆಯಲ್ಲಿ ಸಂತ್ರಸ್ತರ ಕಂಬನಿಯ ಕೋಡಿಯೇ ಮೂರು ದಶಕಗಳ ಕಾಲ ಹರಿದಿದೆ!! ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡ ರಕ್ಷಣಾ ಇಲಾಖೆ ನಿಗದಿ ಪಡಿಸಿದ ಪರಿಹಾರ ಮೊತ್ತ ಎಷ್ಟು ಗೊತ್ತೇ? ಪ್ರತಿ ಗುಂಟೆಗೆ ಕೇವಲ 150ರೂ!!!

ಅಮಾಯಕ ನಿರಾಶ್ರಿತರನ್ನು ಬೆಳೆ ತೆಗೆಯಲಾಗದ, ಕುಲಕಸುಬು ಕಟ್ಟಿಕೊಳ್ಳಲಾಗದ ಬರಡು ಪುನರ್ವಸತಿ ಕೇಂದ್ರಕ್ಕೊಯ್ದು ಬಿಡಲಾಗಿತ್ತು. ಅಕ್ಷರಶಃ ನೀರಿಂದ ತೆಗೆದು ದಂಡೆಗೊಗೆದ ಮೀನಿನಂತಾಗಿದ್ದ ಈ ನಿರಾಶ್ರಿತರ ನೆರವಿಗೆ ಯಾವ ಅಧಿಕಾರಸ್ಥ ಪುಢಾರಿಯೂ ಬರಲಿಲ್ಲ. ಮನೆಗೊಂದು ಉದ್ಯೋಗ, ಸೂಕ್ತ ಪರಿಹಾರ, ನಿರಾಶ್ರಿತರ ಕೋಟಾ ಘೋಷಣೆ ಮಾಡಿದ್ದ ನಾಲಾಯಕ್ ಜನಪ್ರತಿನಿಧಿಗಳು, ಹೊಣೆಗೇಡಿ ಅಧಿಕಾರಗಳು ನಾಪತ್ತೆಯಾಗಿದ್ದರು. ದೇಶ ಕಟ್ಟಲಿಕ್ಕೇ ಹುಟ್ಟಿದ್ದೇನೆಂಬಂತೆ ಪೊಕ್ಕು ವೀರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗಂತೂ ಈ ನೆಲೆ ಕಳಕೊಂಡವರ ಗೋಳು ಕೊನೆವರೆಗೂ ಕೇಳಿಸಲಿಲ್ಲ.

ಹೆಚ್ಚುವರಿ ಪರಿಹಾರಕ್ಕಾಗಿ ಸಂತ್ರಸ್ತರು 35 ವರ್ಷ ಕಾನೂನು ಹೋರಾಟ ನಡೆಸಿ ಗೆದ್ದಿದ್ದಾರೆ. ಈಗ ಪರಿಹಾರ ಪಡೆಯುತ್ತಿದಾರೆ. ಈ ಕ್ರೆಡಿಟ್ ತಮ್ಮದೆಂದು ಸಂಸದ ಮಾಣಿ, ಮಾಜಿ ಮಂತ್ರಿ ದೇಶಪಾಂಡೆ ಹಲಬುತ್ತಿರುವುದು ಹಾಸ್ಯಾಸ್ಪದವಾಗಿದೆ. ಇದೇ ಸಮುದಾಯವನ್ನು ವಿಮಾನ ನಿಲ್ದಾಣದ ಗುಮ್ಮ ಕಾಡತೊಡಗಿದೆ. ವಿಮಾನ ನಿಲ್ದಾಣಕ್ಕೆ 500 ಎಕರೆ ಭೂಮಿ ಬೇಕು. ಒಂದು ಗುಂಟೆ ಜಾಗದಲ್ಲಿ ಎರಡು-ಮೂರು ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಬದುಕುತ್ತಿವೆ. ಫಲವತ್ತಿದ ಕೃಷಿ ಭೂಮಿ, ತೆಂಗಿನ ಮರಗಳ ತೋಟವಿದೆ. ಕೂಲಿ ನಾಲಿ ಮಾಡಿ, ಮೀನುಗಾರಿಕೆ ನಡೆಸಿ, ಸಣ್ಣ-ಪುಟ್ಟ ಉದ್ಯಮ ನಡೆಸಿ ತಲತಲಾಂತರದಿಂದ ಜನ ಜೀವಿಸುತ್ತಿದ್ದಾರೆ. ಇದನ್ನೆಲ್ಲಾ ವಿಮಾನ ನಿಲ್ದಾಣ ಆಪೋಷನ ಪಡೆಯಲಿದೆ.

ಈ ವಿಮಾನ ನಿಲ್ದಾಣದ ಬಗ್ಗೆ ಯಾವ ವರದಿ, ಯೋಜನೆ ನಕ್ಷೆ ಸ್ವಾಧೀನವಾಗುವ ಭೂಮಿ ಬಗ್ಗೆ ಯಾವ ವಿವರವನ್ನೂ ಆಳುವವರು ಮತ್ತವರ ಅಧಿಕಾರ ಗ್ಯಾಂಗು ಬಹಿರಂಗ ಪಡಿಸುತ್ತಿಲ್ಲ. ಜಿಲ್ಲಾಡಳಿತ ಅಧ್ಯಯನ ವರದಿಯನ್ನು ಜನರ ಮುಂದಿಡುತ್ತಿಲ್ಲ. ಎಲ್ಲವೂ ಗುಪ್ತ ಗುಪ್ತ ಏಕೆ? ಕೃಷಿಯನ್ನೇ ನಂಬಿ ಬದುಕಿರುವ ಜನರ ಬೀದಿಪಾಲು ಮಾಡುವ ಈ ಪ್ರಳಯಾಂತಕ ಯೋಜನೆ ಬಂದರೆ 500 ಎಕರೆ ಪ್ರದೇಶದಲ್ಲಿ ಕಾಂಕ್ರಿಟ್ ಮೈದಾನ ಆಗುತ್ತದೆ. ಮಳೆಗಾಲದಲ್ಲಿ ನೀರಿಂಗಲು ಅವಕಾಶವೇ ಇರದು. ಈಗ ಬೀಳುವ ಮಳೆಗೆ ಕೇಣಿ ಹಳ್ಳ, ಬಾಳೆಗುಳಿ ಹೊಳೆಗೆ ಪ್ರವಾಹ ಬಂದು ಸುತ್ತಲಿನ ಊರು-ಕೇರಿ ಮುಳುಗುತ್ತದೆ. ವಿಮಾನ ನಿಲ್ದಾಣವಾದರೆ ಅಂಕೋಲೆಯಲ್ಲಿ ಜಲಪ್ರಳಯ ಗ್ಯಾರಂಟಿ.

ಹಲವು ಹಾನಿಗೆ ಕಾರಣವಾಗುವ ಈ ಸದ್ರಿ ವಿಮಾನ ನಿಲ್ದಾಣ ಬೇಡವೆಂದು ಜನ ಪ್ರತಿಭಟನೆಗೆ ಇಳಿದಿದ್ದಾರೆ. ಶಾಂತವಾಗಿರುವ ಅಂಕೋಲೆಯಲ್ಲಿ ಕ್ರಾಂತಿ ಆಗುವ ಮೊದಲೆ ಜಿಲ್ಲಾಡಳಿತ, ಸ್ಥಳೀಯ ಶಾಸಕಿ ರೂಪಾಲಿಯಮ್ಮ ಎಚ್ಚೆತ್ತುಕೊಳ್ಳುವರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...