Homeಕರ್ನಾಟಕವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ...

ವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ…

- Advertisement -
- Advertisement -

ಮೊನ್ನೆ ರಾತ್ರಿ 11 ಗಂಟೆ ಹೊತ್ತು. ಮೈಸೂರಿನ ಕುವೆಂಪು ನಗರದ ಪೊಲೀಸ್ ಠಾಣೆಯ ಪೊಲೀಸರು ಗದಗಿನ ಒಂದು ಪುಸ್ತಕ ಪ್ರಕಾಶನದ ಪುಟ್ಟ ಆಫೀಸಿನ ಬಾಗಿಲು ಬಡಿದರು!

ಅಲ್ಲಿಗೆ ನ್ಯಾಯಾಧೀಶರ ವಾರ್ ಅ್ಯಂಡ್ ಪೀಸ್ ಅಜ್ಞಾನ ಪೊಲೀಸರ ಮೂಲಕ ಮೈಸೂರಿನಿಂದ 500 ಕಿ.ಮೀ ದೂರದ ಗದಗಿಗೂ ಬಂತು. ಮಧ್ಯ ಅದು ಬೆಂಗಳೂರು ದಾಟಿಯೇ ಬಂತು!

ಹೊಸ ಸರ್ಕಾರದ ಬಂದಿದೆ. ಈಗಷ್ಟೇ ಆಟ ಶುರುವಾಗಿದೆ, ಬರಹಗಾರರು, ಪ್ರಕಾಶಕರು ಮತ್ತು ಜನಸ್ನೇಹಿ ಪತ್ರಕರ್ತರು ಎಚ್ಚೆತ್ತುಕೊಳ್ಳುವ ಸಮಯವಿದು.

ಪ್ರಗತಿಪರ ನಿಲುವಿನ ವಿಚಾರಧಾರೆಗಳನ್ನು ಪ್ರಕಟಿಸುತ್ತ ಬಂದಿರುವ ಗದಗಿನ ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿರವರ ವಿಚಾರಣೆಗೆ ರಾತ್ರಿ 11 ಗಂಟೆಗೆ ಆಗಮಿಸುವ ಮೈಸೂರು ಪೊಲೀಸರು, ಪುಸ್ತಕವೊಂದರ ಬಗ್ಗೆ ವಿಚಾರಣೆ ನಡೆಸಿ, ಪ್ರಕಾಶಕರು ಎರಡು ಮೂರು ದಿನದಲ್ಲಿ ಮೈಸೂರಿನ ಪೊಲೀಸ್ ಸ್ಟೇಷನ್‍ಗೆ ವಿಚಾರಣೆಗೆ ಬರಬೇಕು ಎಂದು ಆದೇಶ ಮಾಡಿ ಹೋಗಿದ್ದಾರೆ!

‘ರಾಮ ಮಂದಿರ ಏಕೆ ಬೇಡ?’ ಎಂಬ ಪುಸ್ತಕವನ್ನು ಮೈಸೂರಿನ ಕೆ.ಎಸ್ ಭಗವಾನ್ ಬರೆದಿದ್ದರು. ಅದನ್ನು ಕಳೆದ ವರ್ಷ ಬಸವರಾಜ ಸೂಳಿಭಾವಿ (ಬಸೂ) ಅವರ ಲಡಾಯಿ ಪ್ರಕಾಶನ ಪ್ರಕಟಿಸಿತು. ಹೋದ ವರ್ಷದ ಡಿಸೆಂಬರ್ ನಲ್ಲಿ ಆ ಪುಸ್ತಕದ ಎರಡನೇ ಮುದ್ರಣ ಹಾಕಿದ ಭಗವಾನ್ ಅವರು (ಇದನ್ನು ಅವರು ಲಡಾಯಿ ಪ್ರಕಾಶನದ ಅನುಮತಿ ಪಡೆಯದೇ ಮಾಡಿದರು ಎಂಬ ಆರೋಪವಿದೆ, ಅದು ಬೇರೆ ವಿಷಯ), ಅದರ ಬಿಡುಗಡೆ ಸಮಾರಂಭದಲ್ಲಿ ‘ಪ್ರಚೋದನಾತ್ಮಕ’ವಾಗಿ ಮಾತಾಡಿದರು ಎಂದು ಒಬ್ಬರು ದೂರು ನೀಡಿದ್ದರು.

ಇಲ್ಲಿವರೆಗೆ ಸುಮ್ಮನಿದ್ದ ಪೊಲೀಸರು ದಿಢೀರ್ ಅಂತಾ ಅಲರ್ಟ್ ಆಗಿಬಿಟ್ಟು ಮೈಸೂರಿಂದ ಗದಗಿಗೆ ಬಂದು ರಾದ್ಧಾಂತ ಮಾಡಿ ಹೋಗಿದ್ದಾರೆ. ಭಗವಾನ್ ‘ಪ್ರಚೋದನಾತ್ಮಕ’ವಾಗಿ ಮಾತಾಡಿದ್ದರೆ ಅವರನ್ನೇ ಅದೇ ಮೈಸೂರಲ್ಲಿ ವಿಚಾರಿಸಬೇಕಿತ್ತಲ್ಲ? ಅದು ಬಿಟ್ಟು ಪುಸ್ತಕ ಮೊದಲ ಬಾರಿಗೆ ಆ ಪ್ರಕಟಿಸಿದವರ ಕಚೇರಿಗೆ ರಾತ್ರೋರಾತ್ರಿ ದಾಳಿ ಇಡುವುದು, ವಿಚಾರಣೆಗೆ ಬನ್ನಿ ಅನ್ನುವುದು ಏನನ್ನು ಸೂಚಿಸುತ್ತದೆ?
ವಾರ್ ಅ್ಯಂಡ್ ಪೀಸ್ ಶುರುವಾಗಿದೆ ಸೈಲೆಂಟ್ ಯುದ್ಧ… ಶಾಂತಿ ಅಂತಾ ಕೂತುಬಿಡೋಣವೇ ಬರಹಗಾರರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...