Homeಕರ್ನಾಟಕಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

ಅಂಕೋಲೆಗೆ ನುಗ್ಗಲಿದೆ ಯುದ್ಧ ವಿಮಾನ: ಅದರ ಹೆಸರು ಮಾತ್ರ ನಾಗರಿಕ ಏರ್‌ಪೋರ್ಟ್..

- Advertisement -
- Advertisement -

“ಜೀವವನ್ನಾದರೂ ಬಿಟ್ಟೇವು, ತುತ್ತು ನೀಡುತ್ತಿರುವ ಭೂಮಿ ಬಿಡಲಾರೆವು” ಎನ್ನುತ್ತಿದ್ದಾರೆ ಅಂಕೋಲಾ ತಾಲ್ಲೂಕಿನ ಅಲಗೇರಿ ಮತ್ತದರ ಆಚೀಚೆಯ ಹಳ್ಳಿಗರು ಒಕ್ಕೊರಳಲ್ಲಿ!! ಎಷ್ಟೆಂತ ತ್ಯಾಗ ಮಾಡೋದು? ಈ ಮಂದಿ ನೌಕಾನೆಲೆ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಯೋಜನೆಗಾಗಿ ನಮ್ಮ ಬದುಕಿಗಾಧಾರವಾದ ಭೂಮಿಯನ್ನು ಕಳೆದುಕೊಂಡಿದ್ದಾರೆ. ಈಗ ಮತ್ತೆ ವಿಮಾನ ನಿಲ್ದಾಣಕ್ಕಾಗಿ ಜಮೀನು ಕೊಡಿ, ಮನೆ-ಮಠ ಬಿಡಿಯೆಂದರೆ ಹೇಗೆ? ಬದುಕುವುದಾದರೂ ಹೇಗೆ? ಸದ್ರಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಅಲಗೇರಿ ಅಂಕೋಲೆಯ ಭೂಪಟದಿಂದ ಅಳಿಸಿ ಹೋಗುತ್ತದೆ!

ಸಹಜವಾಗೇ ಅಲಗೇರಿಯ ಆತಂಕಿತ ಜನರೀಗ ಕೆರಳಿ ಕೆಂಡವಾಗಿದ್ದಾರೆ. ಆಡಳಿತಗಾರರು ಗುಪ್ತವಾಗಿ ಸರ್ವೆ ನಡೆಸುತ್ತಿರುವುದು ಹಳ್ಳಿಗರನ್ನು ದಿಕ್ಕೆಡಿಸಿಬಿಟ್ಟಿದೆ. ಹಾಗೊಮ್ಮೆ ಆಳುವವರು ಹಠದಿಂದ ನಮ್ಮ ಭೂಮಿ ಕಸಿದುಕೊಳ್ಳುತ್ತಾರೆಂದರೆ, ವಿಮಾನ ನಿಲ್ದಾಣ ನಮ್ಮೂರಿನ ಸಮಾಧಿ ಮೇಲೆ ಆಗಲಿ ಎಂದಬ್ಬರಿಸುತ್ತಿದ್ದಾರೆ. ದಿವಂಗತ ರೈತ-ಕಾರ್ಮಿಕ ನಾಯಕ, ಚುಟುಕು ಬ್ರಹ್ಮ ದಿನಕರ ದೇಸಾಯಿ ನೆಚ್ಚಿ ದಾಖಲಾಗಿರುವ ವಿಶಿಷ್ಟ ಗ್ರಾಮ ಇದು. ವಿಪರ್ಯಾಸ ನೋಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜನರೀಗ ಅತಂತ್ರರಾಗುವಂತಾಗಿದೆ! ಸಂತ್ರಸ್ತರಾಗುವ ಸಂಕಟದಲ್ಲಿರುವ ಅಲಗೇರಿ ಭಾಗದವರು ಹೋರಾಟ-ಪ್ರತಿಭಟನೆಗೆ ಅಣಿಯಾಗಿದ್ದಾರೆ.

ಅಂಕೋಲ-ಕಾರವಾರ ನಡುವೆ ಏಷ್ಯಾದಲ್ಲೇ ಅತ್ಯಂತ ದೊಡ್ಡ ನೌಕಾನೆಲೆ ತಲೆಯೆತ್ತಿದೆ. ಅಂದರೆ ಅಲಗೇರಿ ಅಂಚಿನಲ್ಲಿ ನಿಂತಿದೆ. ಈ ಕದಂಬ ನೌಕಾನೆಲೆಗೆ ಯುದ್ಧ ವಿಮಾನ ನಿಲ್ದಾಣ ಜರೂರ್ ಬೇಕಾಗಿದೆ. ಯುದ್ಧ ವಿಮಾನ ನಿಲ್ದಾಣ ಎಂದರೆ ಜನ ತಿರುಗಿ ಬೀಳಬಹುದೆಂಬ ಲೆಕ್ಕಾಚಾರ ಹಾಕಿರುವ ಪ್ರಭುತ್ವ ಪಂಡಿತ ಶಿಖಾಮಣಿಗಳು ಈ ವಿಮಾನ ನಿಲ್ದಾಣ ಟೂ ಇನ್ ಒನ್ ಎನ್ನುತ್ತಿದ್ದಾರೆ. ಈ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ನಾಗರಿಕ ಯಾನ ಏರ್‌ಪೋರ್ಟ್‌ಗೂ ಅವಕಾಶವಿದೆ ಅಂತಿದ್ದಾರೆ. ಅಲಗೇರಿ, ಭಾವಿಕೇರಿ, ಬೆಲೇಕೇರಿ ಏರಿಯಾದ ಬರೋಬ್ಬರಿ 202 ಎಕರೆ ಭೂಸ್ವಾಧೀನಕ್ಕೆ ರಕ್ಷಣಾ ಇಲಾಖೆ ಸ್ಕೆಚ್ ಹಾಕಿದೆ. ಅದಕ್ಕಾಗಿ ಅಲಗೇರಿಯ 160 ಎಕರೆ, ಭಾವಿಕೇರಿಯ 12 ಎಕರೆ ಮತ್ತು ಬೇಲೇಕೇರಿಯ 30 ಎಕರೆ ಭೂ ಪ್ರದೇಶದಲ್ಲಿ ಸರ್ವೆ ಕೂಡ ಮಾಡಿಮುಗಿಸಿಲಾಗಿದೆ.

1983ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ನೌಕಾನೆಲೆಗೆ ಅಡಿಗಲ್ಲು ಇಡುವಾಗಿ “ನಿರಾಶ್ರಿತರಾಗುವ ಮಂದಿಯ ಕಣ್ಣಲ್ಲಿ ಒಂದೇ ಒಂದು ಹನಿ ನೀರು ಬರದಂತೆ ನೋಡಿಕೊಳ್ಳುತ್ತೇವೆ” ಎಂದಿದ್ದರು. ಆದರೆ ನೌಕಾನೆಲೆ ಕಾಮಗಾರಿ ಶುರುವಾಗುತ್ತಿದ್ದಂತೆಯೇ ಕಾರವಾರ-ಅಂಕೋಲೆಯಲ್ಲಿ ಸಂತ್ರಸ್ತರ ಕಂಬನಿಯ ಕೋಡಿಯೇ ಮೂರು ದಶಕಗಳ ಕಾಲ ಹರಿದಿದೆ!! ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡ ರಕ್ಷಣಾ ಇಲಾಖೆ ನಿಗದಿ ಪಡಿಸಿದ ಪರಿಹಾರ ಮೊತ್ತ ಎಷ್ಟು ಗೊತ್ತೇ? ಪ್ರತಿ ಗುಂಟೆಗೆ ಕೇವಲ 150ರೂ!!!

ಅಮಾಯಕ ನಿರಾಶ್ರಿತರನ್ನು ಬೆಳೆ ತೆಗೆಯಲಾಗದ, ಕುಲಕಸುಬು ಕಟ್ಟಿಕೊಳ್ಳಲಾಗದ ಬರಡು ಪುನರ್ವಸತಿ ಕೇಂದ್ರಕ್ಕೊಯ್ದು ಬಿಡಲಾಗಿತ್ತು. ಅಕ್ಷರಶಃ ನೀರಿಂದ ತೆಗೆದು ದಂಡೆಗೊಗೆದ ಮೀನಿನಂತಾಗಿದ್ದ ಈ ನಿರಾಶ್ರಿತರ ನೆರವಿಗೆ ಯಾವ ಅಧಿಕಾರಸ್ಥ ಪುಢಾರಿಯೂ ಬರಲಿಲ್ಲ. ಮನೆಗೊಂದು ಉದ್ಯೋಗ, ಸೂಕ್ತ ಪರಿಹಾರ, ನಿರಾಶ್ರಿತರ ಕೋಟಾ ಘೋಷಣೆ ಮಾಡಿದ್ದ ನಾಲಾಯಕ್ ಜನಪ್ರತಿನಿಧಿಗಳು, ಹೊಣೆಗೇಡಿ ಅಧಿಕಾರಗಳು ನಾಪತ್ತೆಯಾಗಿದ್ದರು. ದೇಶ ಕಟ್ಟಲಿಕ್ಕೇ ಹುಟ್ಟಿದ್ದೇನೆಂಬಂತೆ ಪೊಕ್ಕು ವೀರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗಂತೂ ಈ ನೆಲೆ ಕಳಕೊಂಡವರ ಗೋಳು ಕೊನೆವರೆಗೂ ಕೇಳಿಸಲಿಲ್ಲ.

ಹೆಚ್ಚುವರಿ ಪರಿಹಾರಕ್ಕಾಗಿ ಸಂತ್ರಸ್ತರು 35 ವರ್ಷ ಕಾನೂನು ಹೋರಾಟ ನಡೆಸಿ ಗೆದ್ದಿದ್ದಾರೆ. ಈಗ ಪರಿಹಾರ ಪಡೆಯುತ್ತಿದಾರೆ. ಈ ಕ್ರೆಡಿಟ್ ತಮ್ಮದೆಂದು ಸಂಸದ ಮಾಣಿ, ಮಾಜಿ ಮಂತ್ರಿ ದೇಶಪಾಂಡೆ ಹಲಬುತ್ತಿರುವುದು ಹಾಸ್ಯಾಸ್ಪದವಾಗಿದೆ. ಇದೇ ಸಮುದಾಯವನ್ನು ವಿಮಾನ ನಿಲ್ದಾಣದ ಗುಮ್ಮ ಕಾಡತೊಡಗಿದೆ. ವಿಮಾನ ನಿಲ್ದಾಣಕ್ಕೆ 500 ಎಕರೆ ಭೂಮಿ ಬೇಕು. ಒಂದು ಗುಂಟೆ ಜಾಗದಲ್ಲಿ ಎರಡು-ಮೂರು ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಬದುಕುತ್ತಿವೆ. ಫಲವತ್ತಿದ ಕೃಷಿ ಭೂಮಿ, ತೆಂಗಿನ ಮರಗಳ ತೋಟವಿದೆ. ಕೂಲಿ ನಾಲಿ ಮಾಡಿ, ಮೀನುಗಾರಿಕೆ ನಡೆಸಿ, ಸಣ್ಣ-ಪುಟ್ಟ ಉದ್ಯಮ ನಡೆಸಿ ತಲತಲಾಂತರದಿಂದ ಜನ ಜೀವಿಸುತ್ತಿದ್ದಾರೆ. ಇದನ್ನೆಲ್ಲಾ ವಿಮಾನ ನಿಲ್ದಾಣ ಆಪೋಷನ ಪಡೆಯಲಿದೆ.

ಈ ವಿಮಾನ ನಿಲ್ದಾಣದ ಬಗ್ಗೆ ಯಾವ ವರದಿ, ಯೋಜನೆ ನಕ್ಷೆ ಸ್ವಾಧೀನವಾಗುವ ಭೂಮಿ ಬಗ್ಗೆ ಯಾವ ವಿವರವನ್ನೂ ಆಳುವವರು ಮತ್ತವರ ಅಧಿಕಾರ ಗ್ಯಾಂಗು ಬಹಿರಂಗ ಪಡಿಸುತ್ತಿಲ್ಲ. ಜಿಲ್ಲಾಡಳಿತ ಅಧ್ಯಯನ ವರದಿಯನ್ನು ಜನರ ಮುಂದಿಡುತ್ತಿಲ್ಲ. ಎಲ್ಲವೂ ಗುಪ್ತ ಗುಪ್ತ ಏಕೆ? ಕೃಷಿಯನ್ನೇ ನಂಬಿ ಬದುಕಿರುವ ಜನರ ಬೀದಿಪಾಲು ಮಾಡುವ ಈ ಪ್ರಳಯಾಂತಕ ಯೋಜನೆ ಬಂದರೆ 500 ಎಕರೆ ಪ್ರದೇಶದಲ್ಲಿ ಕಾಂಕ್ರಿಟ್ ಮೈದಾನ ಆಗುತ್ತದೆ. ಮಳೆಗಾಲದಲ್ಲಿ ನೀರಿಂಗಲು ಅವಕಾಶವೇ ಇರದು. ಈಗ ಬೀಳುವ ಮಳೆಗೆ ಕೇಣಿ ಹಳ್ಳ, ಬಾಳೆಗುಳಿ ಹೊಳೆಗೆ ಪ್ರವಾಹ ಬಂದು ಸುತ್ತಲಿನ ಊರು-ಕೇರಿ ಮುಳುಗುತ್ತದೆ. ವಿಮಾನ ನಿಲ್ದಾಣವಾದರೆ ಅಂಕೋಲೆಯಲ್ಲಿ ಜಲಪ್ರಳಯ ಗ್ಯಾರಂಟಿ.

ಹಲವು ಹಾನಿಗೆ ಕಾರಣವಾಗುವ ಈ ಸದ್ರಿ ವಿಮಾನ ನಿಲ್ದಾಣ ಬೇಡವೆಂದು ಜನ ಪ್ರತಿಭಟನೆಗೆ ಇಳಿದಿದ್ದಾರೆ. ಶಾಂತವಾಗಿರುವ ಅಂಕೋಲೆಯಲ್ಲಿ ಕ್ರಾಂತಿ ಆಗುವ ಮೊದಲೆ ಜಿಲ್ಲಾಡಳಿತ, ಸ್ಥಳೀಯ ಶಾಸಕಿ ರೂಪಾಲಿಯಮ್ಮ ಎಚ್ಚೆತ್ತುಕೊಳ್ಳುವರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...