Homeಕರ್ನಾಟಕವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ...

ವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ…

- Advertisement -
- Advertisement -

ಮೊನ್ನೆ ರಾತ್ರಿ 11 ಗಂಟೆ ಹೊತ್ತು. ಮೈಸೂರಿನ ಕುವೆಂಪು ನಗರದ ಪೊಲೀಸ್ ಠಾಣೆಯ ಪೊಲೀಸರು ಗದಗಿನ ಒಂದು ಪುಸ್ತಕ ಪ್ರಕಾಶನದ ಪುಟ್ಟ ಆಫೀಸಿನ ಬಾಗಿಲು ಬಡಿದರು!

ಅಲ್ಲಿಗೆ ನ್ಯಾಯಾಧೀಶರ ವಾರ್ ಅ್ಯಂಡ್ ಪೀಸ್ ಅಜ್ಞಾನ ಪೊಲೀಸರ ಮೂಲಕ ಮೈಸೂರಿನಿಂದ 500 ಕಿ.ಮೀ ದೂರದ ಗದಗಿಗೂ ಬಂತು. ಮಧ್ಯ ಅದು ಬೆಂಗಳೂರು ದಾಟಿಯೇ ಬಂತು!

ಹೊಸ ಸರ್ಕಾರದ ಬಂದಿದೆ. ಈಗಷ್ಟೇ ಆಟ ಶುರುವಾಗಿದೆ, ಬರಹಗಾರರು, ಪ್ರಕಾಶಕರು ಮತ್ತು ಜನಸ್ನೇಹಿ ಪತ್ರಕರ್ತರು ಎಚ್ಚೆತ್ತುಕೊಳ್ಳುವ ಸಮಯವಿದು.

ಪ್ರಗತಿಪರ ನಿಲುವಿನ ವಿಚಾರಧಾರೆಗಳನ್ನು ಪ್ರಕಟಿಸುತ್ತ ಬಂದಿರುವ ಗದಗಿನ ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿರವರ ವಿಚಾರಣೆಗೆ ರಾತ್ರಿ 11 ಗಂಟೆಗೆ ಆಗಮಿಸುವ ಮೈಸೂರು ಪೊಲೀಸರು, ಪುಸ್ತಕವೊಂದರ ಬಗ್ಗೆ ವಿಚಾರಣೆ ನಡೆಸಿ, ಪ್ರಕಾಶಕರು ಎರಡು ಮೂರು ದಿನದಲ್ಲಿ ಮೈಸೂರಿನ ಪೊಲೀಸ್ ಸ್ಟೇಷನ್‍ಗೆ ವಿಚಾರಣೆಗೆ ಬರಬೇಕು ಎಂದು ಆದೇಶ ಮಾಡಿ ಹೋಗಿದ್ದಾರೆ!

‘ರಾಮ ಮಂದಿರ ಏಕೆ ಬೇಡ?’ ಎಂಬ ಪುಸ್ತಕವನ್ನು ಮೈಸೂರಿನ ಕೆ.ಎಸ್ ಭಗವಾನ್ ಬರೆದಿದ್ದರು. ಅದನ್ನು ಕಳೆದ ವರ್ಷ ಬಸವರಾಜ ಸೂಳಿಭಾವಿ (ಬಸೂ) ಅವರ ಲಡಾಯಿ ಪ್ರಕಾಶನ ಪ್ರಕಟಿಸಿತು. ಹೋದ ವರ್ಷದ ಡಿಸೆಂಬರ್ ನಲ್ಲಿ ಆ ಪುಸ್ತಕದ ಎರಡನೇ ಮುದ್ರಣ ಹಾಕಿದ ಭಗವಾನ್ ಅವರು (ಇದನ್ನು ಅವರು ಲಡಾಯಿ ಪ್ರಕಾಶನದ ಅನುಮತಿ ಪಡೆಯದೇ ಮಾಡಿದರು ಎಂಬ ಆರೋಪವಿದೆ, ಅದು ಬೇರೆ ವಿಷಯ), ಅದರ ಬಿಡುಗಡೆ ಸಮಾರಂಭದಲ್ಲಿ ‘ಪ್ರಚೋದನಾತ್ಮಕ’ವಾಗಿ ಮಾತಾಡಿದರು ಎಂದು ಒಬ್ಬರು ದೂರು ನೀಡಿದ್ದರು.

ಇಲ್ಲಿವರೆಗೆ ಸುಮ್ಮನಿದ್ದ ಪೊಲೀಸರು ದಿಢೀರ್ ಅಂತಾ ಅಲರ್ಟ್ ಆಗಿಬಿಟ್ಟು ಮೈಸೂರಿಂದ ಗದಗಿಗೆ ಬಂದು ರಾದ್ಧಾಂತ ಮಾಡಿ ಹೋಗಿದ್ದಾರೆ. ಭಗವಾನ್ ‘ಪ್ರಚೋದನಾತ್ಮಕ’ವಾಗಿ ಮಾತಾಡಿದ್ದರೆ ಅವರನ್ನೇ ಅದೇ ಮೈಸೂರಲ್ಲಿ ವಿಚಾರಿಸಬೇಕಿತ್ತಲ್ಲ? ಅದು ಬಿಟ್ಟು ಪುಸ್ತಕ ಮೊದಲ ಬಾರಿಗೆ ಆ ಪ್ರಕಟಿಸಿದವರ ಕಚೇರಿಗೆ ರಾತ್ರೋರಾತ್ರಿ ದಾಳಿ ಇಡುವುದು, ವಿಚಾರಣೆಗೆ ಬನ್ನಿ ಅನ್ನುವುದು ಏನನ್ನು ಸೂಚಿಸುತ್ತದೆ?
ವಾರ್ ಅ್ಯಂಡ್ ಪೀಸ್ ಶುರುವಾಗಿದೆ ಸೈಲೆಂಟ್ ಯುದ್ಧ… ಶಾಂತಿ ಅಂತಾ ಕೂತುಬಿಡೋಣವೇ ಬರಹಗಾರರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...