Homeಕರ್ನಾಟಕಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

ಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

- Advertisement -
- Advertisement -

“ಜೀವವನ್ನಾದರೂ ಬಿಟ್ಟೇವು, ತುತ್ತು ನೀಡುತ್ತಿರುವ ಭೂಮಿ ಬಿಡಲಾರೆವು” ಎನ್ನುತ್ತಿದ್ದಾರೆ ಅಂಕೋಲಾ ತಾಲ್ಲೂಕಿನ ಅಲಗೇರಿ ಮತ್ತದರ ಆಚೀಚೆಯ ಹಳ್ಳಿಗರು ಒಕ್ಕೊರಳಲ್ಲಿ!! ಎಷ್ಟೆಂತ ತ್ಯಾಗ ಮಾಡೋದು? ಈ ಮಂದಿ ನೌಕಾನೆಲೆ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಯೋಜನೆಗಾಗಿ ನಮ್ಮ ಬದುಕಿಗಾಧಾರವಾದ ಭೂಮಿಯನ್ನು ಕಳೆದುಕೊಂಡಿದ್ದಾರೆ. ಈಗ ಮತ್ತೆ ವಿಮಾನ ನಿಲ್ದಾಣಕ್ಕಾಗಿ ಜಮೀನು ಕೊಡಿ, ಮನೆ-ಮಠ ಬಿಡಿಯೆಂದರೆ ಹೇಗೆ? ಬದುಕುವುದಾದರೂ ಹೇಗೆ? ಸದ್ರಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಅಲಗೇರಿ ಅಂಕೋಲೆಯ ಭೂಪಟದಿಂದ ಅಳಿಸಿ ಹೋಗುತ್ತದೆ!

ಸಹಜವಾಗೇ ಅಲಗೇರಿಯ ಆತಂಕಿತ ಜನರೀಗ ಕೆರಳಿ ಕೆಂಡವಾಗಿದ್ದಾರೆ. ಆಡಳಿತಗಾರರು ಗುಪ್ತವಾಗಿ ಸರ್ವೆ ನಡೆಸುತ್ತಿರುವುದು ಹಳ್ಳಿಗರನ್ನು ದಿಕ್ಕೆಡಿಸಿಬಿಟ್ಟಿದೆ. ಹಾಗೊಮ್ಮೆ ಆಳುವವರು ಹಠದಿಂದ ನಮ್ಮ ಭೂಮಿ ಕಸಿದುಕೊಳ್ಳುತ್ತಾರೆಂದರೆ, ವಿಮಾನ ನಿಲ್ದಾಣ ನಮ್ಮೂರಿನ ಸಮಾಧಿ ಮೇಲೆ ಆಗಲಿ ಎಂದಬ್ಬರಿಸುತ್ತಿದ್ದಾರೆ. ದಿವಂಗತ ರೈತ-ಕಾರ್ಮಿಕ ನಾಯಕ, ಚುಟುಕು ಬ್ರಹ್ಮ ದಿನಕರ ದೇಸಾಯಿ ನೆಚ್ಚಿ ದಾಖಲಾಗಿರುವ ವಿಶಿಷ್ಟ ಗ್ರಾಮ ಇದು. ವಿಪರ್ಯಾಸ ನೋಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜನರೀಗ ಅತಂತ್ರರಾಗುವಂತಾಗಿದೆ! ಸಂತ್ರಸ್ತರಾಗುವ ಸಂಕಟದಲ್ಲಿರುವ ಅಲಗೇರಿ ಭಾಗದವರು ಹೋರಾಟ-ಪ್ರತಿಭಟನೆಗೆ ಅಣಿಯಾಗಿದ್ದಾರೆ.

ಅಂಕೋಲ-ಕಾರವಾರ ನಡುವೆ ಏಷ್ಯಾದಲ್ಲೇ ಅತ್ಯಂತ ದೊಡ್ಡ ನೌಕಾನೆಲೆ ತಲೆಯೆತ್ತಿದೆ. ಅಂದರೆ ಅಲಗೇರಿ ಅಂಚಿನಲ್ಲಿ ನಿಂತಿದೆ. ಈ ಕದಂಬ ನೌಕಾನೆಲೆಗೆ ಯುದ್ಧ ವಿಮಾನ ನಿಲ್ದಾಣ ಜರೂರ್ ಬೇಕಾಗಿದೆ. ಯುದ್ಧ ವಿಮಾನ ನಿಲ್ದಾಣ ಎಂದರೆ ಜನ ತಿರುಗಿ ಬೀಳಬಹುದೆಂಬ ಲೆಕ್ಕಾಚಾರ ಹಾಕಿರುವ ಪ್ರಭುತ್ವ ಪಂಡಿತ ಶಿಖಾಮಣಿಗಳು ಈ ವಿಮಾನ ನಿಲ್ದಾಣ ಟೂ ಇನ್ ಒನ್ ಎನ್ನುತ್ತಿದ್ದಾರೆ. ಈ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ನಾಗರಿಕ ಯಾನ ಏರ್‌ಪೋರ್ಟ್‌ಗೂ ಅವಕಾಶವಿದೆ ಅಂತಿದ್ದಾರೆ. ಅಲಗೇರಿ, ಭಾವಿಕೇರಿ, ಬೆಲೇಕೇರಿ ಏರಿಯಾದ ಬರೋಬ್ಬರಿ 202 ಎಕರೆ ಭೂಸ್ವಾಧೀನಕ್ಕೆ ರಕ್ಷಣಾ ಇಲಾಖೆ ಸ್ಕೆಚ್ ಹಾಕಿದೆ. ಅದಕ್ಕಾಗಿ ಅಲಗೇರಿಯ 160 ಎಕರೆ, ಭಾವಿಕೇರಿಯ 12 ಎಕರೆ ಮತ್ತು ಬೇಲೇಕೇರಿಯ 30 ಎಕರೆ ಭೂ ಪ್ರದೇಶದಲ್ಲಿ ಸರ್ವೆ ಕೂಡ ಮಾಡಿಮುಗಿಸಿಲಾಗಿದೆ.

1983ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ನೌಕಾನೆಲೆಗೆ ಅಡಿಗಲ್ಲು ಇಡುವಾಗಿ “ನಿರಾಶ್ರಿತರಾಗುವ ಮಂದಿಯ ಕಣ್ಣಲ್ಲಿ ಒಂದೇ ಒಂದು ಹನಿ ನೀರು ಬರದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದರು. ಆದರೆ ನೌಕಾನೆಲೆ ಕಾಮಗಾರಿ ಶುರುವಾಗುತ್ತಿದ್ದಂತೆಯೇ ಕಾರವಾರ-ಅಂಕೋಲೆಯಲ್ಲಿ ಸಂತ್ರಸ್ತರ ಕಂಬನಿಯ ಕೋಡಿಯೇ ಮೂರು ದಶಕಗಳ ಕಾಲ ಹರಿದಿದೆ!! ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡ ರಕ್ಷಣಾ ಇಲಾಖೆ ನಿಗದಿ ಪಡಿಸಿದ ಪರಿಹಾರ ಮೊತ್ತ ಎಷ್ಟು ಗೊತ್ತೇ? ಪ್ರತಿ ಗುಂಟೆಗೆ ಕೇವಲ 150ರೂ!!!

ಅಮಾಯಕ ನಿರಾಶ್ರಿತರನ್ನು ಬೆಳೆ ತೆಗೆಯಲಾಗದ, ಕುಲಕಸುಬು ಕಟ್ಟಿಕೊಳ್ಳಲಾಗದ ಬರಡು ಪುನರ್ವಸತಿ ಕೇಂದ್ರಕ್ಕೊಯ್ದು ಬಿಡಲಾಗಿತ್ತು. ಅಕ್ಷರಶಃ ನೀರಿಂದ ತೆಗೆದು ದಂಡೆಗೊಗೆದ ಮೀನಿನಂತಾಗಿದ್ದ ಈ ನಿರಾಶ್ರಿತರ ನೆರವಿಗೆ ಯಾವ ಅಧಿಕಾರಸ್ಥ ಪುಢಾರಿಯೂ ಬರಲಿಲ್ಲ. ಮನೆಗೊಂದು ಉದ್ಯೋಗ, ಸೂಕ್ತ ಪರಿಹಾರ, ನಿರಾಶ್ರಿತರ ಕೋಟಾ ಘೋಷಣೆ ಮಾಡಿದ್ದ ನಾಲಾಯಕ್ ಜನಪ್ರತಿನಿಧಿಗಳು, ಹೊಣೆಗೇಡಿ ಅಧಿಕಾರಗಳು ನಾಪತ್ತೆಯಾಗಿದ್ದರು. ದೇಶ ಕಟ್ಟಲಿಕ್ಕೇ ಹುಟ್ಟಿದ್ದೇನೆಂಬಂತೆ ಪೊಕ್ಕು ವೀರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗಂತೂ ಈ ನೆಲೆ ಕಳಕೊಂಡವರ ಗೋಳು ಕೊನೆವರೆಗೂ ಕೇಳಿಸಲಿಲ್ಲ.

ಹೆಚ್ಚುವರಿ ಪರಿಹಾರಕ್ಕಾಗಿ ಸಂತ್ರಸ್ತರು 35 ವರ್ಷ ಕಾನೂನು ಹೋರಾಟ ನಡೆಸಿ ಗೆದ್ದಿದ್ದಾರೆ. ಈಗ ಪರಿಹಾರ ಪಡೆಯುತ್ತಿದಾರೆ. ಈ ಕ್ರೆಡಿಟ್ ತಮ್ಮದೆಂದು ಸಂಸದ ಮಾಣಿ, ಮಾಜಿ ಮಂತ್ರಿ ದೇಶಪಾಂಡೆ ಹಲಬುತ್ತಿರುವುದು ಹಾಸ್ಯಾಸ್ಪದವಾಗಿದೆ. ಇದೇ ಸಮುದಾಯವನ್ನು ವಿಮಾನ ನಿಲ್ದಾಣದ ಗುಮ್ಮ ಕಾಡತೊಡಗಿದೆ. ವಿಮಾನ ನಿಲ್ದಾಣಕ್ಕೆ 500 ಎಕರೆ ಭೂಮಿ ಬೇಕು. ಒಂದು ಗುಂಟೆ ಜಾಗದಲ್ಲಿ ಎರಡು-ಮೂರು ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಬದುಕುತ್ತಿವೆ. ಫಲವತ್ತಿದ ಕೃಷಿ ಭೂಮಿ, ತೆಂಗಿನ ಮರಗಳ ತೋಟವಿದೆ. ಕೂಲಿ ನಾಲಿ ಮಾಡಿ, ಮೀನುಗಾರಿಕೆ ನಡೆಸಿ, ಸಣ್ಣ-ಪುಟ್ಟ ಉದ್ಯಮ ನಡೆಸಿ ತಲತಲಾಂತರದಿಂದ ಜನ ಜೀವಿಸುತ್ತಿದ್ದಾರೆ. ಇದನ್ನೆಲ್ಲಾ ವಿಮಾನ ನಿಲ್ದಾಣ ಆಪೋಷನ ಪಡೆಯಲಿದೆ.

ಈ ವಿಮಾನ ನಿಲ್ದಾಣದ ಬಗ್ಗೆ ಯಾವ ವರದಿ, ಯೋಜನೆ ನಕ್ಷೆ ಸ್ವಾಧೀನವಾಗುವ ಭೂಮಿ ಬಗ್ಗೆ ಯಾವ ವಿವರವನ್ನೂ ಆಳುವವರು ಮತ್ತವರ ಅಧಿಕಾರ ಗ್ಯಾಂಗು ಬಹಿರಂಗ ಪಡಿಸುತ್ತಿಲ್ಲ. ಜಿಲ್ಲಾಡಳಿತ ಅಧ್ಯಯನ ವರದಿಯನ್ನು ಜನರ ಮುಂದಿಡುತ್ತಿಲ್ಲ. ಎಲ್ಲವೂ ಗುಪ್ತ ಗುಪ್ತ ಏಕೆ? ಕೃಷಿಯನ್ನೇ ನಂಬಿ ಬದುಕಿರುವ ಜನರ ಬೀದಿಪಾಲು ಮಾಡುವ ಈ ಪ್ರಳಯಾಂತಕ ಯೋಜನೆ ಬಂದರೆ 500 ಎಕರೆ ಪ್ರದೇಶದಲ್ಲಿ ಕಾಂಕ್ರಿಟ್ ಮೈದಾನ ಆಗುತ್ತದೆ. ಮಳೆಗಾಲದಲ್ಲಿ ನೀರಿಂಗಲು ಅವಕಾಶವೇ ಇರದು. ಈಗ ಬೀಳುವ ಮಳೆಗೆ ಕೇಣಿ ಹಳ್ಳ, ಬಾಳೆಗುಳಿ ಹೊಳೆಗೆ ಪ್ರವಾಹ ಬಂದು ಸುತ್ತಲಿನ ಊರು-ಕೇರಿ ಮುಳುಗುತ್ತದೆ. ವಿಮಾನ ನಿಲ್ದಾಣವಾದರೆ ಅಂಕೋಲೆಯಲ್ಲಿ ಜಲಪ್ರಳಯ ಗ್ಯಾರಂಟಿ.

ಹಲವು ಹಾನಿಗೆ ಕಾರಣವಾಗುವ ಈ ಸದ್ರಿ ವಿಮಾನ ನಿಲ್ದಾಣ ಬೇಡವೆಂದು ಜನ ಪ್ರತಿಭಟನೆಗೆ ಇಳಿದಿದ್ದಾರೆ. ಶಾಂತವಾಗಿರುವ ಅಂಕೋಲೆಯಲ್ಲಿ ಕ್ರಾಂತಿ ಆಗುವ ಮೊದಲೆ ಜಿಲ್ಲಾಡಳಿತ, ಸ್ಥಳೀಯ ಶಾಸಕಿ ರೂಪಾಲಿಯಮ್ಮ ಎಚ್ಚೆತ್ತುಕೊಳ್ಳುವರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...